ರಾಯಚೂರು :- ತಾಲ್ಲೂಕಿನ ದೇವಸೂಗೂರು ಗ್ರಾಮದ ಯಾದವ ನಗರ ಬಡಾವಣೆಯಲ್ಲಿ ನರೇಗಾ ಯೋಜನೆ ಅಡಿಯಲ್ಲಿ 2 ಲಕ್ಷ ವೆಚ್ಚದ 200 ಮೀಟರ್ ಸಿಸಿ ರಸ್ತೆ ಕಾಮಗಾರಿಗೆ ದೇವಸೂಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸೂಗನಗೌಡ ದೊಡ್ಡಿ ಅವರು ಭೂಮಿ ಪೂಜೆ ನೆರವೇರಿಸಿ ಚಾಲನರ ನೀಡಿದರು.
ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ. ನಿಗದಿತ ಸಮಯದಲ್ಲಿ ಗುಣಮಟ್ಟದ ಸಿಸಿ ರಸ್ತೆ ನಿರ್ಮಾಣ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಹೇಳಿದರು.
ಈ ವೇಳೆ ಅಂಜನಪ್ಪ, ನರಸರೆಡ್ಡಿ, ವಿರೇಶ, ಶಂಕರಪಾಟೀಲ್, ಸುರೇಶ ಚೋಟು, ತರ್ಬಜಾ, ಮಹಮದ್ ವಾಸೀಮ್, ತಮ್ಮುಡು, ಸುಬ್ರಮಣಿ ಇದ್ದರು.