ಲಿಂಗಸೂಗೂರು: ತಾಲೂಕಿನ ಬಿಜೆಪಿ ಕಾರ್ಯಲಯದಿಂದ ಬಸ್ಟ್ಯಾಂಡ್ ಸರ್ಕಲ್ ವರೆಗೆ ಬಿಜೆಪಿ ಪಕ್ಷದ ಮುಖಂಡರು ಕಾಂಗ್ರೆಸ್ನ್ ಜನವಿರೋಧಿ ನೀತಿಗಳ ಖಂಡಿಸಿ ಪ್ರತಿಭಟನೆ ನಡೆಸಿದರು.
ಈ ವೇಳೆ ತಾಲೂಕಾ ಬಜೆಪಿ ಮಂಡಲದ ಅಧ್ಯಕ್ಷರಾದ ವೀರನಗೌಡ ಪಾಟೀಲ್ ಮಾತನಾಡಿ ಗ್ರಾಮೀಣಾಭಿವೃದ್ಧಿ ಸಚಿವರಾದ ಈಶ್ವರಪ್ಪನವರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ಸದನ ನಡೆಯಲು ಬಿಡದೆ ಕಾಂಗ್ರೆಸ್ ಪಕ್ಷದ ನಾಯಕರು ಹಾಳು ಮಾಡಿದ್ದಾರೆ. ಈಗಾಗಲೇ ದೇಶದ, ರಾಜ್ಯದ ಜನರು ಸಂಕಷ್ಟದಲ್ಲಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷವಾಗಿ ಕೆಲಸ ಮಾಡಲು ಯಾವುದೇ ನೈತಿಕ ಹಕ್ಕು ಇಲ್ಲ. ಸಿದ್ದರಾಮಯ್ಯನವರಿಗೆ ಕೆಲಸ ಮಾಡಲು ಡಿಕೆ ಶಿವಕುಮಾರ್ ಅವರು ಬಿಡುತ್ತಿಲ್ಲ. ಕಾಂಗ್ರೆಸ್ನವರು ಇದೀಗ 2 ನೇ ಹಂತದ ಮೇಕೆದಾಟು ಪಾದಯಾತ್ರೆ ಮಾಡುತ್ತಿದ್ದಾರೆ. ಮೇಕೆದಾಟು ಕಾಮಗಾರಿ ಬಿಜೆಪಿಯ ಯೋಜನೆಯಾಗಿದೆ. ಕೇವಲ ಓಟ್ ಬ್ಯಾಂಕ್ ಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ. ಇಂತಹ ಜನವಿರೋಧಿ, ಸಂವಿಧಾನ ವಿರೋಧಿ, ಕಾಂಗ್ರೆಸ್ ಪಕ್ಷ ಜನರಲ್ಲಿ ಅರಾಜಕತೆ ಸೃಷ್ಟಿಸುತ್ತಿದೆ ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದರು.
ಇನ್ನು ಕಾಂಗ್ರೆಸ್ ಪಕ್ಷ ವಿರೋಧ ಪಕ್ಷವಾಗಿ ಸಮರ್ಥವಾಗಿ ಕಾರ್ಯ ನಿರ್ವಹಿಸಲು ತಯಾರಿಲ್ಲ. ಸದನದಲ್ಲಿ ಬಿಜೆಪಿಯಿಂದ ಅಭಿವೃಧ್ಧಿ ಪರ ಘೋಷಣೆ ಆಗುತ್ತವೆ ಎಂಬ ಭಯದಿಂದ ಸದನದ ಸಮಯವನ್ನು ವ್ಯರ್ಥ ಮಾಡಿದ್ದಾರೆ. ಬಿಜೆಪಿಯಿಂದ ಅಭಿವೃಧ್ಧಿ ಕಾರ್ಯಗಳಾದರೆ ಅದು ಬಜೆಪಿ ಪಕ್ಷಕ್ಕೆ ಹೆಸರು ಬರುತ್ತದೆ ಎಂಬ ಕಾರಣದಿಂದ ಕಾಂಗ್ರೆಸ್ನವರು ಬಿಜೆಪಿ ಪಕ್ಷವನ್ನು ಹಣಿಯಲು ಮುಂದಾಗಿದ್ದಾರೆ.
ಆದರೆ ಬಿಜೆಪಿ ಪಕ್ಷ ಸಮರ್ಥವಾಗಿ ತನ್ನ ಕಾರ್ಯಗಳನ್ನು ಮಾಡುತ್ತದೆ. ಮುಂದಿನ ವಿಧಾನಸಭೆ ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಬಜೆಪಿ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಪಕ್ಷ ಎಲ್ಲಾ ತರಹದ ಡ್ರಾಮಾಗಳನ್ನು ಮಾಡುತ್ತಿದೆ ಎಂದರು. ಈ ಸಂದರ್ಭದಲ್ಲಿ ತಾಲೂಕಿನ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.