• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      Voiceofjanata.in

      July 2, 2026
      0
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್
      0
      SHARES
      6
      VIEWS
      Share on FacebookShare on TwitterShare on whatsappShare on telegramShare on Mail

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

       

      ಬೆಳಗಾವಿಯ : ಕಂದಾಯ ವಿಭಾಗದ ಪ್ರಗತಿ ಪರಿಶೀಲನಾ ಸಭೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದೆ. ಭೂ ದಾಖಲೆಗಳ ನಿರ್ವಹಣೆಗೆ ಬಳಸಲಾಗುತ್ತಿರುವ ಅತ್ಯಾಧುನಿಕ ಇ-ಖಜಾನೆ ವ್ಯವಸ್ಥೆಯನ್ನು ಪರಿಶೀಲಿಸಿದೆ.

      ಭೂ ದಾಖಲೆಗಳ ಕೊಠಡಿ, ಡಿಜಿಟಲೀಕರಣ, ಇ-ಖಜಾನೆ ವ್ಯವಸ್ಥೆಯ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಒದಗಿಸಲಾಗುತ್ತಿರುವ ಸೇವೆಗಳ ಕುರಿತು ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದೆ.

      ಆಡಳಿತದಲ್ಲಿ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳುವ ಮೂಲಕ ಸಾರ್ವಜನಿಕರಿಗೆ ತ್ವರಿತ, ಪಾರದರ್ಶಕ ಮತ್ತು ಗುಣಮಟ್ಟದ ಸೇವೆಗಳನ್ನು ಒದಗಿಸುವುದು ನಮ್ಮ ಸರ್ಕಾರದ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆ.

      ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಆಯುಕ್ತರಾದ ಮೀನಾ ನಾಗರಾಜ್, ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್‌ ರೋಶನ್‌ ಇದ್ದರು.
      ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಇಂದು ಕಿತ್ತೂರಿಗೆ ಭೇಟಿ ನೀಡಿ, ಸ್ವಾತಂತ್ರ್ಯ ಹೋರಾಟದ ವೀರ ಮಹಿಳೆ ರಾಣಿ ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳಿಗೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು.

      ಇಂದು ಬೆಳಗಾವಿಯ ಸುವರ್ಣಸೌಧದ ಸೆಂಟ್ರಲ್‌ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ʼಕಂದಾಯ ದಿನಾಚರಣೆʼ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆಯ ʼಬೆಳಗಾವಿ ವಿಭಾಗ ಪ್ರಗತಿ ಪರಿಶೀಲನಾ ಸಭೆʼಯನ್ನು ಉದ್ಘಾಟಿಸಿದೆ.

      ಸಮಾರಂಭದಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್, ವಿಪತ್ತು ನಿರ್ವಹಣಾ ಇಲಾಖೆಯ ಅಪರ‌ ಮುಖ್ಯ ಕಾರ್ಯದರ್ಶಿಗಳಾದ ಮನೋಜ್ ಕುಮಾರ್ ಮೀನಾ, ಪಶುಸಂಗೋಪನಾ ಇಲಾಖೆಯ ಕಾರ್ಯದರ್ಶಿಗಳಾದ ವಿನೋದ್ ಪ್ರಿಯ, ಕಂದಾಯ ಇಲಾಖೆಯ ಆಯುಕ್ತರಾದ ಮೀನಾ ನಾಗರಾಜ್, ಭೂಮಾಪನ ಮತ್ತು ದಾಖಲೆಗಳ ಆಯುಕ್ತರಾದ ವೆಂಕಟರಾಜಾ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತರಾದ ಹೊನ್ನಾಂಬ, ಕಂದಾಯ ಇಲಾಖೆಯ ಬೆಳಗಾವಿ ವಿಭಾಗ ಪ್ರಾದೇಶಿಕ ಆಯುಕ್ತರಾದ ಜಾನಕಿ ಕೆ.ಎಂ., ಪಶುಸಂಗೋಪನಾ ಇಲಾಖೆಯ ಆಯುಕ್ತರಾದ ಶಿಲ್ಪಾ ನಾಗರಾಜ್ ಹಾಗೂ ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.
      ಇಂದು ಬೆಳಗಾವಿ ಜಿಲ್ಲಾ ಪ್ರವಾಸದ ವೇಳೆ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆ.

