ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಗೆ ಆಯ್ಕೆಯಾದ ಪರೀದಬೇಗಂ ಅವರಿಗೆ ಗೌರವ ಸನ್ಮಾನ
ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ : ಪಟ್ಟಣದ ಸರ್ಕಾರಿ ಉರ್ದು ಹೆಣ್ಣು ಮಕ್ಕಳ ಮಾದರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ಮಾತೆಯರಾದ ಪರೀದ ಬೇಗಂ ಎಸ್. ಬಾಗವಾನ ಅವರು ಈ ಬಾರಿ ಜಿಲ್ಲಾ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದರಿಂದ ಅವರನ್ನು ಅಭಿನಂದಿಸುವ ಕಾರ್ಯಕ್ರಮ ಶಾಲಾ ಆವರಣದಲ್ಲಿ ಭಾವಪೂರ್ಣವಾಗಿ ಜರುಗಿತು.
ಪುರಸಭೆಯ ಅಧ್ಯಕ್ಷ ಮಹಿಬೂಬ್ ಗೊಳಸಂಗಿ ಅವರು ತಮ್ಮ ಸ್ನೇಹಿತರ ಬಳಗದೊಂದಿಗೆ ಶಾಲೆಗೆ ಭೇಟಿ ನೀಡಿ, ಪರೀದ ಬೇಗಂ ಅವರನ್ನು ಸನ್ಮಾನಿಸಿದರು.
ಈ ವೇಳೆ ಮಾತೆಯರ ಶಿಕ್ಷಣ ಕ್ಷೇತ್ರದ ಸಾಧನೆ, ಮಕ್ಕಳಿಗೆ ನೀಡಿದ ನಿಷ್ಠಾವಂತ ಸೇವೆ ಹಾಗೂ ಶಾಲೆಯ ಅಭಿವೃದ್ದಿಗೆ ತೋರಿದ ಬದ್ಧತೆಯನ್ನು ಶ್ರಮಿಸಲಾಯಿತು.
ಕಾರ್ಯಕ್ರಮದಲ್ಲಿ ಪಟ್ಟಣದ ಕಾಂಗ್ರೆಸ್ ಮುಖಂಡರಾದ ಹುಸೇನ್ ಮುಲ್ಲಾ, ಮಾಜಿ ಪುರಸಭೆ ಸದಸ್ಯ ಪಿಂಟು ಸಾಲಿಮನಿ, ಸೇರಿದಂತೆ, ಹಾಗೂ ಶಾಲೆಯ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.


















