BLDE : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ
ವಿಜಯಪುರ: ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ಎಂ.ಬಿ.ಬಿ.ಎಸ್. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಜಿಕ್ವಿಜ್ ರಸಪ್ರಶ್ನೆ ಕಾರ್ಯಕ್ರಮ ಶನಿವಾರ ನಡೆಯಿತು.
ಈ ಸಂದರ್ಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ, ರವಿವಾರ ಇದೇ ಮೊದಲ ಬಾರಿಗೆ ಜೂನ್. 15 ರಂದು ಪ್ರಥಮ ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ದಿನಾಚರಣೆ ಆಚರಿಸಲಾಗುತ್ತಿದೆ. ಜನಸಾಮಾನ್ಯರಿಗೆ ಶಸ್ತ್ರ ಚಿಕಿತ್ಸಕರ ಮಹತ್ವವನ್ನು ತಿಳಿಸುವುದು ಮತ್ತು ಸ್ನಾತಕ ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಶಸ್ತ್ರ ಚಿಕಿತ್ಸಾ ವಿಭಾಗದ ಬಗ್ಗೆ ಆಸಕ್ತಿ ಮೂಡಿಸುವುದು ಇದರ ಉದ್ದೇಶವಾಗಿದೆ. ವಿದ್ಯಾರ್ಥಿಗಳ ಪ್ರತಿಭಾನ್ವೇಷಣೆಗೆ ರಸಪ್ರಶ್ನೆ ಕಾರ್ಯಕ್ರಮ ಸೂಕ್ತ ವಿಧಾನವಾಗಿದ್ದು, ಜ್ಞಾನದ ಜೊತೆಗೆ ಸಮಯ ಪ್ರಜ್ಞೆ, ವಿಶ್ಲೇಷಣೆ ಸಾಮರ್ಥ್ಯಗಳನ್ನು ಅಳೆಯುವ ಮಹತ್ವದ ಸಾಧನವಾಗಿದೆ ಎಂದು ಹೇಳಿದರು. .
ಈ ಸರ್ಜಿಕ್ವಿಜ್ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಪರೀಕ್ಷೆಯ ಮೂಲಕ ಅಂತಿಮ ಸುತ್ತಿಗೆ 15 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ, ತಲಾ ಮೂರು ವಿದ್ಯಾರ್ಥಿಗಳ ೫ ತಂಡಗಳನ್ನು ರಚಿಸಲಾಗಿತ್ತು. ತಂಡಗಳಿಗೆ ಬಿ.ಎಲ್.ಡಿ.ಇ ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ವಿಭಾಗದಲ್ಲಿ ಅನುಪಮ ಸೇವೆ ಸಲ್ಲಿಸಿದ ಹಿರಿಯ ವೈದ್ಯರ ಹೆಸರುಗಳನ್ನು ಇಡಲಾಗಿತ್ತು.
ಕ್ವಿಜ್ ಮಾಸ್ಟರ್ ಡಾ. ದೀಪಕ ಚವ್ಹಾಣ ಸರ್ಜಿಕ್ವಿಜ್ ಕಾರ್ಯಕ್ರಮ ನಿರೂಪಿಸಿದರು. ಡಾ. ಪಿ. ಎಲ್. ಕರಿಹೋಳು ತಂಡದ ಅನುಷ್ಕಾ ಸಿಂಗ್, ಅನುಷ್ಕಾ ಪಾಂಡೆ ಮತ್ತು ಭಾವನಾ ಸುಂಕರಾ ಪ್ರಥಮ ಸ್ಥಾನ ಪಡೆದರು. ಡಾ. ಆರ್. ಎಸ್. ಕುಲಕರ್ಣಿ ತಂಡದ ಸಾಧನ ಮೊಹಾಪಾತ್ರಾ, ರೋಹನ್ ರಾಯಕರ ಮತ್ತು ಗೌರಿ ಮಿಶ್ರಾ ರನ್ನರ್ ಅಪ್ ಪ್ರಶಸ್ತಿ ಗಳಿಸಿದರು.
ಈ ಸರ್ಜಿಕ್ವಿಜ್ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಅಲ್- ಅಮೀನ್ ಮೆಡಿಕಲ್ ಕಾಲೇಜಿನ ಮೆಡಿಕಲ್ ಸುಪರಿಂಟಂಡೆಂಟ್ ಡಾ. ಜಿಲಾನಿ ಅವಟಿ, ಪ್ರಾಧ್ಯಾಪಕ ಡಾ. ನಿಶಿಕಾಂತ ಗುಜರ, ಶ್ರೀ. ಬಿ. ಎಂ. ಪಾಟೀಲ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಅರವಿಂದ ಪಾಟೀಲ, ಫ್ಯಾಕಲ್ಟಿ ಆಫ್ ಮೆಡಿಸಿನ್ ಡೀನ್ ಡಾ. ತೇಜಸ್ವಿನಿ ವಲ್ಲಭ, ಡಾ. ಗಿರೀಶ ಕುಲ್ಲೊಳ್ಳಿ, ವಿಜಯಪುರ ಜಿಲ್ಲಾ ಶಸ್ತ್ರ ಚಿಕಿತ್ಸಕರ ಸಂಘದ ಕಾರ್ಯದರ್ಶಿ ಡಾ. ರಮಾಕಾಂತ ಬಳೂರಕರ ಪ್ರಮಾಣ ಪತ್ರ ಮತ್ತು ಪ್ರಶಸ್ತಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕ ಡಾ. ಮಂಜುನಾಥ ಸಾವಂತ, ಡಾ. ಶಿವರಾಜ ಮಂಗ್ಯಾಳ, ಡಾ. ಸಂತೋಷ ಮಡಗೊಂಡ, ಡಾ. ಅವಿನಾಶ ಹಂಚನಾಳ, ಡಾ. ವೀಣಾ ಘಂಟೆಪ್ಪಗೋಳ, 150 ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Surgyquiz Competion : ರಾಷ್ಟ್ರೀಯ ಶಸ್ತ್ರಚಿಕಿತ್ಸಕರ ಪ್ರಥಮ ದಿನಾಚರಣೆಯ ಅಂಗವಾಗಿ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ಜಿಲ್ಲಾ ಶಸ್ತ್ರಚಿಕಿತ್ಸಕರ ಸಂಘದ ಸಹಯೋಗದಲ್ಲಿ ಎಂ.ಬಿ.ಬಿ.ಎಸ್. ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಸರ್ಜಿಕ್ವಿಜ್ ಕಾರ್ಯಕ್ರಮ ನಡೆಯಿತು. ಈ ಸ್ಪರ್ಥೆಯಲ್ಲಿ ವಿಜೇತ ವಿದ್ಯಾರ್ಥಿಗಳು ಗಣ್ಯರೊಂದಿಗೆ ಗ್ರುಪ್ ಫೋಟೋ ತೆಗೆಸಿಕೊಂಡರು. ಈ ಸಂದರ್ಭದಲ್ಲಿ ಮೆಡಿಕಲ್ ಕಾಲೇಜಿನ ಪ್ರಿನ್ಸಿಪಾಲ್ ಡಾ. ಅರವಿಂದ ಪಾಟೀಲ, ಡಾ. ತೇಜಸ್ವಿನಿ ವಲ್ಲಭ, ಡಾ. ಜಿಲಾನಿ ಅವಟಿ, ಡಾ, ಮಂಜುನಾಥ ಕೋಟೆಣ್ಣವರ ಮುಂತಾದವರು ಉಪಸ್ಥಿತರಿದ್ದರು.