      ಎಸ್‌ಐಆರ್‌ ಕುರಿತು ದೇಶಾದ್ಯಂತ ವಿವಿಧ ಚರ್ಚೆಗಳು ನಡೆದಿದ್ದು, ಅದರ ಸಾಧಕ–ಬಾಧಕಗಳ ಕುರಿತಾಗಿ ಚರ್ಚಿಸಲಾಗಿದೆ. ಇತರೆ ರಾಜ್ಯಗಳಲ್ಲಿ ಚುನಾವಣಾ ಪ್ರಕ್ರಿಯೆಗಳ ಸಂದರ್ಭದಲ್ಲಿ ಉಂಟಾದ ಸವಾಲುಗಳ ಅನುಭವವನ್ನು ಗಮನದಲ್ಲಿಟ್ಟುಕೊಂಡು, ರಾಜ್ಯದಲ್ಲಿ ಮತದಾರರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಮುಖ್ಯವಾಗಿದೆ.

      ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಎಸ್‌ಐಆರ್‌ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯಬೇಕು. ಬಿಎಲ್‌ಒಗಳು ಮತ್ತು ಸಂಬಂಧಿತ ಅಧಿಕಾರಿಗಳು ಪರಸ್ಪರ ಸಂಪರ್ಕ ಇಟ್ಟುಕೊಂಡು, ಅರ್ಹ ಮತದಾರರ ಹೆಸರು ಅನಗತ್ಯವಾಗಿ ಕೈಬಿಡದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು. ವಸತಿ ಪ್ರಮಾಣಪತ್ರ ನೀಡುವ ಪ್ರಕ್ರಿಯೆಯನ್ನು ಸುಗಮಗೊಳಿಸಲು ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್‌ಗಳಿಗೆ ಅಧಿಕಾರ ನೀಡಲಾಗಿದ್ದು, ಇದರಿಂದ ಸಾರ್ವಜನಿಕರಿಗೆ ಆಗುವ ತೊಂದರೆ ಕಡಿಮೆಯಾಗಲಿದೆ.

      ಕೇಂದ್ರದಲ್ಲಿ ಅಧಿಕಾರ ಕಳೆದುಕೊಂಡು 15 ವರ್ಷಗಳ ಅವಧಿಯಲ್ಲಿ ಅನೇಕ ಸವಾಲುಗಳನ್ನು ಎದುರಿಸಿದ್ದೇವೆ. ಕೇಂದ್ರದಿಂದ ಅನುದಾನ ವಿಳಂಬ, ಯೋಜನೆಗಳ ಅನುಷ್ಠಾನದಲ್ಲಿ ತೊಂದರೆ, ಬಡಜನರಿಗೆ ಅಗತ್ಯ ಸೌಲಭ್ಯಗಳನ್ನು ತಲುಪಿಸುವಲ್ಲಿ ಹಲವು ಸಮಸ್ಯೆಗಳನ್ನು ಅನುಭವಿಸಿದ್ದೇವೆ. ಜೆಜೆಎಂ ಯೋಜನೆ ಹಾಗೂ ನರೇಗಾ ಕಾರ್ಯಕ್ರಮಗಳಿಗೂ ಅಗತ್ಯ ಹಣಕಾಸು ನೆರವು ದೊರೆಯದಿರುವ ಪರಿಸ್ಥಿತಿಗಳನ್ನು ಕಂಡಿದ್ದೇವೆ. ಕೇಂದ್ರ ಸರ್ಕಾರದಿಂದ ಸಿಗದ ಬೆಂಬಲ ಮತ್ತು ಸಹಕಾರದ ಕೊರತೆಯು ಅಭಿವೃದ್ಧಿ ಕಾರ್ಯಗಳ ಮೇಲೆ ಬೀರುವ ಪರಿಣಾಮದ ಬಗೆಗಿನ ಅನುಭವ ನಮಗಿದೆ.

