• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಬೃಹತ ಪ್ರತಿಭಟನೆ

      Voiceofjanata.in

      May 30, 2025
      0
      ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಬೃಹತ ಪ್ರತಿಭಟನೆ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಬೃಹತ ಪ್ರತಿಭಟನೆ

       

      ವಿಜಯಪುರ : ಭಾರತೀಯ ಜನತಾ ಪಾರ್ಟಿ ವಿಜಯಪುರ ಜಿಲ್ಲಾ ಘಟಕದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿನ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಕಪ್ಪು ಬಟ್ಟೆ ಕಟ್ಟಿಕೊಂಡು ಸರ್ಕಾರದ ವಿರುದ್ಧ ಕೆಲ ಘಂಟೆಗಳ ಕಾಲ ಘೋಷಣೆಗಳನ್ನು ಕೂಗಿ ಧರಣಿ ಸತ್ಯಾಗ್ರಹವನ್ನು ನಗರದ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆಸಿದರು.
      ಈ ಸಂದರ್ಭದಲ್ಲಿ ಸಂಸದರಾದ ರಮೇಶ ಜಿಗಜಿಣಗಿ ಮಾತನಾಡಿ, ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಸೇವೆಯನ್ನು ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

      ಬಡ ರೋಗಿಗಳಿಗೆ ವರದಾನವಾಗಿರುವ ಈ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವ ನಿರ್ಧಾರ ಬಡವರ ವಿರೋಧಿಯಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಬರುವವರು ಬಡವರು ಮಾತ್ರ. ಬಡವರಿಗೆ ಅನುಕೂಲಕರವಾದ ಈ ಕೇಂದ್ರಗಳನ್ನು ವಿನಾಕಾರಣ ಸ್ಥಗಿತಗೊಳಿಸುವ ಅರ್ಥವೇನು?. ಸಚಿವ ದಿನೇಶ ಗುಂಡೂರಾವ್, ಮುಖ್ಯಮಂತ್ರಿ ಸಿದ್ಧರಾಮ ಅವರ ಪಕ್ಷದ ಮುಖಂಡರು ಶ್ರೀಮಂತರಿರಬಹುದು, ಅವರು ಜಿಲ್ಲಾ ಆಸ್ಪತ್ರೆಗೆ ಹೋಗುವುದಿಲ್ಲ. ಬಡವರ ವಿರೋಧಿ ನಿರ್ಧಾರ ಕೈಗೊಂಡಿರುವ ಸರ್ಕಾದ ಕ್ರಮ ಖಂಡನೀಯ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಅವರು ಒತ್ತಾಯಿಸಿದರು. ಬೇರೆ ಮೆಡಿಕಲ್‌ಗಳಲ್ಲಿ 100ರೂ ಗೆ ಸಿಗುವಂತಹ ಔಷಧಿ ಜನೌಷಧಿ ಮಳಿಗೆಗಳಲ್ಲಿ 10 ರೂಪಾಯಿಗೆ ಉತ್ತಮ ಗುಣಮಟ್ಟದಲ್ಲಿ ಸಿಗುತ್ತದೆ. ಆದರೆ ರಾಜ್ಯ ಸರ್ಕಾರ ಹಾಗೂ ಆರೋಗ್ಯ ಸಚಿವರು ಮೆಡಿಕಲ್ ಮಾಫಿಯಾದವರ ಒತ್ತಡಕ್ಕೆ ಮಣಿದು ಹೀಗೆಲ್ಲ ಮಾಡುತ್ತಿದ್ದಾರೆಯೇ ಎಂದು ಜನಸಾಮಾನ್ಯರು ಮಾತನಾಡುತ್ತಿದ್ದಾರೆ. ಮಾತೆತ್ತಿದರೆ ಅಹಿಂದ ಬಗ್ಗೆ ಮಾತನಾಡುವ ಕಾಂಗ್ರೆಸ್ ನಾಯಕರೇ ನೀವೆ ಕುಳಿತುಕೊಂಡು ಜನೌಷಧಿ ತೆಗೆಸುವ ಮೂಲಕ ಬಡವರಿಗೆ ಅನ್ಯಾಯ ಮಾಡುತ್ತಿದ್ದೀರಿ. ಇದು ಸರಿಯಾದ ಕ್ರಮವಲ್ಲ, ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ಜಿಗಜಿಣಗಿ ಅವರು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಸರ್ಕಾರಿ ಆಸ್ಪತ್ರೆಗೆ ಬರುವವರು ಬಡವರು, ಬಡವರ ಹೊಟ್ಟೆ ಮೇಲೆ ಕಲ್ಲು ಹಾಕುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಮೋದಿ ಸರ್ಕಾರದ ಯೋಜನೆಯ ವಿರುದ್ದ ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ, ರಾಮರಾಜ್ಯ ಮಾಡುತ್ತೇನೆ ಎಂದವರು ಇವರು ರಾವಣ ರಾಜ್ಯ ಮಾಡಿದ್ದಾರೆ, ರಾಕ್ಷಸ ರಾಜ್ಯ ಮಾಡಿದ್ದಾರೆ ಎಂದರು.

      ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ ಮಾತನಾಡಿ, ಪ್ರಧಾನಮಂತ್ರಿ ಜನ ಔಷಧಿ ಕೇಂದ್ರವನ್ನು ಎಲ್ಲಾ ಸರಕಾರಿ ಆಸ್ಪತ್ರೆಯ ಆವರಣದಲ್ಲಿ ನಡೆಸುವಂತಿಲ್ಲ ಎಂದು ಆದೇಶ ಹೊರಡಿಸಿ, ಈ ಆದೇಶಕ್ಕೆ ಸಮಜಾಯಿಸಿ ಸರಕಾರಿ ಆಸ್ಪತ್ರೆಯಲ್ಲಿ ಔಷಧಿಗಳನ್ನ ಮಾರಾಟ ಮಾಡುವಂತಿಲ್ಲ ಎನ್ನುವ ನಿಯಮದಡಿ ಕಾರಣ ಹೇಳಿ ಸಮಾಜಾಯಿಸಿ ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪ್ರಧಾನಮಂತ್ರಿ ಜನ ಔಷಧಿ ಕೇಂದ್ರ ಹೊರಹಾಕಿದ್ದಾರೆ.

      ಸರಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಕೊಡುವ ಔಷಧಿಗಳು ಲಭ್ಯ ಇಲ್ಲಾ ಅಂದ್ರೇ ರೋಗಿಗಳು ಹೊರಗಡೆ ಹೋಗಿ ಜನ ಔಷಧಿ ಕೇಂದ್ರವನ್ನು ಹುಡುಕಾಡಬೇಕಾ? ಔಷಧಿ ಕೇಂದ್ರ ಸಿಗದೇ ಇದ್ದ ಪಕ್ಷದಲ್ಲಿ ರೋಗಿಗಳು ಅನಾವಶ್ಯಕವಾಗಿ ಹೆಚ್ಚಿನ ದರದ ಔಷಧಿಯನ್ನು ಖರೀದಿ ಮಾಡುವ ಅನಿವಾರ್ಯತೆ ಹುಟ್ಟಿ ಹಾಕಿದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರ ಈ ನಿರ್ಣಯವನ್ನು ಖಂಡಿಸುವೆ. ಸರಕಾರಿ ಆಸ್ಪತ್ರೆಯಲ್ಲಿ ಔಷಧ ಸಿಗುತ್ತಿಲ್ಲ ಅಥವಾ ಲಭ್ಯವಿಲ್ಲ ಎಂದಾಗ ಕನಿಷ್ಠ ಪಕ್ಷ ರೋಗಿಗಳು ಕಡಿಮೆಯ ಖರ್ಚಿನಲ್ಲಿ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜನ ಔಷಧಿ ಕೇಂದ್ರದಲ್ಲಾದರೂ ಖರೀದಿಸುವ ಅನುಕೂಲವಿತ್ತು, ತಮ್ಮ ವೈಯಕ್ತಿಕ ರಾಜಕಾರಣದಿಂದ ಈ ನಿರ್ಣಯ ಅದೆಷ್ಟೋ ರೋಗಿಗಳಿಗೆ ತೊಂದರೆ ಕೊಡುತ್ತಿದೆ ಎಂದರು.

      ಈ ಸದರ್ಭದಲ್ಲಿ ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಬೆಳಗಾವಿ ವಿಭಾಗದ ಪ್ರಭಾರಿಗಳಾದ ಚಂದ್ರಶೇಖರ ಕವಟಗಿ, ಬೀಜ ಮತ್ತು ಸಾವಯವ ನಿಗಮದ ಮಾಜಿ ಅಧ್ಯಕ್ಷರಾದ ವಿಜುಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಈರಣ್ಣ ರಾವೂರ, ಸಾಬು ಮಾಶ್ಯಾಳ, ಮಳುಗೌಡ ಪಾಟೀಲ, ಬಿಜೆಪಿ ಮುಖಂಡರಾದ ಸುರೇಶ ಬಿರಾದಾರ, ಉಮೇಶ ಕೋಳಕೂರ, ಸಂಜಯ ಐಹೋಳ್ಳಿ, ಎಸ್.ಎ.ಪಾಟೀಲ, ವಿಜಯ ಜೋಶಿ, ರವಿಕಾಂತ ಬಗಲಿ, ಕಾಂತು ಶಿಂಧೆ, ರಾಜೇಶ ತವಸೆ, ಮಂಜುನಾಥ ಬಿಸೆ, ಪಾಪುಸಿಂಗ ರಜಪೂತ, ಚನ್ನು ಚಿನಗುಂಡಿ, ಸಿದ್ದು ಮಲ್ಲಿಕಾರ್ಜುನಮಠ, ಬಸವರಾಜ ಬೈಚಬಾಳ, ಮಹಾನಗರ ಪಾಲಿಕೆ ಸದಸ್ಯರಾದ ರಾಹಲ ಜಾಧವ, ಕಲ್ಮೇಶ ಹಿರೇಮಠ, ಸಂತೋಷ ನಿಂಬರಗಿ, ಸಂದೀಪ ಪಾಟೀಲ, ಸಂಪತ ಕೋಹಳ್ಳಿ, ಸುಮಂಗಲಾ ಕೋಟಿ, ಮಂಗಲಾ, ಛಾಯಾ ಮಸಿ, ಭಾರತಿ ಭುಯ್ಯಾರ, ಭಾರತಿ ಶಿವಣಗಿ, ಸುಶ್ಮೀತಾ ವಡಕರ ಸೇರಿದಂತೆ ಬಿಜೆಪಿಯ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #BJP's massive protest condemns Congress government's move#indi / vijayapur#Public News#State News#Today News#Voiceofjanata.in#ಕಾಂಗ್ರೆಸ್ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಬೃಹತ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.