ವಿಜಯಪುರ : ಬುಲೆರೋ ವಾಹನ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ಇಬ್ಬರು ಬೈಕ್ ಸವಾರರು ಅಸುನೀಗಿರುವ ಘಟನೆ ವಿಜಯಪುರ ತಾಲೂಕಿನ ಹಡಗಲಿ ಗ್ರಾಮದ ಬಳಿಯ ಕವಲಗಿ ಹತ್ತಿರ ನಡೆದಿದೆ. ಪ್ರದೀಪ ಭೀಮು ರಾಠೋಡ(17) ಹಾಗೂ ಅನೀಲ ಚಿನ್ನು ರಾಠೋಡ (17) ಮೃತರಾದ ದುರ್ದೈವಿ ಗಳಾಗಿದ್ದಾರೆ. ವಾಹನವನ್ನು ಚಾಲಕ ಸ್ಥಳದಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.