ಕಟ್ಟೊಣ ಬನ್ನಿ ತರುಣರೇ ನವಭಾರತದೇಶವ : ನಗರ ಕಾರ್ಯದರ್ಶಿ ಸಚಿನ ದಾನಗೊಂಡ
ಇಂಡಿ :ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಳೆದ 76 ವರ್ಷಗಳಿಂದ ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶ್ವದ ಏಕೈಕ ದೊಡ್ಡ ಸಂಘಟನೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್1949 ಜುಲೈ 9 ರಂದು ಪ್ರಾರಂಭವಾಯಿತು. ಈ ದಿನವನ್ನು“ರಾಷ್ಟ್ರೀಯ ವಿದ್ಯಾರ್ಥಿ ದಿನ”ವನ್ನಾಗಿ ಇಡೀ ದೇಶಾದ್ಯಂತ ವಿದ್ಯಾರ್ಥಿ ಪರಿಷತ್ಎಲ್ಲಾ ಶಾಖೆಗಳಲ್ಲಿ ಅತ್ಯಂತ ಸಂಭ್ರಮ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತದೆ ಎಂದು ನಗರ ಕಾರ್ಯದರ್ಶಿ ಸಚಿನ ದಾನಗೊಂಡ ಹೇಳಿದರು.
ಮಂಗಳವಾರ ಪಟ್ಟಣದ ಸರಕಾರಿ ಪಿಯು ಕಾಲೇಜು, ಸಿವಿ ರಾಮನ್ ಕಾಲೇಜು, ವಿಧ್ಯಾರ್ಥಿ ವಸತಿ ನಿಲಯಗಳಲ್ಲಿ ಹಾಗೂ ವಿವಿಧ ಕಾಲೇಜು ಕ್ಯಾಂಪಸ್ ಗಳಲ್ಲಿ ವಿಧ್ಯಾರ್ಥಿ ದಿನ ಆಚರಿಸಲಾಯಿತು.
ಎಬಿವಿಪಿ ಕಾರ್ಯಕರ್ತ ಸಿದ್ದು ಹಾವಳಗಿ, ಶ್ರೀಕಾಂತಗೌಡ ಮಾತನಾಡಿದ ಅವರು, ಪರಿಷತ್ತಿನ ಹಿನ್ನೆಲೆ ಹಾಗೂ ಮುಂದಿನ ಕಾರ್ಯಯೋಜನೆಗಳ ಬಗ್ಗೆ ತಿಳಿಸಿಕೊಟ್ಟರು ಅಲ್ಲದೆ ವಿದ್ಯಾರ್ಥಿ ಪರಿಷತ್ತಿನ ಇಂದಿನ ಪ್ರಸ್ತುತತೆ ಮತ್ತು ವಿದ್ಯಾರ್ಥಿಗಳು ಇಂದಿನ ದಿನಗಳಲ್ಲಿ ಯಾವ ರೀತಿಯಾಗಿ ಯೋಚಿಸಬೇಕು, ರಾಷ್ಟ್ರೀಯತೆ ವಿಚಾರದಲ್ಲಿ ಹಾಗೂ ರಾಷ್ಟ್ರದ ಬಗ್ಗೆ ಯಾವ ರೀತಿಯ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂಬ ವಿಷಯಗಳನ್ನು ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.
ಇನ್ನೂ ಇದೆ ಸಂದರ್ಭದಲ್ಲಿ ಸಿವಿ ರಾಮನ್ ಕಾಲೇಜು ಪ್ರಾಂಶುಪಾಲ ಶಿವಾನಂದ ಕಾಮಗೊಂಡ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಪೋಷಕರಿಗೆ ಹಾಗೂ ಶಿಕ್ಷಕರ ಶ್ರಮಕ್ಕೆ ತಕ್ಕ ಬೆಲೆಯನ್ನು ನೀಡಲು ಶ್ರದ್ಧೆಯಿಂದ ವಿದ್ಯಾಭ್ಯಾಸ ನಡೆಸಿ, ಉತ್ತಮ ಜೀವನ ರೂಪಿಸಿಕೊಳ್ಳಬೇಕು ತಿಳಿಸಿದರು. ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣ ಒಂದು ಉತ್ತಮವಾದ ಕಾಲಘಟ್ಟ, ಇದನ್ನು ಎಲ್ಲಾ ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಶಿಸ್ತು ಬೆಳೆಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ವಿದ್ಯಾರ್ಥಿಗಳು ಓದುವ ಸಮಯದಲ್ಲಿ ಬೇರೆಡೆಗೆ ತಮ್ಮ ಗಮನ ಹರಿಸದೇ ಓದುವ ಕಡೆ ಮಾತ್ರ ಇರಬೇಕೆಂದರು. ಇತ್ತೀಚೆಗೆ ವಿದ್ಯಾರ್ಥಿಗಳು ಟಿವಿ. ಮೊಬೈಲ್ ನೋಡುವುದರಲ್ಲಿ ಹೆಚ್ಚಿನ ಸಮಯ ವ್ಯಯ ಮಾಡಿ, ತಮ್ಮ ಭವಿಷ್ಯ ಹಾಳು ಮಾಡಿಕೊಳ್ಳುತ್ತಿದ್ದು ಇದೇ ಸಮಯವನ್ನು ಜ್ಞಾನಾರ್ಜನೆಗಾಗಿ ಉಪಯೋಗಿಸಲು ತಿಳಿಸಿದರು.
ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತ ಸಮರ್ಥ ಗಾಯಕವಾಡ, ಈರಣ್ಣ ಸಿಂದಗಿ, ರಾಕೇಶ್ ಹೊಸಮನಿ ಇನ್ನೂ ಅನೇಕರು ಕಾರ್ಯಕರ್ತರು ಹಾಗೂ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.