ಮುದ್ದೇಬಿಹಾಳ : ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆ,ಜನೌಷಧಿ ಕೇಂದ್ರಗಳು,ಉಚಿತ ಅಕ್ಕಿ ಕೊಡುವ ಯೋಜನೆ, ಭೀಮಾ ಪಸಲ್, ಆಯುಷ್ಮಾನ್ ಆರೋಗ್ಯ ಕಾರ್ಡ,
ಇಶ್ರಮ ಕಾರ್ಡ, ಇಂತಹ ನೂರಾರು ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ತಾಲ್ಲೂಕು ಜಗದೀಶ ಪಂಪಣ್ಣವರ ಹೇಳಿದರು.
ಪಟ್ಟಣದ ಬಿಜೆಪಿ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ ಅವರು ನಿವಾಸದಲ್ಲಿ ಇರುವ ಬಿಜೆಪಿ ಕಾರ್ಯಾಲಯದಲ್ಲಿ ಶನಿವಾರ ಸಂಜೆ ಬಿಜೆಪಿ ಸರ್ಕಾರ ಕೇಂದ್ರದಲ್ಲಿ 11 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ ಉದ್ದೇಶಿಸಿ ಅವರು ಮಾತನಾಡಿದ, ಐದು ಲಕ್ಷ ರೂ.ಗಳವರೆಗೆ ಆರೋಗ್ಯ ವಿಮೆ ಕಲ್ಪಿಸುವ ಯೋಜನೆಯನ್ನು ಮೋದಿ ಸರ್ಕಾರ ಜಾರಿಗೊಳಿಸಿದೆ. ಗ್ಯಾರಂಟಿ ಯೋಜನೆಗಳೆಂಬ ಕಾಂಗ್ರೆಸ್ ಸರ್ಕಾರ ಮರಳು ಮಾಡಲು ಮುಂದಾಗಿದೆ ಎಂದು ಆರೋಪಿಸಿದರು. 35 ವ್ಯಾಟ್ ಇದ್ದದ್ದು 75 ವ್ಯಾಟ್ ವಿದ್ಯುತ್ನ್ನು ಉಚಿತವಾಗಿ ಕೇಂದ್ರ ಸರ್ಕಾರ ಬಡವರಿಗೆ ಅನೇಕ ಯೋಜನೆಗಳನ್ನು ಕೊಡುತ್ತಿದೆ ಎಂದರು.
ಮುಖಂಡ ಗಂಗಾಧರ ನಾಡಗೌಡ ಮಾತನಾಡಿ, ಬಿಜೆಪಿ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ನಕಲು ಮಾಡುತ್ತಿದೆ ಎಂದು ಆರೋಪಿಸಿದರು.
ಈ ಸಂದರ್ಭದಲ್ಲಿಬಿಜೆಪಿ ಮುಖಂಡರಾದ ಪ್ರಭು ಕಡಿ, ಕೆ ಅರ್ ಬಿರಾದಾರ,ಬಿಜೆಪಿ ರೈತ ಮೋರ್ಚಾ ತಾಲ್ಲೂಕು ಅಧ್ಯಕ್ಷ
ಎಸ್ ಎಸ್ ಶಿವಣಗಿ,ಮಲ್ಲಿಕಾರ್ಜುನ ತಂಗಡಗಿ,ಗಿರೀಶಗೌಡ ಪಾಟೀಲ,ಮಧುಸ್ವಾಮಿ, ಸಿದ್ದು ಹಿರೇಮಠ,ಗೌರಮ್ಮ ಹುನಗುಂದ,ಅಶೋಕ ರಾಠೋಡ,ಲಕ್ಷ್ಮಣ ಬಿಜ್ಜೂರ,
ಸಂಜೀವ ಬಾಗೇವಾಡಿ,ನಾಗೇಶ ಕವಡಿಮಟ್ಟಿ,ಸೇರಿದಂತೆ ಉಪಸ್ಥಿತರಿದ್ದರು.