ದೈ.ನಿ ಎ.ಎಸ್ ಮಸಳಿ ನಿವೃತ್ತಿ, ಬಿಳ್ಕೊಡುವ ಸಮಾರಂಭ
ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ದೈಹಿಕ ನಿರ್ದೇಶಕ ಎ. ಎಸ್. ಮಸಳಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಇಂದು ಶನಿವಾರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಎ. ಎಸ್. ಮಸಳಿ ದಂಪತಿಯನ್ನು ಶಿಕ್ಷಣ ಮಹಾವಿದ್ಯಾಲಯ, ಆಡಳಿತಾಧಿಕಾರಿಗಳು ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಾನಾ ವಿಭಾಗಗಳ ಮುಖ್ಯಸ್ಥರು, ದೈಹಿಕ ಶಿಕ್ಷಕರು, ಸಿಬ್ಬಂದಿ, ಶಿಷ್ಯ ಬಳಗ ಹಾಗೂ ಸಂಬಂಧಿಕರಿಂದ ಸನ್ಮಾನಿಸಿ ಅಭಿನಂದಿಸಿದರು.
ಈ ವೇಳೆ ಮಾತನಾಡಿದ ಎ. ಎಸ್. ಮಸಳಿ ಅವರು, ತಮ್ಮ 30 ವರ್ಷಗಳ ಸೇವೆಯಲ್ಲಿ 23 ವರ್ಷ ಸಂಸ್ಥೆಯ ಸಿ.ಪಿ.ಎಡ್ ಕಾಲೇಜಿನಲ್ಲಿ ದೈಹಿಕ ಸದೃಢತೆಯನ್ನು ಪಡೆದುಕೊಂಡರೆ ಏಳು ವರ್ಷ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸಂಸ್ಕಾರವನ್ನು ಪಡೆದುಕೊಂಡಿದ್ದೇನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಎಸ್. ಕೋರಿ, ಸಹನಿರ್ದೇಶಕ ಕೈಲಾಸ ಹಿರೇಮಠ, ಆಡಳಿತ ಕಚೇರಿ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ), ಎಸ್.ಎಸ್. ಹೈಸ್ಕೂಲ್ ಆವರಣದ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ, ಕಾಲೇಜಿನ ಪ್ರಾಚಾರ್ಯೆ ಡಾ. ಭಾರತಿ ವೈ. ಖಾಸನಿಸ, ಸಹಪ್ರಾಧ್ಯಾಪಕ ಡಾ. ಎಂ. ಬಿ. ಕೋರಿ, ಸಿ.ಪಿ.ಎಡ್ ಕಾಲೇಜ್ ಪ್ರಾಚಾರ್ಯ ಎಂ. ಪಿ. ಕುಪ್ಪಿ, ನಾನಾ ವಿಭಾಗಗಳ ಮುಖ್ಯಸ್ಥರು, ದೈಹಿಕ ಶಿಕ್ಷಕರು, ಸಿಬ್ಬಂದಿ, ಶಿಷ್ಯ ಬಳಗ, ಸಂಬಂಧಿಕರು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಸಹಪ್ರಾಧ್ಯಾಪಕ ಡಾ. ಎಂ. ಎಸ್. ಹಿರೇಮಠ, ಸಹಾಯಕ ಪ್ರಾಧ್ಯಾಪಕ ಡಾ. ಎಸ್. ಪಿ. ಶೇಗುಣಸಿ ನಿರೂಪಿಸಿದರು. ಸಹಾಯಕ ಪ್ರಾಧ್ಯಾಪಕಿ ಡಾ. ಜ್ಯೋತಿ ಎಸ್. ಪಟ್ಟಣಶೆಟ್ಟಿ ವಂದಿಸಿದರು.
1 and 2 JSS B Ed collage retire felicitation*: ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದ ದೈಹಿಕ ನಿರ್ದೇಶಕ ಎ. ಎಸ್. ಮಸಳಿ ಅವರು ಸೇವಾ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ಅವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಎಸ್. ಎಸ್. ಕೋರಿ, ಐ. ಎಸ್. ಕಾಳಪ್ಪನವರ, ವೈ. ಎಸ್. ಖಾನಿನಿಸ್, ಎಸ್. ಎ. ಬಿರಾದಾರ(ಕನ್ನಾಳ), ಮಂಜುನಾಥ ಕೋರಿ ಮುಂತಾದವರು ಉಪಸ್ಥಿತರಿದ್ದರು.