ಅ-31 ರಂದು ಕೇಂದ್ರ ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ
ಇಂಡಿ: ಕೇಂದ್ರ ಸಾಹಿತ್ಯ ಅಕಾದೆಮಿಯ ನವದೆಹಲಿ ಹಾಗೂ ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಭವನದಲ್ಲಿ ಕಾಲೇಜಿನ ಸಹಯೋಗದಲ್ಲಿ ಇದೇ ೩೧ರಂದು ಶನಿವಾರ ಮಧ್ಯಾಹ್ನ ೧೨.೩೦ಕ್ಕೆ ‘ರಾಘವೇಂದ್ರ ಖಾಸನೀಸ ಕಥನ ಮಾರ್ಗ’ ಕುರಿತಾಗಿ ಉಪನ್ಯಾಸ ಕಾರ್ಯಕ್ರಮ ಆಯೋಜಿಸಿದೆ.
ಅಧ್ಯಕ್ಷತೆ ಪ್ರಾಚಾರ್ಯ ಆರ್. ಎಚ್. ರಮೇಶ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ ಹಿರಿಯ ಕಾದಂಬರಿಕಾರ ಡಾ.ಬಾಳಾಸಾಹೇಬ ಲೋಕಾಪುರ ಹಾಗೂ ವಿಜಯಪುರದ ಹಿರಿಯ ವಿಮರ್ಶಕ ಮನು ಪತ್ತಾರ ಅವರು ರಾಘವೇಂದ್ರ ಖಾಸನೀಸರ ಕತೆಗಳ ಕುರಿತು ಮಾತನಾಡಲಿದ್ದಾರೆ.
ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪದ್ಮಿನಿ ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ವಿಜಯಪುರದ ಓದುಗರ ಚಾವಡಿಯ ಅಧ್ಯಕ್ಷ ಶರಣು ಸಬರದ, ತಾಲೂಕು ಕÀಸಾಪ ಗೌರವ ಕಾರ್ಯದರ್ಶಿ ರಾಘವೇಂದ್ರ ಕುಲಕಣ ð ಪಾಲ್ಗೊಳ್ಳುವರು,
ಸಾರ್ವಜನಿಕರು, ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾಲೇಜು ಕನ್ನಡ ವಿಭಾಗದ ಮುಖ್ಯಸ್ಥ ಡಾ. ರಮೇಶ ಕತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.