ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರಕ್ಕೆ ಜ.26ರಂದು ಸಚಿವರಿಂದ ಚಾಲನೆ
Voice Of Janata : ವಿಜಯಪುರ : ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾದ ರಾಷ್ಟ್ರೀಯ ಮಟ್ಟದ ಕಾರ್ಯಕ್ರಮಕ್ಕೆ ಎಲ್ಲ ಜಿಲ್ಲಾ ಕೇಂದ್ರಗಳ ಮೂಲಕ ಚಾಲನೆ ನೀಡಲು ಉದ್ದೇಶಿಸಲಾಗಿರುವ ಜಾಗೃತಿ ಜಾಥಾದ ಸ್ತಬ್ದ ಚಿತ್ರಕ್ಕೆ ಜಿಲ್ಲೆಯಲ್ಲಿ ಜನವರಿ 26 ರಂದು ನಗರದ ಡಾ.ಬಿ.ಆರ್. ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಚಾಲನೆ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕೆಸ್ವಾನ್ ಕಚೇರಿ ಸಭಾಂಗಣದಲ್ಲಿ ವಿಡಿಯೋ ಕಾನ್ಸರೆನ್ಸ್ ಮೂಲಕ ಜಿಲ್ಲೆಯ ವಿವಿಧ ಅಧಿಕಾರಿಗಳೊಂದಿಗೆ ಭಾರತದ ಸಂವಿಧಾನ ಮತ್ತು ಏಕತೆ ಕಾರ್ಯಕ್ರಮವನ್ನು ಆಚರಿಸುವ ಕುರಿತು ಪ್ರಸ್ತಾಪಿಸಲು ಹಾಗೂ ಏಕಕಾಲದಲ್ಲಿ ರಾಜ್ಯದ 31 ಜಿಲ್ಲೆಗಳಲ್ಲಿ ಆಚರಿಸುವ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಮೆರವಣಿಗೆಗೆ ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಎರಡೂ ಸ್ತಬ್ಧಚಿತ್ರಗಳು ಜಿಲ್ಲೆಯಾದ್ಯಂತ 27 ದಿನಗಳ ಕಾಲ ಸಂಚರಿಸಲಿವೆ. ಜನವರಿ 26 ರಿಂದ ಫೆಬ್ರವರಿ 23ರವರೆಗೆ ಸ್ತಬ್ಧಚಿತ್ರ ಜಿಲ್ಲೆಯಾದ್ಯಂತ ಸಂಚರಿಸಿ, ಫೆ. 23ರಂದು ಬೆಂಗಳೂರಿಗೆ ಎರಡೂ ಸ್ತಬ್ಧಚಿತ್ರಗಳು ತಲುಪಲಿವೆ. ಒಂದು ವಿಜಯಪುರದಿಂದ ಹಾಗೂ ಇನ್ನೊಂದು ಇಂಡಿಯಿಂದ ಸ್ತಬ್ಧಚಿತ್ರ ಸಂಚರಿಸಲಿದೆ. ಜಿಲ್ಲೆಯ 13 ತಾಲೂಕಿನ 211 ಗ್ರಾಮ ಪಂಚಾಯತಿ ಹಾಗೂ ಪಟ್ಟಣ ಪಂಚಾಯತಿ ಪುರಸಭೆ ವ್ಯಾಪ್ತಿಗಳಲ್ಲಿ ಸ್ತಬ್ಧಚಿತ್ರ ಸಂಚರಿಸಲಿವೆ ಎಂದು ಹೇಳಿದರು.
ಜಿಲ್ಲೆಯ ಚಡಚಣ ತಾಲೂಕಿನಲ್ಲಿ 3 ದಿನ, ಇಂಡಿ ತಾಲೂಕಿನಲ್ಲಿ 9 ದಿನ, ಆಲಮೇಲ ತಾಲೂಕಿನಲ್ಲಿ 3 ದಿನ, ದೇವರಹಿಪ್ಪರಗಿ ತಾಲೂಕಿನಲ್ಲಿ 4 ದಿನ, ಸಿಂದಗಿ ತಾಲೂಕಿನಲ್ಲಿ 4 ದಿನ, ತಾಳಿಕೋಟೆ ತಾಲೂಕಿನಲ್ಲಿ 4 ದಿನ, ಮುದ್ದೇಬಿಹಾಳ ತಾಲೂಕಿನಲ್ಲಿ 6 ದಿನ, ಬಸವನ – ಬಾಗೇವಾಡಿ ತಾಲೂಕಿನಲ್ಲಿ 4 ದಿನ, ಕೊಲ್ದಾರ ತಾಲೂಕಿನಲ್ಲಿ 2 ದಿನ, ಬಬಲೇಶ್ವರ ತಾಲೂಕಿನಲ್ಲಿ 4 ದಿನ, ತಿಕೋಟಾ ತಾಲೂಕಿನಲ್ಲಿ 4 ದಿನ ಹಾಗೂ ವಿಜಯಪುರ ತಾಲೂಕಿನಲ್ಲಿ 6 ದಿನ, ನಿಡಗುಂದಿ ತಾಲೂಕಿನಲ್ಲಿ 3 ದಿನ ಕಾಲ ಸ್ತಬ್ಧಚಿತ್ರ ಸಂಚರಿಸಲಿವೆ ಎಂದು ಅವರು ಹೇಳಿದರು.
