• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

      ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

      ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ..!

      Voiceofjanata.in

      November 15, 2024
      0
      ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ..!
      0
      SHARES
      775
      VIEWS
      Share on FacebookShare on TwitterShare on whatsappShare on telegramShare on Mail

      ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ..

      ಸಾಮಾಜಿಕ ಕಾಳಜಿಯೊಂದಿಗೆ ಕಾರ್ಯನಿರ್ವಹಿಸಿ ನೈಜ ಫಲಾನುಭವಿಗಳಿಗೆ ಲಾಭ ದೊರಕಿಸಿ

      ವಿಜಯಪುರ,ನ.15 :  ಸರ್ಕಾರಗಳು ಜನರ ಜೀವನ ಮಟ್ಟ ಸುಧಾರಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸುತ್ತವೆ. ಆ ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಂಡಲ್ಲಿ ಮಾತ್ರ ಯೋಜನೆಗಳು ಸಾರ್ಥಕವಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಯೋಜನೆಗಳ ಅನುಷ್ಠಾನದಲ್ಲಿ ಸಾಮಾಜಿಕ ಕಾಳಜಿ-ಜವಾಬ್ದಾರಿಯೊಂದಿಗೆ ಯೋಜನೆ ಅನುಷ್ಠಾನಗೊಳಿಸಿ ಫಲಾನುಭವಿಗಳಿಗೆ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಸೂಚನೆ ನೀಡಿದರು.

      ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ವಿಜಯಪುರ ಜಿಲ್ಲೆಯ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಎಸ್‍ಸಿಪಿ-ಟಿಎಸ್‍ಪಿ ಅನುದಾನ ಸಮರ್ಪಕವಾಗಿ ಬಳಕೆಯಾಗಬೇಕು. ಸಮರ್ಪಕ ಬಳಕೆ ಎಂದರೆ ಕೇವಲ ಹಣ ಖರ್ಚು ಮಾಡದೇ, ಯೋಜನೆಯ ಅನುಷ್ಠಾನದಿಂದ ಎಸ್ಸಿ-ಎಸ್ಟಿ ಫಲಾನುಭವಿಗಳಿಗೆ ಲಾಭ ದೊರೆತು ಅವರ ಜೀವನ ಮಟ್ಟ ಸುಧಾರಣೆಯಾಗಬೇಕು ಅಂದಾಗ ಮಾತ್ರ ಅನುದಾನದ ಸಮರ್ಪಕ ಬಳಕೆಯಾಗುತ್ತದೆ. ಈ ಕುರಿತು ಅಧಿಕಾರಿಗಳು ಜವಾಬ್ದಾರಿಯಿಂದ ಆದ್ಯತೆಯ ಮೇರೆ ಲಾಭ ದೊರಕಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.
      ಎಸ್ಟಿ-ಎಸ್ಟಿ ಅನುದಾನವನ್ನು ಒಂದೇ ನಿಗದಿತ ಕಡೆ ವ್ಯಯಿಸದೇ ಎಲ್ಲಿ ಅತ್ಯಂತ ಅವಶ್ಯಕತೆ ಇದೆ ಎಂಬುದು ಪರಿಶೀಲಿಸಿಕೊಂಡು ಅನುದಾನ ಪರಿಪೂರ್ಣ ಲಾಭ ದೊರಕಿಸಲು ಕ್ರಮ ವಹಿಸಬೇಕು. ಒಂದೇ ಅನುದಾನದಲ್ಲಿ ಹಲವು ಕಡೆ ವಿನಿಯೋಗಿಸದೇ ಒಂದೇ ನಿಗದಿತ ಯೋಜನೆಯ ಲಾಭ ಪರಿಪೂರ್ಣವಾಗಿ ದೊರಕಿಸಬೇಕು ಎಂದು ಸೂಚನೆ ನೀಡಿದರು.

