ಚಡಚಣ : ವಿಜಯಪುರ ಜಿಲ್ಲೆಯ ಚಡಚಣ ತಾಲ್ಲೂಕಿನ ಧೂಳಖೇಡ RTO ಚೆಕ್ಪೋಸ್ಟ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿಗೈದಿರುವ ಘಟನೆ ನಡೆದಿದೆ. ಕರ್ನಾಟಕ ಮಹಾರಾಷ್ಟ್ರ ಗಡಿಯಲ್ಲಿರುವ ಧೂಳಖೇಡ್ RTO ಚೆಕ್ ಪೋಸ್ಟ್ನಲ್ಲಿ ಲೋಕಾಯುಕ್ತ ಎಸ್ಪಿ ಅನಿತಾ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಧೂಳಖೇಡ ಚೆಕ್ ಪೋಸ್ಟ್ನಲ್ಲಿ ಸಂಗ್ರಹವಾಗಿದ್ದ 3 ರಿಂದ 4 ಲಕ್ಷ ಹಣ ವಶಕ್ಕೆ ಪಡೆದುಕೊಂಡಿದ್ದು, ಪ್ರಮುಖ ದಾಖಲೆಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ಮಾಡುತ್ತಿದ್ದಾರೆ. ಅಲ್ಲದೇ, 7-8 ಹೋಮ್ ಗಾರ್ಡ್ಗಳ ವಿಚಾರಣೆ ಹಾಗೂ ಅಗತ್ಯ ದಾಖಲೆ, ಮಾಹಿತಿ ಕಲೆಯನ್ನು ಲೋಕಾಯುಕ್ತ ಅಧಿಕಾರಿಗಳು ಮಾಡುತ್ತಿದ್ದಾರೆ.