ದೇವರಹಿಪ್ಪರಗಿ ತಾಲೂಕಿಗೆ ಇಂಡಿ ಕೃಷಿ ಇಲಾಖೆ ಉಪನಿರ್ದೇಶಕ ಚಂದ್ರಕಾಂತ ಪವಾರ, ಆಲಮೇಲ ತಾಲೂಕಿಗೆ ಅಲ್ಪಸಂಖ್ಯಾತರ ಇಲಾಕೆ ಜಿಲ್ಲಾ ಅಧಿಕಾರಿ ಪ್ರಶಾಂತ ಪೂಜಾರಿ, ಮುದ್ದೇಬಿಹಾಳ ತಾಲೂಕಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ
ಈರಣ್ಣ ತಾಲೂಕಿಗೆ ಆಶಾಪುರ, ತಾಳಿಕೋಟೆ ಭೂದಾಖಲೆಗಳ ಇಲಾಖೆ ಉಪನಿರ್ದೇಶಕ ಮಹಾಂತೇಶ ಮುಳಗುಂದ, ಬಸವನಬಾಗೇವಾಡಿ ತಾಲೂಕಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಕೊಲ್ದಾರ ತಾಲೂಕಿಗೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್.ನಾಗೂರ ಹಾಗೂ ನಿಡಗುಂದಿ ತಾಲೂಕಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ ಅವರನ್ನು ನೇಮಕ ಮಾಡಲಾಗಿದ್ದು, ಎರಡೂ ಸ್ತಬ್ಧ ಚಿತ್ರಗಳು ವ್ಯವಸ್ಥಿತವಾಗಿ ಸಂಚರಿಸಲು ನಿರ್ವಹನೆಗಾಗಿ ತಾಲೂಕಾವಾರು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ತಾಲೂಕಾ ಮಟ್ಟದಲ್ಲಿ ಸಂಬಂಧಿಸಿದ ತಹಶೀಲ್ದಾರರು ಹಾಗೂ ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ
ಅಧಿಕಾರಿಗಳು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ತಾಲೂಕಾ ಹಂತದಲ್ಲಿ ಸಭೆ ಕರೆದು, ಮೆರವಣಿಗೆ, ರಚನೆ ಮತು ಸಂಯೋಜನೆ ಮಾರ್ಗ, ತುಂಗುವಿಕೆ, ವಸತಿ, ವಿಶ್ರಾಂತಿ, ಸುರಕ್ಷತೆ ಸೇರಿದಂತೆ ಪ್ರತಿದಿನ 6 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ತಬ್ಧಚಿತ್ರಗಳು ಸಂಚರಿಸುವಂತೆ ನೋಡಿಕೊಳ್ಳಲು ಸೂಕ್ತ ರೂಪರೇಷೆ (ರೂಟ್ಮ್ಯಾಪ್) ಸಿದ್ಧಪಡಿಸಿಟ್ಟುಕೊಳ್ಳಬೇಕು ಸೂಚನೆ ನೀಡಿದರು.
ಜಿಲ್ಲೆಯಾದ್ಯಂತ ಸಂಚರಿಸಲಿರುವ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರದ ಯಶಸ್ವಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ವಿವಿಧ ತಾಲೂಕಾ ತಹಶೀಲ್ದಾರ, ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ, ಪಟ್ಟಣ ಪಂಚಾಯತಿ ಅಧಿಕಾರಿಗಳು ಕಾರ್ಯನಿರ್ವಹಿಸಿ ಸಮನ್ವಯತೆಯಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪುಂಡಲೀಕ ಮಾನವರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಈರಣ್ಣ ಆಶಾಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ ಭಜಂತ್ರಿ, ವಿಜಯಪುರ ತಹಶೀಲ್ದಾರ ಶ್ರೀಮತಿ ಕವಿತಾ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.