ಕೇಂದ್ರ ಸಚಿವರನ್ನು ಭೇಟಿಮಾಡಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲು ಡಾ ದತ್ತೇಶ್ ಕುಮಾರ್ ಮನವಿ
ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಭೌಗೋಳಿಕವಾಗಿ ಹೆಚ್ಚು ವ್ಯಾಪಕವಾಗಿದ್ದು ನಮ್ಮ ಕ್ಷೇತ್ರಕ್ಕೆ ಸಮರ್ಪಕವಾಗಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸ್ಪಂದಿಸುವ ಕಾರ್ಯವಾಗಬೇಕು ಎಂದು
ಕೇಂದ್ರದ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ರಾಜ್ಯ ಸಚಿವರಾದ ಸನ್ಮಾನ್ಯ ಶ್ರೀ ಕುಮಾರಿ ಶೋಭಾ ಕರಂದ್ಲಾಜೆ ರವರಲ್ಲಿ ಚಾಮರಾಜನಗರ ಜಿಲ್ಲೆಯ ಬಿಜೆಪಿಯ ಪ್ರಮುಖರಾದ ಡಾಕ್ಟರ್ ದತ್ತೇಶ್ ಕುಮಾರ್ ತಿಳಿಸಿದರು .
ನಂತರ ಮಾತನಾಡಿದ ಅವರು ಮೈಸೂರಿಗೆ ಸಚಿವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಒತ್ತು ನೀಡಲು ಮನವಿ ಮಾಡಲಾಯಿತು ಎಂದು ತಿಳಿಸಿದರು.
ಬಿಜೆಪಿ ಪಕ್ಷದ ಮುಖಂಡರಾದ ಡಾ. ಎಸ್. ದತ್ತೆeಶ್ ಕುಮಾರ್ ಭೇಟಿ ಮಾಡಿ ಅವರನ್ನು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮಾನ್ಯ ಶಾಸಕರಾದ ಶ್ರೀವತ್ಸ ,ಮಾಜಿ ಶಾಸಕರಾದ ಶ್ರೀ ನಾಗೇಂದ್ರ, ಮಾಜಿ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಮಂಜುನಾಥ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ:ಚೇತನ್ ಕುಮಾರ್ ಎಲ್, ಚಾಮರಾಜನಗರ ಜಿಲ್ಲೆ


