      ಕಾಂಗ್ರೆಸ್‌ ಪಕ್ಷ ಬಡವರ ಕಲ್ಯಾಣವನ್ನೇ ಪ್ರಮುಖ ಆದ್ಯತೆಯನ್ನಾಗಿರಿಸಿಕೊಂಡಿದೆ. ನಾವು ಜಾರಿಗೆ ತಂದಿರುವ ಜನಪರ ಯೋಜನೆಗಳು ಹಾಗೂ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯಬೇಕಾದರೆ 2028ರಲ್ಲಿಯೂ ಮತ್ತೊಮ್ಮೆ ಜನರ ಆಶೀರ್ವಾದ ನಮಗೆ ಬೇಕು. ಇದೇ ಕಾರಣಕ್ಕಾಗಿ ಎಸ್‌ಐಆರ್‌ ಪ್ರಕ್ರಿಯೆಯನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಕಾರಣಕ್ಕೂ ಮತದಾರರ ಹಕ್ಕಿಗೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು. ಎಲ್ಲಿ ತಪ್ಪುಗಳು ಕಂಡುಬಂದರೂ ಅವುಗಳ ಮೇಲ್ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.

      ಕೆಪಿಸಿಸಿಗೆ ನೂತನ ಅಧ್ಯಕ್ಷರು ಅಧಿಕಾರ ವಹಿಸಿಕೊಂಡ ಬಳಿಕ ಸ್ವಾಭಾವಿಕವಾಗಿ ಪದಾಧಿಕಾರಿಗಳು ಹಾಗೂ ಕಾರ್ಯನಿರ್ವಾಹಕ ಹುದ್ದೆಗಳಲ್ಲಿ ಬದಲಾವಣೆಗಳು ನಡೆಯುತ್ತವೆ. ಆಯಾ ಜಿಲ್ಲೆಗಳಲ್ಲಿ ಪಕ್ಷಕ್ಕಾಗಿ ಸಮರ್ಪಿತವಾಗಿ ದುಡಿದ, ಅರ್ಹತೆ ಹೊಂದಿರುವ ಕಾರ್ಯಕರ್ತರು ಹಾಗೂ ಅಧಿಕಾರಿಗಳನ್ನು ಗುರುತಿಸಿ ಸೂಕ್ತ ಜವಾಬ್ದಾರಿಗಳನ್ನು ನೀಡಲಾಗುತ್ತದೆ. ಸಚಿವರು, ಶಾಸಕರು ಹಾಗೂ ಜಿಲ್ಲಾಧ್ಯಕ್ಷರೊಂದಿಗೆ ಸಮನ್ವಯ ಸಭೆ ನಡೆಸಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ವಿವಿಧ ಹುದ್ದೆಗಳಿಗೆ ಸೂಕ್ತ ಹೆಸರುಗಳ ಪಟ್ಟಿಯನ್ನು ಸಿದ್ಧಪಡಿಸಿ ಸಲ್ಲಿಸಿದರೆ, ಅದನ್ನು ಪರಿಶೀಲಿಸಿ ಅಧ್ಯಕ್ಷರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು.

      ಕಾಂಗ್ರೆಸ್‌ ಕಚೇರಿ ನಮಗೆ ದೇವಾಲಯವಿದ್ದಂತೆ , ಪಕ್ಷ ತಾಯಿಯಿದ್ದಂತೆ. ಆದ್ದರಿಂದ ಅದರ ಅಭಿವೃದ್ಧಿ ಮತ್ತು ನಿರ್ವಹಣೆಯಲ್ಲಿ ಯಾವುದೇ ನಿರ್ಲಕ್ಷ್ಯ ಇರಬಾರದು. ಅಧ್ಯಕ್ಷನಾಗಿದ್ದ ಅವಧಿಯಲ್ಲಿ ವಿವಿಧ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಸುಮಾರು 13 ಕಟ್ಟಡಗಳ ನಿರ್ಮಾಣ ಕಾರ್ಯ ಕೈಗೊಳ್ಳಲಾಗಿತ್ತು. ಭಾರತ್‌ ಜೋಡೋ ಕಟ್ಟಡವನ್ನು ಸುಮಾರು ₹20 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಅದರ ಉದ್ಘಾಟನೆಗೂ ಮುನ್ನ ಅಧಿಕಾರದಿಂದ ಹೊರಬಂದಿದ್ದೆ.

      ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಕಚೇರಿ ನಿರ್ಮಾಣದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್‌ ಹಾಗೂ ಸತೀಶ್‌ ಜಾರಕಿಹೊಳಿ ಅವರ ಶ್ರಮವೂ ಮಹತ್ವದ್ದಾಗಿದೆ. ಕಚೇರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಚಿವ ಸಂಪುಟದಲ್ಲಿ ಹಲವು ಚರ್ಚೆಗಳು ನಡೆದಿದ್ದವು. ಶ್ರೀ ಡಿ.ಕೆ. ಶಿವಕುಮಾರ್‌ ಅವರು ಸಚಿವರಾಗಿದ್ದ ಸಂದರ್ಭದಲ್ಲಿ ಬೆಳಗಾವಿ ಕಾಂಗ್ರೆಸ್‌ ಕಚೇರಿಗೆ ಸೂಕ್ತ ಜಾಗ ಪಡೆಯುವ ಅಗತ್ಯವನ್ನು ಒತ್ತಾಯಿಸಿದ್ದರು. ಪ್ರಮುಖ ಸ್ಥಳದಲ್ಲಿದ್ದ ಆ ಜಾಗವನ್ನು ಖರೀದಿಸಲು ₹25 ಲಕ್ಷ ಅನುದಾನ ನೀಡಿ ಅಡಿಗಲ್ಲು ಹಾಕಲಾಗಿತ್ತು.

      ನಮ್ಮ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಸಚಿವರು ಜಿಲ್ಲೆ ಅಥವಾ ತಾಲ್ಲೂಕು ಮಟ್ಟಕ್ಕೆ ಭೇಟಿ ನೀಡಿದಾಗ ಸ್ಥಳೀಯ ಪಕ್ಷದ ಕಚೇರಿಗೆ ಭೇಟಿ ನೀಡಲು ಸೂಚಿಸಿದ್ದೆ. ಈ ಮೂಲಕ ಆಯಾ ಭಾಗದ ಕಾರ್ಯಕರ್ತರೊಂದಿಗೆ ಸಂಪರ್ಕ ಬೆಳೆಯಬೇಕು ಎಂಬ ಉದ್ದೇಶವಿತ್ತು. ಕೆಲವರು ಅದನ್ನು ಅನುಸರಿಸಿದರೆ, ಕೆಲವರು ಅನುಸರಿಸಲು ಸಾಧ್ಯವಾಗಿರಲಿಲ್ಲ.

      ನಾನು ಚಿಕ್ಕ ವಯಸ್ಸಿನಲ್ಲೇ ಕಾಂಗ್ರೆಸ್‌ ಪಕ್ಷಕ್ಕಾಗಿ ದುಡಿಯಲು ಶುರು ಮಾಡಿದವನು. ಆರಂಭದಲ್ಲಿ 7 ವರ್ಷ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದೆ. ಆ ಬಳಿಕ ಧರಂ ಸಿಂಗ್‌ ಮತ್ತು ಎಸ್‌.ಎಂ.ಕೃಷ್ಣ ಅವರು ನನ್ನನ್ನು ಉಪಾಧ್ಯಕ್ಷರನ್ನಾಗಿ ಮಾಡಿದರು. ನಂತರದಲ್ಲಿ ಸೋನಿಯಾ ಗಾಂಧಿ ಅವರು ಕಾರ್ಯಕಾರಿ ಸಮಿತಿಗೆ ಸದಸ್ಯನಾಗಿ ಮಾಡಿದರು. ಅದಾಗಿ ಪ್ರಚಾರ ಸಮಿತಿಯ ಅಧ್ಯಕ್ಷನಾದೆ. ಆದ್ದರಿಂದ ಪಕ್ಷಕ್ಕಾಗಿ ದುಡಿಯುವ ಪ್ರತಿ ಕಾರ್ಯಕರ್ತನಿಗೂ ಅವಕಾಶ ಸಿಕ್ಕೇ ಸಿಗುತ್ತದೆ. ನಾವೆಲ್ಲರೂ ಜೊತೆಯಾಗಿ ಪಕ್ಷಕ್ಕಾಗಿ ದುಡಿಯೋಣ. ದೀನ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಈ ಸಮುದಾಯಗಳ ಏಳಿಗಾಗಿ ಶ್ರಮಿಸೋಣ.

