ಮಳೆಗಾಲ ಇರುವುದರಿಂದ ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರಿಕೆ ವಹಿಸಬೇಕು : ಜಿಲ್ಲಾಧಿಕಾರಿ ಭೂಬಾಲನ್
ವಿಜಯಪುರ : ಮಳೆಗಾಲದ ಸಂದರ್ಭದಲ್ಲಿ ನೀರು ಕಲುಷಿತವಾಗುವ ಸಂಭವವಿರುವುದರಿಂದ ಕುಡಿಯುವ ನೀರು ಪೂರೈಸುವ ಮುನ್ನ ಭೌತಿಕ ಮತ್ತು ಜೈವಿಕ ಪರೀಕ್ಷೆಗೊಳಪಡಿಸಿ ನೀರು ಪೂರೈಕೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಜರುಗಿದ ವಿಪತ್ತು ನಿರ್ವಹಣಾ ಜಿಲ್ಲಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಕುಡಿಯುವ ನೀರು ಪೂರೈಕೆಯಲ್ಲಿ ಎಚ್ಚರಿಕೆ ವಹಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಕಲುಷಿತ ನೀರು ಸೇರಿಕೊಂಡು ಸಾಂಕ್ರಾಮಿಕ ರೋಗಗಳ ಉಲ್ಭಣಕ್ಕೆ ಕಾರಣವಾಗುವುದರಿಂದ ಈ ಕುರಿತು ತೀವ್ರ ಎಚ್ಚರಿಕೆ ವಹಿಸಿ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು. ಕಲುಷಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಬೇಕು. ಕುಡಿಯುವ ನೀರಿನ ವಿಷಯದಲ್ಲಿ ಯಾವುದೇ ಲೋಪವನ್ನು ಸಹಿಸಲಾಗುವುದಿಲ್ಲ. ಕಲುಷಿತ ನೀರು ಪೂರೈಕೆಯಾದಲ್ಲಿ ಸಂಬAಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿಸಿ ಕ್ರಮ ವಹಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ ಅವರು, ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳ ಕಾರ್ಯಸ್ಥಿತಿ ಕುರಿತು ಪರಿಶೀಲನೆ ನಡೆಸಿ ನಡೆಸಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು.
ಮಳೆಗಾಲದ ಸಂದರ್ಭದಲ್ಲಿ ನೀರು ಒಂದೆಡೆ ಸಂಗ್ರಹಗೊAಡು ಜೂನ್-ಜುಲೈ ಮಾಹೆಯಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೀರು ಒಂದೇ ಕಡೆ ನಿಲ್ಲದೇ ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಫಾಗಿಂಗ್ ಸೇರಿದಂತೆ ಎಲ್ಲ ಮುಂಜಾಗ್ರತಾ ಕ್ರಮ ವಹಿಸಿ, ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸ್ವಚ್ಛತೆ, ಸಾಂಕ್ರಾಮಿಕ ರೋಗಗಳ ಕುರಿತು ಜನರಲ್ಲಿ ತಿಳುವಳಿಕೆ ಮೂಡಿಸಬೇಕು. ಸ್ವಚ್ಛವಾಹಿನಿಯ ಮೂಲಕ ಝಿಂಗಲ್ಸ್ಗಳನ್ನು ಬಳಸಿಕೊಂಡು ಸಾರ್ವಜನಿಕರಿಗೆ ಅರಿವು- ಜಾಗೃತಿ ಮೂಡಿಸಿ ಸಾಂಕ್ರಾಮಿಕ ರೋಗಗಳು ಹರಡದಂತೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಜಿಲ್ಲೆಯಲ್ಲಿರುವ ಅಂಗನವಾಡಿ, ಶಾಲಾ ಕಟ್ಟಡಗಳ ಸ್ಥಿತಿಗತಿ ಕುರಿತು ಪರಿಶೀಲನೆ ನಡೆಸಬೇಕು. ಶಿಥಿಲಾವ್ಯವಸ್ಥೆಯಲ್ಲಿರುವ ಕಟ್ಟಡಗಳ ದುರಸ್ತಿಗೆ ಕ್ರಮ ವಹಿಸಬೇಕು. ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಅಡಚಣೆಯಾಗದಂತೆ ತಾತ್ಕಾಲಿಕವಾಗಿ ಪರ್ಯಾಯ ಕಟ್ಟಡದಲ್ಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ವ್ಯವಸ್ಥೆ ಮಾಡಿ ಕಟ್ಟಡ ದುರಸ್ತಿ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಮುಂಗಾರು ಪೂರ್ವ ಮಳೆ ಪ್ರಾರಂಭವಾಗಿದ್ದು ಮುಂಜಾಗೃತ ಕ್ರಮವಾಗಿ ಯಾವುದೇ ಜನ ಜಾನುವಾರುಗಳಿಗೆ ಹಾನಿಯಾಗದಂತೆ ವಿದ್ಯುತ್ ಕಂಬಗಳು ಮತ್ತು ವಿದ್ಯುತ್ ಮಾರ್ಗಗಗಳಲ್ಲಿ ತಂತಿಗಳು ಬೀಳದಂತೆ ಮುನ್ನೆಚ್ಚರಿಗೆ ಕ್ರಮ ವಹಿಸಬೇಕು. ಮಳೆಗಾಲ ಸಂದರ್ಭದಲ್ಲಿ ಗಾಳಿ-ಮಳೆಗೆ ಗಿಡಗಳ ರೆಂಬೆ-ಕೊAಬೆಗಳು ಬೀಳುವ ಸಂಭವಿರುವುದರಿAದ ಮುಂಜಾಗ್ರತಾ ಕ್ರಮವಾಗಿ ಇಂತಹ ಗಿಡ-ಮರಗಳ ಕೊಂಬೆಗಳ ತೆರವಿಗೆ ಅರಣ್ಯ ಇಲಾಖೆಯಿಂದ ಕ್ರಮ ವಹಿಸಬೇಕು. ರಸ್ತೆ, ಜನನಿಬಿಡ ಪ್ರದೇಶದಲ್ಲಿ ಇಂತಹ ಯಾವುದೇ ಕೊಂಬೆಗಳು ಬಿದ್ದ ಸಂದರ್ಭದಲ್ಲಿಯೂ ಸಹ ಸಾರ್ವಜನಿಕರಿಗೆ ಅಡಚಣೆ ಉಂಟಾಗದAತೆ ತ್ವರಿತವಾಗಿ ತೆರವುಗೊಳಿಸುವ ಕುರಿತು ತಂಡವೊAದನ್ನು ಸಿದ್ಧಪಡಿಸಿಟ್ಟುಕೊಳ್ಳುವಂತೆ ಅವರು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯತ್ ವ್ಯಾಪ್ತಿಯ ಚರಂಡಿಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ನೋಡಿಕೊಳ್ಳಬೇಕು. ರಾಜ್ಕಾಲುವೆ, ನಾಲಾ ಸೇರಿದಂತೆ ವಿವಿಧೆಡೆ ನೀರು ನಿಲ್ಲದಂತೆ ಮುನ್ನೆಚ್ಚರಿಕೆ ವಹಿಸಿ, ಸ್ವಚ್ಛತೆಗೆ ಕ್ರಮ ವಹಿಸಬೇಕು. ತೆರೆದ ಕೊಳೆವೆ ಬಾವಿಗಳು ಇರುವುದರ ಕುರಿತು ಪರಿಶೀಲಿಸಿ ಅಂತಹ ಬಾವಿಗಳಿದ್ದಲ್ಲಿ ತಕ್ಷಣ ಮುಚ್ಚಲು ಕ್ರಮ ವಹಿಸಿ, ಕೈಗೊಂಡಿರುವ ಕ್ರಮ ಕುರಿತು ವರದಿ ನೀಡಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ತೆರೆದ ಬಾವಿಗಳ ಕುರಿತು ವರದಿ ನೀಡುವಂತೆ ಅವರು ಸೂಚನೆ ನೀಡಿದರು.
ಮುಂಗಾರು ಪೂರ್ವ ಮಳೆಯಾಗುತ್ತಿದ್ದು ಜಿಲ್ಲೆಯಲ್ಲಿ ರೈತರು ಭೂಮಿ ಉಳುಮೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ರೈತರಿಗೆ ಸಮರ್ಪಕವಾಗಿ ಉತ್ತಮ ಗುಣಮಟ್ಟದ ಬೀಜಗಳನ್ನು ವಿತರಣೆ ಮಾಡಬೇಕು. ಯಾವುದೇ ಕೊರತೆ ಉಂಟಾಗದAತೆ ಅಗತ್ಯ ಬೀಜ-ರಸಗೊಬ್ಬರವನ್ನು ದಾಸ್ತಾನಿಟ್ಟುಕೊಳ್ಳಬೇಕು. ರೈತರ ಬೇಡಿಕೆಗನುಗುಣವಾಗಿ ಬೀಜ-ರಸಗೊಬ್ಬರ ಪೂರೈಕೆಗೆ ಕ್ರಮ ವಹಿಸಬೇಕು. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.
