• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಪ್ರಪಂಚ

      ನಂದಿ ಆಧಾರಿತವಾಗಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಸಂಕಲ್ಪ ಕಾರ್ಯಕ್ರಮಕ್ಕೆ ಕಾರ ಹುಣ್ಣಿಮೆಯಂದು ಚಾಲನೆ

      Voiceofjanata.in

      June 12, 2025
      0
      ನಂದಿ ಆಧಾರಿತವಾಗಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಸಂಕಲ್ಪ ಕಾರ್ಯಕ್ರಮಕ್ಕೆ ಕಾರ ಹುಣ್ಣಿಮೆಯಂದು ಚಾಲನೆ
      0
      SHARES
      47
      VIEWS
      Share on FacebookShare on TwitterShare on whatsappShare on telegramShare on Mail

      ನಂದಿ ಆಧಾರಿತವಾಗಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಸಂಕಲ್ಪ ಕಾರ್ಯಕ್ರಮಕ್ಕೆ ಕಾರ ಹುಣ್ಣಿಮೆಯಂದು ಚಾಲನೆ

       

      ವಿಜಯಪುರ : ‘ನಂದಿ ಕೂಗು’ ಅಭಿಯಾನದ ಅಡಿಯಲ್ಲಿ ನಂದಿ ಆಧಾರಿತ ಗ್ರಾಮ‌ ಪಂಚಾಯತಿ ಚುನಾವಣೆ ನಡೆಯಬೇಕಾದ ಅವಶ್ಯಕತೆ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ “ನಮ್ಮ ಗ್ರಾಮ-ನಮ್ಮ ನಂದಿ ಸಂಪತ್ತು” ಕಾರ್ಯಕ್ರಮಕ್ಕೆ ಬೋರಣಾಪುರ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಚಾಲನೆ ನೀಡಲಾಯಿತು‌.

       

      ನಂದಿ ಕೂಗು ಅಭಿಯಾನದ ರೂವಾರಿಗಳಾದ ಬಸವರಾಜ ಬಿರಾದಾರ ಅವರು ಮಾತನಾಡಿ, ಗ್ರಾಮಗಳಲ್ಲಿ ನಂದಿ ಸಂಪತ್ತನ್ನು ಹೆಚ್ಚಿಸುವ ಉದ್ದೇಶದಿಂದ ‘ನಂದಿ ಕೂಗು’ ಅಭಿಯಾನವು ಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮೀಜಿಯವರ ಪ್ರೇರಣೆಯಿಂದ ಅವರ ಜನ್ಮ‌ ಸ್ಥಳವಾದ ಬಿಜ್ಜರಗಿಯಿಂದ ಪ್ರಾರಂಭವಾಗಿದೆ. ಗ್ರಾಮಗಳಲ್ಲಿ ಕಳೆದ‌ 20 ವರ್ಷಗಳಲ್ಲಿ 80 ಪ್ರತಿಶತ ನಂದಿ ಸಂಪತ್ತು‌ ನಾಶವಾಗಿದೆ. ಗ್ರಾಮಗಳಲ್ಲಿ ನಂದಿ ಸಂಪತ್ತು‌ ನಾಶವಾದಂತೆ ರೈತರ ಸಾಲ ಹೆಚ್ಚುತ್ತಿದೆ. ಇದು ಹೀಗೆಯೇ ಮುಂದುವರೆದರೆ, ಕೃಷಿ ಅವಲಂಬಿತ ಉದ್ದಿಮೆಗಳಾದ ಸಕ್ಕರೆ ಕಾರ್ಖಾನೆ, ರೈಸ್ ಮಿಲ್ಸ್, ದಾಲ್ ಮಿಲ್ಸ್ ಹಾಗೂ ಇತರ ಉದ್ದಿಮೆಗಳು ಅವನತಿ ಹೊಂದಲು ಪ್ರಾರಂಭಿಸುತ್ತವೆ. ನಂದಿ ಸಂಪತ್ತು ಉಳಿದರೆ ಪಶು ಸಂಪತ್ತು ಉಳಿದು ತಿಪ್ಪೆ ಗೊಬ್ಬರ ಎಲ್ಲ ರೈತರಿಗೆ ದೊರೆಯುವುದು. ಈಗಾಗಲೇ ಹಲವು ವಾಣಿಜ್ಯ ಬೆಳೆಗಳಿಗೆ ತಿಪ್ಪೆ ಗೊಬ್ಬರ ಸಿಗದ ಪರಿಸ್ಥಿತಿ ನಿರ್ಮಾಣವಾಗಿ ಬೆಳೆಗಳಿಗೆ ರೋಗ ಹಾಗೂ ಕೀಟ ಬಾಧೆ ಹೆಚ್ಚಾಗುತ್ತಿದೆ.

