• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ  ಪ್ರತಿಭಟನೆಗೆ

      Voiceofjanata.in

      August 9, 2025
      0
      ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ  ಪ್ರತಿಭಟನೆಗೆ
      0
      SHARES
      44
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ  ಪ್ರತಿಭಟನೆಗೆ

       

      ವಿಜಯಪುರ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಿದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಗೆ ಅಣಿಯಾದ ಹಿನ್ನೆಲೆಯಲ್ಲಿ ಹೋರಾಟದ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಬಂಜಾರಾ ಅಭಿವೃದ್ಧಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಮುಂದಾದರು. ಈ ವೇಳೆ ಕೆಲ ಕಾಲ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆಯಿತು. ಬಿಜೆಪಿ ಕಾರ್ಯಕರ್ತರು ನಿಗಮದ ಕಚೇರಿಗೆ ಘೋಷಣೆ ಕೂಗುತ್ತಾ ಮುತ್ತಿಗೆ ಹಾಕುವ ೪೦ ಕ್ಕೂ ಹೆಚ್ಚು ಕಾರ್ಯಕರ್ತರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಿದರು.ದಲಿತ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

      ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ರಾಜ್ಯದಲ್ಲಿರುವ ಆಡಳಿತಾರೂಢ ಕಾಂಗ್ರೆಸ್ ಎಸ್‌ಸಿಪಿ-ಟಿಎಸ್‌ಪಿ ಅನುದಾನಕ್ಕೂ ಕೈ ಹಾಕಿ ದಲಿತ ವರ್ಗದ ಜನರಿಗೆ ಬಹುದೊಡ್ಡ ಅನ್ಯಾಯ ಮಾಡುತ್ತಿದೆ, ೨೦೨೩ ರಲ್ಲಿ ಎಸ್‌ಸಿಪಿ ಅಡಿಯಲ್ಲಿ ೭೭೧೩.೧೫ ಕೋಟಿ ರೂ. ಹಾಗೂ ಟಿಎಸ್‌ಪಿ ಅಡಿ ೩೪೩೦.೮೫ ಕೋಟಿ ರೂ. ಸೇರಿದಂತೆ ಒಟ್ಟು ೧೧೧೪೪ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವುದು ಅನ್ಯಾಯವಲ್ಲದೇ ಮತ್ತೇನು ಎಂದು ಪ್ರಶ್ನಿಸಿದರು. ಇದಕ್ಕೆ ಪ್ರಬಲ ವಿರೋಧ ವ್ಯಕ್ತವಾದರೂ ಸಹ ಸರ್ಕಾರ ತನ್ನ ಚಾಳಿ ಮುಂದುವರೆಸಿ ೨೦೨೪ರಲ್ಲಿಯೂ ಸಹ ಎಸ್‌ಸಿಪಿ ಅಡಿಯಲ್ಲಿ ೯೯೮೦.೬೬ ಕೋಟಿ ರೂ ಹಾಗೂ ಟಿಎಸ್‌ಪಿ ಅಡಿಯಲ್ಲಿ ೪೩೦೨ ಕೋಟಿ ರೂ. ಸೇರಿದಂತೆ ಒಟ್ಟು ೧೪೨೮೨.೬೮ ಕೋಟಿ ರೂ. ಬಳಕೆ ಮಾಡಿಕೊಂಡು ಮತ್ತೊಮ್ಮೆ ಘೋರ ಅನ್ಯಾಯವೆಸಗಿದೆ ಎಂದು ದೂರಿದರು.

      ಉಳಿದ ವರ್ಗದವರಿಗೆ ಸರ್ಕಾರದ ಖಜಾನೆಯಿಂದ ಅನುದಾನ ಬಿಡುಗಡೆಯಾಗುತ್ತಿದೆ, ಆದರೆ ದಲಿತ ಬಾಂಧವರಿಗೆ ಈ ಯೋಜನೆಯ ಹಣವನ್ನೇ ಗ್ಯಾರಂಟಿ ಯೋಜನೆಗೂ ನೀಡಿದರೆ ಹೇಗೆ ಇದು ಅವೈಜ್ಞಾನಿಕ ಅಷ್ಟೇ ಅಲ್ಲ ಅನ್ಯಾಯವೂ ಸಹ ಹೌದು ಎಂದು ಆಕ್ರೋಶ ವ್ಯಕ್ತಪಡಿಸಿದರು.

      ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರಾಜ್ಯ ಸರ್ಕಾರ ದಲಿತ ಬಾಂಧವರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಿದೆ, ಕೇವಲ ಮಾತಿನಲ್ಲಿ ದಲಿತಪರ ಎಂದು ಹೇಳುತ್ತಿದೆ ಹೊರತು ದಲಿತ ಸಮುದಾಯಗಳ ಅಭಿವೃದ್ಧಿ ಯೋಜನೆಯ ಹಣವನ್ನು ದುರಪಯೋಗಮಾಡಿ ದಲಿತ ವಿರೋಧಿ ಎಂಬುದನ್ನು ಕಾಂಗ್ರೆಸ್ ಸಾಬೀತುಪಡಿಸಿದೆ ಎಂದು ದೂರಿದರು.

      ಅಲ್ಪಸಂಖ್ಯಾತರಿಗೆ ಪ್ರತ್ಯೇಕವಾದ ಅನುದಾನವನ್ನು ಕಾಯ್ದಿರಿಸಲಾಗಿದೆ, ಈ ಪಂಚ ಗ್ಯಾರಂಟಿ ಯೋಜನೆಗಳಿಗೆ ಈ ಅನುದಾನ ಬಳಕೆ ಮಾಡುತ್ತಿಲ್ಲ, ಆದರೆ ದಲಿತ ಬಾಂಧವರಿಗೆ ಗ್ಯಾರಂಟಿ ಯೋಜನೆಗಳಿಗೆ ನೀಡುವಾಗ ದಲಿತರ ಶ್ರೇಯೋಭಿವೃದ್ಧಿಗಾಗಿ ಇರಿಸಿದ ಅನುದಾನ ಬಳಕೆ ಮಾಡುತ್ತಿದೆ ಇದು ಯಾವ ಸೀಮೆಯ ನ್ಯಾಯ? ಎಂದು ಅಂಗಡಿ ಖಾರವಾಗಿ ಪ್ರಶ್ನಿಸಿದರು.

      ಬಿಜೆಪಿ ಯುವ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ, ಕಾಂಗ್ರೆಸ್ ದಲಿತ ವಿರೋಧಿ ಇಂದು ನಿನ್ನೆಯದಲ್ಲ, ಕೇವಲ ಬಾಯಿಮಾತಿನಲ್ಲಿ ದಲಿತಪರ ಎಂದು ಹೇಳುವ ಕಾಂಗ್ರೆಸ್‌ಗೆ ದಲಿತರ ಮೇಲೆ ಎಳ್ಳಷ್ಟೂ ಕಾಳಜಿ ಇಲ್ಲ ಎಂದರು.
      ಎಸ್.ಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ, ಪ್ರಮುಖರಾದ ರವಿ ವಗ್ಗೆ, ಮಂಜುನಾಥ ಮೀಸೆ, ಭರತ ಕೋಳಿ, ಎಸ್.ಎ.ಪಾಟೀಲ, ಶಿಲ್ಪಾ ಕುದರಗುಂಡ, ಬಸವರಾಜ ಬೈಚಬಾಳ, ಉಮೇಶ ಕೋಳಕೂರ, ಸಾಬು ಮಾಶ್ಯಾಳ, ಶ್ರೀಹರಿ ಗೊಳಸಂಗಿ ಸಂಜಯಪಾಟೀಲ್ ಕನಮಡಿ, ವಿಜಯ ಜೋಶಿ, ವಿಕಾಸ್ ಪದಕಿ, ಮಲ್ಲಿಕಾರ್ಜುನ ದೇವರಮನಿ, ಗುರು ತಳವಾರ, ಸಿದ್ದು ಮಖಣಾಪೂರ, ಮಲ್ಲಮ್ಮ ಜೋಗೂರ, ರಾಜಕುಮಾರ ಸಗಾಯಿ, ಅಶೋಕ ರಾಠೋಡ, ವಿನೋದಕುಮಾರ ಮಣೂರ, ಪ್ರಶಾಂತ ಪವಾರ, ವಿನೋದ ಕೋಳೂರ, ಶರತಸಿಂಗ್ ರಜಪೂತ, ವಿನಯ ಬಬಲೇಶ್ವರ, ಶೀಲವಂತ ಉಮರಾಣಿ, ರಾಜೇಶ ತಾವಸೆ, ಮಂಜುಳಾ, ನಾಗರಾಜ ಪಾಟೀಲ, ಕಾಂತು ಶಿಂಧೆ, ಸಂದೀಪ್ ಪಾಟೀಲ ಪಾಲ್ಗೊಂಡಿದ್ದರು.

       

      Tags: #Bharatiya Janata Party (BJP) protests condemning the state government's anti -Dalit policy#indi / vijayapur#Public News#Today News#Voice Of Janata#Voiceofjanata.in#ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ  ಪ್ರತಿಭಟನೆಗೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.