ಖಾಸಗಿ ರಸಗೊಬ್ಬರ ಮಾರಾಟಗಾರರು ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಕ್ರಮ ವಹಿಸಬೇಕು. ಹೆಚ್ಚಿನ ಬೆಲೆಗೆ ರಸ ಗೊಬ್ಬರಗಳನ್ನು ಮಾರಾಟ ಮಾಡದಂತೆ ಮಾರಾಟಗಾರರಿಗೆ ಸೂಕ್ತ ತಿಳಿ ಹೇಳಬೇಕು. ಒಂದು ವೇಳೆ ಹೆಚ್ಚಿನ ಬೆಲೆಗೆ ಮಾರಾಟ ಕಂಡು ಬಂದಲ್ಲಿ ಅಂತಹವರ ವಿರುದ್ಧ ಕಾನೂನಿನ್ವಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ ಅವರು, ಜಿಲ್ಲೆಯಲ್ಲಿನ ಮಾರಾಟಗಾರರು ಗ್ರಾಹಕರಿಗೆ ಕಾಣುವಂತೆ ದರ ಪಟ್ಟಿ ಫಲಕಗಳನ್ನು ಅಂಗಡಿಗಳಲ್ಲಿ ಅಳವಡಿಸಿರಬೇಕು. ಈ ಕುರಿತು ಕೃಷಿ ಇಲಾಖೆಯ ತನಿಖಾಧಿಕಾರಿಗಳು ಕಾಲಕಾಲಕ್ಕೆ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಡಿಎಪಿ ಹಾಗೂ ಯೂರಿಯಾ ರಸಗೊಬ್ಬರಗಳ ಅನಧಿಕೃತ ದಾಸ್ತಾನು ಹಾಗೂ ಕೃತಕ ಅಭಾವ ಸೃಷ್ಟಿಸಿ ಹೆಚ್ಚಿನ ದರದಲ್ಲಿ ಮಾರಾಟ ಮಾಡದಂತೆ ತೀವ್ರ ನಿಗಾ ಇರಿಸುವಂತೆ ಅವರು ಸೂಚನೆ ನೀಡಿದರು.
ತಹಶೀಲ್ದಾರರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸಮರ್ಪಕ ವಿತರಣೆಯನ್ನು ನೋಡಿಕೊಳ್ಳಬೇಕು. ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಇತರೆ ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡುವ ರೈತರಿಗೆ ಸೂಕ್ತ ತಿಳುವಳಿಕೆ ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಒಳ ಮೀಸಲಾತಿ ಕುರಿತು ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ ಕಾರ್ಯ ನಡೆದಿದ್ದು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸುವಂತೆ ಸೂಚಿಸಿದ ಅವರು ಪ್ರತಿ ಮನೆ ಮನೆಗೂ ಭೇಟಿ ನೀಡಬೇಕು. ಯಾವುದೇ ಪರಿಶಿಷ್ಟ ಜನಾಂಗದ ಮನೆ ಕೈ ಬಿಟ್ಟು ಹೋಗದಂತೆ ಪ್ರತಿ ವ್ಯಕ್ತಿಯ ಸಮೀಕ್ಷೆ ಕಾರ್ಯ ನಡೆಯಬೇಕು. ಜಿಲ್ಲಾಡಳಿತದಿಂದ ಸಮೀಕ್ಷಾ ಕಾರ್ಯಕ್ಕೆ ಅಗತ್ಯವಿದ್ದಲ್ಲಿ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.
ಇದೇ ಸಂದರ್ಭದಲ್ಲಿ ತೊಗರಿ ಬೆಳೆಯ ಉತ್ಪಾದನಾ ತಾಂತ್ರಿಕತೆಗಳು ಹಾಗೂ ಡಿಎಪಿ ರಸಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಹಿತಿ ಕರಪತ್ರ ಹಾಗೂ ರೈತರ ಸಮಗ್ರ ಬೆಳೆ ನಿರ್ವಹಣೆ ಕುರಿತ ಕರ ಪತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತçದ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.


