       

      ಗ್ರಾಮಗಳಲ್ಲಿ ರೈತ ಸಮುದಾಯ ಉಳಿಯಬೇಕಾದರೆ ನಂದಿ ಸಂಪತ್ತನ್ನು ಹೆಚ್ಚಿಸುವ ಅವಶ್ಯಕತೆ ಬಂದೊದಗಿದೆ. ಅದಕ್ಕಾಗಿ, ಮುಂಬರುವ ಗ್ರಾಮ‌ ಪಂಚಾಯತಿ ಚುನಾವಣೆಯ ಮುಖ್ಯ ವಿಷಯ ಗ್ರಾಮದ ನಂದಿ ಸಂಪತ್ತನ್ನು ಹೆಚ್ಚಿಸುವುದು ಆಗಬೇಕಾಗಿದೆ. ಸರ್ಕಾರಿ ಹಾಗೂ ಖಾಸಗಿ ನೌಕರರಿಗೆ ಆರ್ಥಿಕ ಭದ್ರತೆ ಇರುವುದರಿಂದ ಆ ಕಡೆ ಎಲ್ಲರೂ ಕೂಡ ಮುಖ‌ಮಾಡುತ್ತಿದ್ದಾರೆ. ವರ್ಷಪೂರ್ತಿ ಶ್ರಮವಹಿಸಿ ದುಡಿಯುವ ಜೋಡೆತ್ತಿನ ರೈತರಿಗೆ ಯಾವುದೇ ಆರ್ಥಿಕ‌ ಭದ್ರತೆ ಇರದೇ ಇರುವುದರಿಂದ ಜೊಡೆತ್ತಿನ ಕೃಷಿ ತ್ಯಜಿಸುತ್ತಿದ್ದಾರೆ. ಇದರಿಂದಾಗಿ ನಂದಿ ಸಂಪತ್ತು ಕಾಸಾಯಿಖಾನೆಯ ಪಾಲಾಗುವುದು ಹೆಚ್ಚಾಗುತ್ತಿದೆ. ಅದಕ್ಕಾಗಿ, ಸರ್ಕಾರವು ನಂದಿ ಕೃಷಿಕರಿಗಾಗಿ ಪ್ರತಿ ವರ್ಷ 10 ಪ್ರತಿಶತ ಬಡ್ಜೆಟ್ ಮೀಸಲಿರಿಸಿ ಪ್ರತಿ ಜೋಡೆತ್ತಿನ ರೈತರಿಗೆ ಪ್ರತಿ ತಿಂಗಳು ರೂ. 11000 ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತಂದರೆ, ಮುಂದಿನ ಒಂದು ವರ್ಷದಲ್ಲಿ ಪ್ರತಿ ಗ್ರಾಮಗಳಲ್ಲಿ ನಂದಿ ಸಂತತಿ ದ್ವಿಗುಣವಾಗುವುದು. ಅದಕ್ಕಾಗಿ, ಗ್ರಾಮಗಳಲ್ಲಿರುವ ಹಲವು ಪ್ರಜ್ಞಾವಂತರು ಒಂದಾಗಿ ನಂದಿಗಾಗಿ ಮತ ಮೀಸಲಿಡುವ ಸಂಕಲ್ಪ ಮಾಡಿ ಇತರರಿಗೆ ಜಾಗೃತಿ‌ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ.