      ಎಸ್‍ಸಿಪಿ-ಟಿಎಸ್‍ಪಿ ಯೋಜನೆಯಡಿ ಸೌಲಭ್ಯ ದೊರಕಿಸುವಾಗ ನೈಜ ಫಲಾನುಭವಿಗಳಿಗೆ ಪರಿಪೂರ್ಣ ಲಾಭ ದೊರಕಿದೆಯೇ ಇಲ್ಲ ಎಂದು ಪರಿಶೀಲನೆ ನಡೆಸಬೇಕು. ಉದಾಹರಣೆಗೆ ಕೃಷಿ ಇಲಾಖೆಯಿಂದ ಕೃಷಿ ಹೊಂಡ ಸೌಲಭ್ಯ ದೊರಕಿಸಿದ ನಂತರ ಫಲಾನುಭವಿ ತಾನು ಪಡೆದ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಇಲ್ಲ ಎಂಬುದನ್ನು ಅಧಿಕಾರಿಗಳು ನಿರಂತರ ಅನುಪಾಲನೆ ಮಾಡಬೇಕು. ಕೃಷಿ ಹೊಂಡದ ಸಹಾಯದಿಂದ ಯಾವ ಬೆಳೆ ಬೆಳೆಯುವುದರಿಂದ ಆರ್ಥಿಕ ಮಟ್ಟ ಸುಧಾರಣೆಯಾಗಲಿರುವ ಕುರಿತು ಸೂಕ್ತ ಜಾಗೃತಿ ಹಾಗೂ ಸಲಹೆ-ಸೂಚನೆಗಳನ್ನು ನೀಡಿ ಯೋಜನೆಯ ಪರಿಪೂರ್ಣ ಲಾಭ ದೊರಕಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸೂಚನೆ ನೀಡಿದರು.
      ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮಾಜದ ಅಭಿವೃದ್ದಿಗಾಗಿ ಅನುದಾನವನ್ನು ಸದ್ವಿನಿಯೋಗಿಸಿಕೊಳ್ಳಬೇಕು. ಶಿಕ್ಷಣಕ್ಕೆ ಪ್ರಥಮಾದ್ಯತೆ ನೀಡಿ, ವಿವಿಧ ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಲು ಅನುದಾನದ ಸಮರ್ಪಕ ಬಳಕೆಗೆ ಸೂಕ್ತ ಯೋಜನೆ ಸಿದ್ಧಪಡಿಸಿಟ್ಟುಕೊಂಡು ಯೋಜನೆಯನುಸಾರ ವಿನಿಯೋಗಿಸಿ ಅತಿ ಹೆಚ್ಚು ಲಾಭ ದೊರಕಿಸಲು ಕ್ರಮ ವಹಿಸಬೆಕು. ಪ್ರತಿ ವರ್ಷ ಬಿಡುಗಡೆಯಾಗುವ ಅನುದಾನದಲ್ಲಿ ಮುಂದಿನ 5 ವರ್ಷಗಳ ಕಾಲದ ಯೋಜನೆ ರೂಪಿಸಿಕೊಳ್ಳಬೇಕು.

      ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಕೇವಲ ವಸತಿ ನಿಲಯಗಳಿಗೆ ಸೌಲಭ್ಯ ಕಲ್ಪಿಸುವಲ್ಲಿ ಸೀಮಿತವಾಗದೇ, ಎಲ್ಲ ಇಲಾಖೆಗಳಲ್ಲಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಒದಗಿಸಲಾಗುತ್ತಿರುವ ಸೌಲಭ್ಯ ಕುರಿತು ಪರಿಶೀಲನೆ ನಡೆಸಿ, ನೈಜ ಫಲಾನುಭವಿಗಳಿಗೆ ಲಾಭ ದೊರಕುತ್ತಿದೆಯೇ ಇಲ್ಲ ಎಂಬುದರ ಕುರಿತು ನಿರಂತರವಾಗಿ ನಿಗಾ ವಹಿಸಬೇಕು. ಅನುದಾನದ ಲಾಭ ನೈಜ ಫಲಾನುಭವಿಗಳಿಗೆ ದೊರಕಿಸುವುದು ಸಮಾಜ ಕಲ್ಯಾಣ ಇಲಾಖೆ ಜವಾಬ್ದಾರಿಯಾಗಿದೆ. ಇದನ್ನರಿತು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ವಿವಿಧ ಇಲಾಖೆಗಳಲ್ಲಿ ಎಸ್ಸಿ-ಎಸ್ಟಿ ಅನುದಾನದಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲನೆ ನಡೆಸಬೇಕು ಎಂದು ಹೇಳಿದರು.
      ಎಸ್ಸಿ-ಎಸ್ಟಿ ಸಮುದಾಯದವರ ಸ್ಮಶಾನ ಜಾಗದ ಬೇಡಿಕೆಗೆ ಸ್ಪಂದಿಸಿ, ಸ್ಮಶಾನ ಜಾಗ ಒದಗಿಸಲು ಆದ್ಯತೆ ಮೇಲೆ ಕ್ರಮ ವಹಿಸಬೇಕು. ಎಸ್ಸಿ-ಎಸ್ಟಿ ಜಮೀನುಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಸೂಕ್ತ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಜಿಲ್ಲೆಯಲ್ಲಿ ಮಾಜಿ ದೇವದಾಸಿ ಮಹಿಳೆಯರಿಗೆ ಪುನರ್ವಸತಿ ಕಲ್ಪಿಸುವ ನಿಟ್ಟಿನಲ್ಲಿ ವಸತಿ ಇಲ್ಲದೇ ಇರುವವರನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಕಾರ್ಯವಾಗಬೇಕು. ವಿವಿಧ ತಾಲೂಕಾ ತಹಶೀಲ್ದಾರಗಳು ಜಿಲ್ಲೆಯಲ್ಲಿರುವ ಮಾಜಿ ದೇವದಾಸಿಯರನ್ನು ಗುರುತಿಸಲು ಕ್ರಮ ವಹಿಸಬೇಕು. ಈ ಕಾರ್ಯವನ್ನು ಅತ್ಯಂತ ಆದ್ಯತೆ ಮೇಲೆ ಪರಿಗಣಿಸಬೇಕು. ಮುಂದಿನ 2 ತಿಂಗಳೊಳಗೆ ನಿವೇಶನ ಒದಗಿಸಲು ಸೂಚಿಸಿದ ಅವರು, ಮಹಿಳಾ ಅಭಿವೃದ್ದಿ ನಿಗಮ, ಅಂಬೇಡ್ಕರ್ ಅಭಿವೃದ್ದಿ ನಿಗಮ, ಸಮಾಜ ಕಲ್ಯಾಣ ಇಲಾಖೆಯಲ್ಲಿ ಇದಕ್ಕೆ ಪೂರಕವಾಗಿ ಸಾಕಷ್ಟು ಅನುದಾನ ಮೀಸಲಿದ್ದು, ಈ ಅನುದಾನವನ್ನು ಬಳಕೆ ಮಾಡಿ ನಿವೇಶನ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
      ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಆರೋಗ್ಯ ಸುಧಾರಣೆಗಾಗಿ ಇರುವ ಕಾರ್ಯಕ್ರಮ ಅನುಷ್ಠಾನಗೊಳಿಸುವ ಮೂಲಕ ಅಪೌಷ್ಠಿಕತೆ ನಿವಾರಣೆಗೆ ಕ್ರಮ ವಹಿಸಬೇಕು. ಪ್ಯಾಕೇಜ್ ಟೆಂಡರ್ ವ್ಯವಸ್ಥೆ ಆಗದೇ ಇರುವಂತೆ ನೋಡಿಕೊಳ್ಳಬೇಕು. ಈ ಕುರಿತು ಜಾಗ್ರತೆ ವಹಿಸುವಂತೆ ಅವರು ಸೂಚನೆ ನೀಡಿದರು.

