ಇಂಡಿ: ವೃದ್ಧನೋರ್ವನನ್ನು ದುಷ್ಕರ್ಮಿಗಳು ಹತ್ತೆಗೈದು ತದನಂತರ ಹೆಣವನ್ನು ಸುಟ್ಟು ಪರಾರಿಯಾದ ಘಟನೆ ಇಂಡಿ ತಾಲೂಕಿನ ತೆನ್ನೆಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತನನ್ನು ತೆನ್ನೆಳ್ಳಿ ಗ್ರಾಮದ ರೇವಯ್ಯ ಗುರುಬಸಯ್ಯ ಹಿರೇಮಠ (71) ಎಂದು ಗುರುತಿಸಲಾಗಿದ್ದು, ಯಾರೋ ದುಷ್ಕರ್ಮಿಗಳು ಕೊಲೆಗೈದಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಈ ಕುರಿತು ಇಂಡಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


















