ಇಂಡಿ : ವಿದ್ಯುತ್ ತಂತಿ ತುಂಡಾಗಿ ಎತ್ತಿನ ಮೇಲೆ ಬಿದ್ದಿರುವ ಪರಿಣಾಮ ಎತ್ತು ಸ್ಥಳದಲ್ಲಿಯೇ ಅಸುನೀಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುರೇಶ ಪರಗೊಂಡ ಎಂಬುವರಿಗೆ ಸೇರಿದ ಎತ್ತು ಸಾವನ್ನಪ್ಪಿದೆ. ಸುಮಾರು 80 ಸಾವಿರ ಮೌಲ್ಯದ ಎತ್ತು ಮೃತಪಟ್ಟಿದ್ದು, ಎತ್ತು ಮೃತಪಟ್ಟಿರುವ ಹಿನ್ನಲೆ ರೈತನ ಬದುಕು ಕಂಗಾಲಾಗಿದೆ. ಸ್ಥಳಕ್ಕೆ ಜೆಡಿಎಸ್ ಮುಖಂಡ ಬಿಡಿ ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇಂಡಿ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.