       

      ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನಿನ ರಿತ್ಯ ಕ್ರಮ ವಹಿಸಬೇಕು. ಜಿಲ್ಲೆಯ ವಿವಿಧ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಸಮುದಾಯ ವಿದ್ಯಾರ್ಥಿಗಳ ಪ್ರವೇಶ ನಿರಾಕರಿಸುವ ಶಿಕ್ಷಣ ಸಂಸ್ಥೆಗಳ ಕುರಿತು ಪರಿಶೀಲನೆ ನಡೆಸಿ, ಸೂಕ್ತ ಕ್ರಮ ವಹಿಸಬೇಕು. ಹೊಸದಾಗಿ ನಿರ್ಮಾಣವಾಗುವ ಎಸ್ಸಿ-ಎಸ್ಟಿ ಕಾಲೋನಿ-ಬಡಾವಣೆಗಳಲ್ಲಿ ಎಸ್ಸಿ-ಎಸ್ಟಿ ಅನುದಾನ ಬಳಕೆ ಮಾಡಿ ವಿದ್ಯುತ್ ಕಾಮಗಾರಿ ಕೈಗೊಳ್ಳಬೇಕು. ಕೈಗಾರಿಕೆ ಇಲಾಖೆಯಿಂದ ಹೊಸದಾಗಿ ನಿವೇಶನ ರಚನೆ ಮಾಡುವಾಗ ನಿಯಮಾನುಸಾರ ಎಸ್ಸಿ-ಎಸ್ಟಿ ಫಲಾನುಭವಿಗಳಿಗೆ ನಿವೇಶನ ಹಂಚಿಕೆಗೆ ಕ್ರಮ ವಹಿಸಬೇಕು. ಇದರಲ್ಲಿ ಏನಾದರೂ ಲೋಪಗಳಿದ್ದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
      ಕಳೆದ 2013ರಿಂದ ಎಸ್ಸಿ-ಎಸ್ಟಿ ಕಾಯ್ದೆ ಜಾರಿಗೆ ಬಂದಿದ್ದು, ಜಿಲ್ಲೆಯಲ್ಲಿ ಯೋಜನೆಗಳು ಸಮರ್ಪಕವಾಗಿ ಜಾರಿಯಾಗಿರುವ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದ ಅವರು, ಎಸ್ಸಿ-ಎಸ್ಟಿ ಸಮುದಾಯದ ಜನರು ಸುಂದರ ಬದುಕು ರೂಪಿಸಿಕೊಳ್ಳಲು ಸೂಕ್ತ ವಾತಾವರಣ ನಿರ್ಮಿಸುವ ಮೂಲಕ ಸಾಮಾಜಿಕ ಕಳಕಳಿಯಿಂದ ಕಾರ್ಯನಿರ್ವಹಿಸಿ ನೈಜ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಸಭೆಯಲ್ಲಿ ಸಮಿತಿ ಸದಸ್ಯ ಕಾರ್ಯದರ್ಶಿಗಳು ಸೇರಿದಂತೆ ಸದಸ್ಯರಾದ ಕೃಷ್ಣ ನಾಯ್ಕ ಕೆ, ಎನ್.ರವಿಕುಮಾರ, ದುರ್ಯೋಧನ ಐಹೊಳೆ, ಡಾ.ಎಂ.ಚಂದ್ರಪ್ಪ, ಶಾಂತಾರಮ ಬುದ್ನಿ ಸಿದ್ದಿ, ಕೆ.ಸಿ ವೀರೇಂದ್ರ ಪಪ್ಪಿ, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರಸನ್ನ ದೇಸಾಯಿ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #District progress review by the Scheduled Caste and Scheduled Tribe Welfare Committee of the Vidhan Mandal.#Meetting#Public News#Sc#Voiceofjanata.in#ವಿಧಾನ ಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯಿಂದ ಜಿಲ್ಲೆಯ ಪ್ರಗತಿ ಪರಿಶೀಲನೆ..St
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.