ಯಶಸ್ವಿಯಾಗಿ ನಡೆದ ವಿದ್ಯುತ್ ಇಲಾಖೆಯ ಜನ ಸಂಪರ್ಕ ಸಭೆ .
ಹನೂರು : ಪ್ರತಿ ಸಭೆಯಲ್ಲಿಯು ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದ್ದು , ನಮ್ಮ ಇಲಾಖೆಯು ನಿಮ್ಮ ಸೇವೆಗೆ ಸದಾ ಸಿದ್ದವಾಗಿದೆ ಅಲ್ಲದೆ ಇಂದಿನ ಜನ ಸಂಪರ್ಕ ಸಭೆಯಲ್ಲಿ ಒಟ್ಟು 16ದೂರು ಗಳು ಬಂದಿದ್ದು ಶೀಘ್ರದಲ್ಲೇ ಸಮಸ್ಯೆ ಗಳನ್ನು ಬಗೆಹರಿಸಲಾಗುವುದು ಎಂದು ಕಾರ್ಯ ಪಾಲಕ ಇಂಜಿನಿಯರ್ ತಬಸುಮಾ ಅಪ್ಸ ಬಾನು ತಿಳಿಸಿದರು.
ಹನೂರು ಪಟ್ಟಣದ ಚೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಏರ್ಪಡಿಸಿದ ಜನ ಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು ವಿದ್ಯುತ್ ಇಲಾಖೆಗೆ ಸಂಬಂಧ ಪಟ್ಟ ಹಲವಾರು ಸಮಸ್ಯೆ ಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜನ ಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಆದ್ದರಿಂದ ರೈತರು ಹಾಗೂ ಸಾರ್ವಜನಿಕರು ಸಮಸ್ಯೆ ಗಳಿದ್ದರೆ ಇಲಾಖೆವತಿಯಿಂದ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದರು.
ಕಳೆದ ಕೆಲವು ದಿನಗಳಿಂದ ನಡೆದ ಜನ ಸಂಪರ್ಕ ಸಭೆಯಲ್ಲಿ ವಿದ್ಯುತ್ ಸಮಸ್ಯೆಗೆ ಸಂಬಂಧಿಸಿದಂತೆ 17 ದೂರು ಬಂದಿದ್ದು, ನಮ್ಮ ಇಲಾಖೆಯ ಅಧಿಕಾರಿಗಳು ಉತ್ತಮವಾಗಿ ಸ್ಪಂದಿಸಿ ಸಮಸ್ಯೆ ಬಗೆಹರಿಸಿದ್ದಾರೆ. ಜನ ಸಂಪರ್ಕ ಸಭೆಯಲ್ಲಿ ಸುಮಾರು 16 ದೂರು ಬಂದಿದ್ದು, ವಿದ್ಯುತ್ ತಂತಿಗಳು ಜೋತು ಬಿದ್ದಿರುವುದನ್ನು ಸರಿಪಡಿಸಿ ತೊಂದರೆ ಯಾಗದಂತೆ ಮುಂಜಾಗ್ರತೆ ವಹಿಸಿ ಎಂದರು ವಿದ್ಯುತ್ ಸಂಬಂಧ ಪಟ್ಟ ಇನ್ನಿತರ ದೂರುಗಳು ಬಂದಿದೆ.ರೈತರು ರಾತ್ರಿ ವೇಳೆ 3 ಗಂಟೆ ವಿದ್ಯುತ್ ತೆಗೆದು ಹಾಕುತ್ತೀರಾ ಎಂದು ದೂರಿದರು. ರಾತ್ರಿ ವೇಳೆ ವಿದ್ಯುತ್ ಇಲ್ಲದೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗುತ್ತಿದ್ದು, ಆದ ಕಾರಣ ರಾತ್ರಿ ವೇಳೆ ವಿದ್ಯುತ್ ನೀಡಬೇಕು.
ಕಣ್ಣೂರು ಗ್ರಾಮದಲ್ಲಿ 2 ವರ್ಷ ದಿಂದ ಟಿ ಸಿ ಕೆಟ್ಟು ಹೋಗಿ ಕುಡಿಯುವ ನೀರಿಗೆ ತೊಂದರೆ ಯಾಗಿದೆ ಅದನ್ನು ಸರಿಪಡಿಸಬೇಕು ಎಂದು ಮನವಿ ಮಾಡಿದರು.
ವಡಕೆ ಹಳ್ಳ ಗ್ರಾಮದ ಓಂ ಶಕ್ತಿ ಕಾಲೋನಿಯ ಪರಿಶಿಷ್ಟ ಜಾತಿಯ ಜನರ ಕಾಲೋನಿಗೆ ನಿರಂತರ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಿ ಎಂದು ಸಭೆಯಲ್ಲಿ ಮನವಿ ಮಾಡಿದರು.
ಎಂ ಟಿ ದೊಡ್ಡಿ ಗ್ರಾಮಕ್ಕೆ ಅಕ್ರಮ ಸಕ್ರಮದಡಿಯಲ್ಲಿ ಟಿ ಸಿ ಅಳವಡಿಸಿ ಕೊಡಿ ಎಂದು ದೂರಿದರು.
ರಾತ್ರಿ ವೇಳೆಯಲ್ಲಿ ತೋಟಗಳಿಗೆ ಅಕ್ರಮ ಸಕ್ರಮ ದಡಿಯಲ್ಲಿ ನಿರಂತರ ಜ್ಯೋತಿ ಕಲ್ಪಿಸಿಕೊಡಿ ಎಂದು ರೈತರು ಅಧಿಕಾರಿಗಳ ಬಳಿ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಇ ಇ ತಬಸುಮಾ ಅಪ್ಸ ಬಾನು, ಎ ಇ ಇ ಶಂಕರ್, ಎ ಇ ರಂಗಸ್ವಾಮಿ, ಆನಂದ್,ಲೆಕ್ಕಧಿಕಾರಿ ವಿನೋದ್ ಕುಮಾರ್,ರೈತ ಮುಖಂಡರು, ಸಾರ್ವಜನಿಕರು ಸೇರಿದಂತೆ ಇನ್ನಿತರರು ಹಾಜರಿದ್ದರು.