       

      ಗ್ರಾಮದ ಭವಿಷ್ಯ ನಂದಿ ಸಂಪತ್ತಿನ ಮೇಲೆ ನಿಂತಿದೆ ಎಂಬುದನ್ನು ಕಾರ ಹುಣ್ಣಿಮೆ‌, ಮಣ್ಣೆತ್ತಿನ ಅಮವಾಸ್ಯೆ ಹಾಗೂ ಇತರ ನಂದಿ ಆಧಾರಿತ ಆಚರಣೆಗಳು ತಿಳಿಸುತ್ತವೆ. ಹಾಗಾಗಿ, ಪ್ರತಿಯೊಂದು ಗ್ರಾಮದಲ್ಲಿರುವ ಪ್ರಜ್ಞಾವಂತರು ತಮ್ಮ ಗ್ರಾಮದ ನಂದಿ ಸಂಪತ್ತನ್ನು ಹೆಚ್ಚಿಸುವುದಕ್ಕಾಗಿ ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಬಳಸಿಕೊಳ್ಳಲು ವಿನಂತಿಸಲಾಗುತ್ತಿದೆ ಎಂದರು. ಕೊನೆಯಲ್ಲಿ ನಂದಿಗಾಗಿ ಮತ ಮೀಸಲಿಡುವ ಕುರಿತು ಸಂಕಲ್ಪ ವಿಧಿಯನ್ನು ರೈತರಿಗೆ ಭೋದಿಸಲಾಯಿತು.

       

      ಬೋರಣಾಪುರ ಗ್ರಾಮದ ಹಿರಿಯರಾದ ಶ್ರೀ ಭೀಮರಾಯ ತಿ ಪೂಜಾರಿ, ಜಕ್ಕರಾಯ ಮ‌ ಪೂಜಾರಿ, ಬನಪ್ಪ ಸಿ ಪುಟ್ಟಿ, ಶ್ರೀಶೈಲ ಹಿಟ್ನಳ್ಳಿ, ಮಲ್ಲಿಕಾರ್ಜುನ ಅಲಿಯಾಬಾದ, ಸಿದ್ದಪ್ಪ‌ ಲೋಗಾವಿ, ನಿಂಗಪ್ಪ ಯಲ್ಲಪ್ಪ ಪೂಜಾರಿ, ಈಶ್ವರ ಸಿದ್ದಪ್ಪ ಪೂಜಾರಿ, ಗುರುಲಿಂಗಪ್ಪ ಹಿಟ್ನಳ್ಳಿ, ಭೀರಪ್ಪ ಪೂಜಾರಿ ಹಾಗೂ ಹಣಮಂತ ಕಾಡೆ ಭಾಗವಹಿಸಿದ್ದರು. ನಂದಿ ಕೂಗು ಅಭಿಯಾನದ ಸ್ವಯಂ ಸೇವಕರಾದ ಶ್ರೀ ಬಸವರಾಜ ಕೋನರಡ್ಟಿ, ಅಭಿಷೇಕ ಬಿರಾದಾರ, ಹೆಗಡಿಹಾಳದ ಬಸವರಾಜ ಬಿರಾದಾರ ಹಾಗೂ ಇತರರು ಭಾಗವಹಿಸಿದ್ದರು.

      Tags: #Based on the Nandi Gram Panchayat Elections#indi / vijayapur#Public News#Today News#Voice Of Janata#Voiceofjanata.in#ನಂದಿ ಆಧಾರಿತವಾಗಿ ಗ್ರಾಮ ಪಂಚಾಯತಿ ಚುನಾವಣೆ ನಡೆಸುವ ಸಂಕಲ್ಪ ಕಾರ್ಯಕ್ರಮಕ್ಕೆ ಕಾರ ಹುಣ್ಣಿಮೆಯಂದು ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      ರಾಜ್ಯಮಟ್ಟದ ನಾಯಕರನ್ನು ಕರೆಸಿ ಅಂಬೇಡ್ಕರ್ ಜಯಂತಿ ಆಚರಣೆ : ಎಂವೈ ಪಟೀಲ

      April 14, 2026
      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      ಶಿವಾ ಪಿಯು ವಾಣಿಜ್ಯ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ|

      April 14, 2026
      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      ಪ್ರಾಧಿಕಾರ ಅಧ್ಯಕ್ಷರಾಗಿ ಚಂದ್ರಶೇಖರ ಕರಜಗಿ ಅಧಿಕಾರ ಸ್ವೀಕಾರ

      April 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.