      ಪಕ್ಷದ ಕಾರ್ಯಕರ್ತರಿಗೆ ಜವಾಬ್ದಾರಿ ನೀಡುವ ಕುರಿತು ಒಂದು ಸಮಿತಿಯನ್ನು ರಚಿಸಲಾಗಿತ್ತು. ಅದಕ್ಕೆ ನಾನೇ ಅಧ್ಯಕ್ಷನಾಗಿದ್ದೆ. ಪ್ರಕ್ರಿಯೆಯಲ್ಲಿ ರಾಜ್ಯಾದ್ಯಂತ ಸುಮಾರು 800 ಕಾರ್ಯಕರ್ತರನ್ನು ಗುರುತಿಸಿ, ಯಾವ ಸಮಿತಿಗೆ ಅವರನ್ನು ಆಯ್ಕೆ ಮಾಡಬೇಕು ಎಂಬ ವರದಿಯನ್ನು ಸಿದ್ಧಪಡಿಸಿ ಅಂದಿನ ಅಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದೆ. ಆದರೆ ಕಾರಣಾಂತರಗಳಿಂದ ಅದು ಕಾರ್ಯರೂಪಕ್ಕೆ ಬರಲಿಲ್ಲ. ಈಗ ಹೊಸದಾಗಿ ಮುಖ್ಯಮಂತ್ರಿಗಳು, ಕೆಪಿಎಸ್‌ಸಿ ಅಧ್ಯಕ್ಷರು ಬಂದಿದ್ದಾರೆ. ಕಾರ್ಯಕರ್ತರಿಗೆ ಅಧಿಕಾರ ನೀಡುವ ಬಗ್ಗೆ ಈಗಾಗಲೇ ಅನೇಕ ಚರ್ಚೆಗಳು ಕೂಡ ಆಗಿವೆ. ಆದಷ್ಟು ಶೀಘ್ರವಾಗಿ ಇವರಿಬ್ಬರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಮಾಡುತ್ತೇನೆ.

      ನನಗೆ ಪಕ್ಷದ ಬಗ್ಗೆ ಮೊದಲಿನಿಂದಲೂ ಅಪಾರ ಗೌರವವಿದೆ. ಸ್ವಾತಂತ್ರ್ಯ ಹೋರಾಟದ ಪರಂಪರೆ ಇರುವ ನಮ್ಮ ಪಕ್ಷ ಜನರಿಗೆ ಆತ್ಮವಿಶ್ವಾಸ ಮತ್ತು ಧೈರ್ಯ ತುಂಬಿದೆ. ಅದನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮಿಂದ ಆಗಬೇಕು. ಸುಮಾರು 11 ವರ್ಷಗಳಿಂದ ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷಕ್ಕಾಗಿ ದುಡಿಯುತ್ತಿರುವ ಶ್ರೀ ವಿನಯ್‌ ಅವರಿಗೆ ಅಭಿನಂದನೆಗಳು.

      ಈ ಬಾರಿ ಮಳೆಯ ಪ್ರಮಾಣ ಕಡಿಮೆ ಇದೆ. ದೇಶದಲ್ಲೇ ಸುಮಾರು 75% ಭಾಗದಲ್ಲಿ ಬರ ಸೃಷ್ಟಿಯಾಗಿದೆ. ಇನ್ನು ಮಳೆ ಬರುವ ಮುನ್ಸೂಚನೆಯೂ ಇಲ್ಲ. ನೀರಿನ ಕೊರತೆ ಎದುರಿಸಬಹುದಾದ 7 ಜಿಲ್ಲೆಗಳ ಜಿಲ್ಲಾಧಿಕಾರಗಳ ಜೊತೆಗೆ ಸಭೆ ನಡೆಸಿ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ಹಾಗೂ ಜನರಿಗೆ ಸಮಸ್ಯೆಯಾಗದಂತೆ ಎಚ್ಚರ ವಹಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡುತ್ತೇನೆ.

      Page minister..

      Tags: #Deputy Chief Minister visits Kittur Taluk Administrative Complex.#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in#ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      ಇಂಡಿ ಸಬ್ ರಿಜಿಸ್ಟರ್ ಕಛೇರಿ ಮೇಲೆ ‌ಲೋಕಾಯುಕ್ತ ದಾಳಿ..! ತನಿಖೆ ಮುಂದುವರೆದಿದೆ..

      July 2, 2026
      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      ಸರ್ಕಾರಿ ಉರ್ದು  ಶಾಲೆಯಲ್ಲಿ ವಿಶ್ವ ವೈದ್ಯರ ದಿನಾಚರಣೆ

      July 2, 2026
      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      ಕಿತ್ತೂರು ತಾಲೂಕು ಆಡಳಿತ ಸೌಧಕ್ಕೆ ಭೇಟಿ ನೀಡಿದ ಡಿಸಿಎಮ್

      July 2, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.