ಅಫಜಲಪುರ: ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಸೇವಾ ಸಮಿತಿಯಂದ 2 ಸಾಮಾನ್ಯ ಸೇವಾ ಕೇಂದ್ರಗಳಿಗೆ ಚಾಲನೆ ನೀಡಲಾಯಿತು. ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ರಮೇಶ ಧೂಳಪ್ಪ ಬಾಕೆ ಹಾಗೂ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಕಮೀಟಿ ಅಧ್ಯಕ್ಷ ಮಹಾದೇವಪ್ಪ ಕರೂಟಿ ಅವರು ಸೇವಾ ಕೇಂದ್ರಗಳನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಹಾದೇವಪ್ಪ ಕರೂಟಿ ಮಾತನಾಡಿ, ಸರ್ಕಾರದ ಎಲ್ಲ ಸೌಲಭ್ಯಗಳು ಡಿಜಿಟಲ್ ಆಗಿರುವುದರಿಂದ ಈ ಸೇವೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸಿಗುವ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸೇವಾಕೇಂದ್ರಗಳನ್ನು ತೆರೆಯಲಾಗಿದೆ. ಗ್ರಾಮದ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅನೇಕ ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದು ಗ್ರಾಮೀಣ ಮಟ್ಟದ ಜನರಿಗೆ ಬಹಳಷ್ಟು ಅನುಕೂಲವಾಗುತ್ತಿದೆ.
ಗ್ರಾಮೀಣ ಭಾಗದ ಜನರಿಗೆ ಸಾಮಾನ್ಯ ಸೇವಾ ಕೇಂದ್ರದ ಬಗ್ಗೆ ಅರಿವು ಮೂಡಿಸಬೇಕು. ಸಾಮಾನ್ಯ ಸೇವಾ ಕೇಂದ್ರಗಳನ್ನು ಮಣ್ಣೂರ ಗ್ರಾಮದಲ್ಲಿ ಆರಂಭಿಸಿದ್ದು ತುಂಬಾ ಸಂತೋಷದ ಸಂಗತಿಯಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಗ್ರಾಮಸ್ಥರ ಪರವಾಗಿ ಅಭಿನಂದನೆ ಸಲ್ಲಿಸುತ್ತೇವೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಶಿವರಾಜ ಆಚಾರ್ಯ ಮೇಲ್ವಿಚಾರಕ ಅನೀಲ್ ದಾವಣೆ
ಗ್ರಾಮ ಪಂಚಾಯತಿ ಸದಸ್ಯರಾದ ಬಸವರಾಜ ವಾಯಿ, ಹಣಮಂತ ನಾವಾಡಿ ಮುಖಂಡರಾದ ಅಪ್ಪಾಸಾಬ ಹೊಸೂರಕರ ಮಾಳಪ್ಪ ಪೂಜಾರಿ, ಮಲಕಣ್ಣ ಹೊಸೂರಕರ, ಚಂದು ಹಿರೇಕುರುಬರ ಮಹಾಂತೇಶ ಕರೂಟಿ ಬಸವರಾಜ ಜನ್ನಾ, ಮಾಳು ಸೇಜುಳೆ, ನೊಡಲ್ ಅಧಿಕಾರಿ ಮಹೇಶ, ಒಕ್ಕೂಟದ ಅಧ್ಯಕ್ಷೆ ಲಕ್ಷ್ಮಿ ಬಾಕೆ ಸೇರಿದಂತೆ ಮಹಿಳಾ ಸ್ವಸಹಾಯ ಸಂಘದ ಪದಾಧಿಕಾರಿಗಳಿದ್ದರು.