• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಆನಂದ ಗಣಚಾರಿ ಕ.ನಿ.ಪ ಸಂಘದ ಖಜಾಂಚಿ ಅವಿರೋಧವಾಗಿ ಆಯ್ಕೆ.

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ಇಂಡಿ : ಹಿರಿಯ ಪತ್ರಕರ್ತ ಪೂಜಾರ ಇನ್ನಿಲ್ಲ..!

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್

      Voiceofjanata.in

      May 22, 2025
      0
      ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್

       

       

      ವಿಜಯಪುರ : ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ನೀಡಲಾದ ಸಲಹೆ-ಸೂಚನೆಗಳನ್ನು ಜಿಲ್ಲೆಯಾದ್ಯಂತ ಪಾಲಿಸುವಂತೆ ಹಾಗೂ ಸಾರ್ವಜನಿಕರಿಗೆ ಅಗತ್ಯ ಜಾಗೃತಿ ಮೂಡಿಸುವ ಮೂಲಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.

       

      ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಮಳೆಯಿಂದಾಗುವ ಹಾನಿ ತಡೆಗಟ್ಟಲು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಕುರಿತು ಎಲ್ಲಾ ತಾಲೂಕಿನಿಂದ ನಡೆದ ವಿಡಿಯೋ ಸಂವಾದ ಸಭೆಯಲ್ಲಿ ಈ ಸೂಚನೆ ನೀಡಿದರು.ಗುಡುಗು ಮತ್ತು ಸಿಡಿಲಿನ ಅಪಾಯ ತಗ್ಗಿಸಲು ಸಾಮಾನ್ಯವಾಗಿ ಸಿಡಿಲಿಗೆ ತುತ್ತಾಗುವ ಸ್ಥಳಗಳನ್ನು ಗುರುತಿಸಿ, ಸಾರ್ವಜನಿಕ ಆಸ್ತಿ, ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸಬೇಕು. ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹಾಗೂ ಇಂಡಿಯನ್ ಮೆಟ್ರಾಲಾಜಿಕಲ್ ಇಲಾಖೆಯ ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ತಿಳುವಳಿಕೆ ಮೂಡಿಸುವುದು ಹಾಗೂ ಈ ಕುರಿತು ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯತಿಗಳ ಮೂಲಕ ಮಾಹಿತಿ ನೀಡುವುದು ಮತ್ತು ಜಾಗೃತಿ ಮೂಡಿಸುವುದು.
      ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನ ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರ, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವುದು.

      ಕೃಷಿ ಇಲಾಖೆಯ ಅಧಿಕಾರಿ-ನೌಕರರು ರೈತ ಸಂಪರ್ಕ ಕೇಂದ್ರಗಳು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ಅಧಿಕಾರಿ-ಸಿಬ್ಬಂದಿಗಳು, ಗುಡುಗು ಸಿಡಿಲು ಸಂದರ್ಭದಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೃಷಿಕರಿಗೆ, ಕುರಿ ಮೇಕೆ ಹಾಗೂ ಇತರೆ ಜಾನುವಾರುಗಳ ಸಾಕಾಣಿಕೆದಾರರಿಗೆ ಸೂಕ್ತ ಅರಿವು ಮೂಡಿಸಬೇಕು ಎಂದು ಅವರು ಸೂಚನೆ ನೀಡಿದರು.
      ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆ: ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಹಾಗೂ ಕಾಮನ್ ಅಲರ್ಟ್ ಪ್ರೋಟೋಕಾಲ್ ಮೂಲಕ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು, ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು. ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತಲ್ಲ, ಸುರಕ್ಷಿತವಾದ ಕಟ್ಟಡಗಳ ಆಶ್ರಯ ಪಡೆಯುವುದು, ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು, ತಗ್ಗು ಪ್ರದೇಶದಲ್ಲಿ ಆಶ್ರಯ ಪಡೆಯುವುದು, ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು, ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ್ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

      ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು, ಗುಂಪಿನಲ್ಲಿದ್ದರೆ ಅಪಾಯವನ್ನ ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು, ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು, ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು, ಅರಣ್ಯ ಪ್ರದೇಶದಲ್ಲಿದ್ದರೆ ಚಿಕ್ಕ-ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು,ಲೋಹದ ವಸ್ತುಗಳು, ದ್ವಿಚಕ್ರ ವಾಹನ, ದೂರವಾಣಿ ಬಳಸಬಾರದು, ತಂತಿ ಬೇಲಿ ಯಂತ್ರಗಳಿAದ ದೂರವಿರುವುದು, ಕಬ್ಬಿಣದ ಸರಳುಗಳ್ಳುಳ್ಳ ಛತ್ರಿಗಳನ್ನು ಬಳಸಬಾರದು. ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಸಂಪರ್ಕದಿAದ ದೂರವಿರುವುದು, ಮಕ್ಕಳು ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸಬೇಕು.

      ಗುಡುಗು ಸಿಡಿಲಿನ ಸಂದರ್ಭದಲ್ಲಿ ಹಾರುವ ಮತ್ತು ಅಪಘಾತಕ್ಕೆ ಕಾರಣವಾಗಬಹುದಾದ ಮರದ ಕಟ್ಟಿಗೆ ಅಥವಾ ಇತರೆ ಯಾವುದೇ ಅವಶೇಷಗಳನ್ನು ತೆಗೆದುಹಾಕಬಾರದು, ಕಟ್ಟಡದ ಕೊಳಾಯಿ ಮತ್ತು ಲೋಹದ ಕೊಳವೆಗಳ ಮೂಲಕ ಹರಿಯುವ ಸಾಧ್ಯತೆ ಇರುವುದರಿಂದ ಸಿಡಿಲು ಉಂಟಾಗುವ ಸಂದರ್ಭದಲ್ಲಿ ಸ್ನಾನ ಮತ್ತು ಶವರ ತೆಗೆದುಕೊಳ್ಳಬಾರದು, ಪಾತ್ರೆ ತೊಳೆಯಬಾರದು, ಬಟ್ಟೆ ಒಗೆಯಬಾರದು, ಆಟದ ಮೈದಾನ, ಉದ್ಯಾನವನಗಳು, ಈಜುಕೊಳ ಮತ್ತು ಕಡಲ ತೀರಗಳಿಗೆ ಹೋಗುವುದನ್ನು ತಪ್ಪಿಸಬೇಕು. ಮಿಂಚಿನ ಒಡೆತದಿಂದಾಗಿ ಕಾಡ್ಗಿಚ್ಚು ಸಂಭವಿಸುವ ಸಾಧ್ಯತೆ ಇರುವುದರಿಂದ ಅರಣ್ಯ ಪ್ರದೇಶದಿಂದ ದೂರವಿದ್ದು ಗಿಡ ಗಡ್ಡೆಗಳಿಲ್ಲದ ಸ್ವಚ್ಛ ಪ್ರದೇಶದ ಕಡೆಗೆ ಚಲಿಸುವುದೂ ಸೇರಿದಂತೆ ವಿವಿಧ ಸಲಹೆಗಳನ್ನು ನೀಡಲಾಗಿದೆ.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತçದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Authority's advice to avoid the risk of thunder and thunder: District Collector Bhubalan#indi / vijayapur#Public News#State News#Today News#Voice Of Janata#Voiceofjanata.in#ಗುಡುಗು ಮತ್ತು ಸಿಡಿಲಿನ ಅಪಾಯ ತಪ್ಪಿಸಲು ಪ್ರಾಧಿಕಾರದ  ಸಲಹೆ-ಸೂಚನೆ ಪಾಲಿಸಿ : ಜಿಲ್ಲಾಧಿಕಾರಿ ಭೂಬಾಲನ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      ಮನುಷ್ಯ ಜೀವನ‌‌ ಸಾಮನ್ಯದಲ್ಲ..! ಅಮೃತಾನಂದ ಶ್ರೀಗಳು

      December 16, 2025
      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ವಿಧಿವಶ..!

      December 14, 2025
      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      ಆಲೂರ – ನಾಲತವಾಡ ಮುಖ್ಯ ರಸ್ತೆ ದುರಸ್ತಿಗೆ ಗಡುವು..!

      December 11, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.