ನಾಗರಬೆಟ್ಟದ ಎಕ್ಸ್ಪರ್ಟ್ ಸಂಸ್ಥೆಯಲ್ಲಿ ಎಕ್ಸ್ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ
ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು,ಡಾ ಚನ್ನವೀರ ಶಿವಾಚಾರ್ಯರು
ಮುದ್ದೇಬಿಹಾಳ: ಡಾ. ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ ಶಿಕ್ಷಣವು ಹುಲಿ ಹಾಲಿನಂತಿದೆ, ಅದನ್ನು ಕುಡಿದವರು ಮಕ್ಕಳು ಗರ್ಜಿಸಲೇಬೇಕು. ಕೇವಲ ಶಾಲೆಯ ಬೋರ್ಡ್ಗಳು ಶಿಕ್ಷಣ ನೀಡುವುದಿಲ್ಲ, ಮಕ್ಕಳಲ್ಲಿ ಕಠಿಣ ಪರಿಶ್ರಮ ಮತ್ತು ಸಾಧಿಸುವ ಛಲವಿರಬೇಕು, ಎಂದು ಖ್ಯಾತ ವಾಗ್ಮಿ ಹಾಗೂ ಸಾಹಿತ್ಯ ರತ್ನ ಶಿವಶರಣಪ್ಪ ಶಿರೂರ ಹೇಳಿದರು.
ತಾಲೂಕಿನ ನಾಗರಬೆಟ್ಟದ ಪ್ರತಿಷ್ಠಿತ ಬಸ್ ನಿಲ್ದಾಣದ ಹತ್ತಿರವಿರುವ ಆಕ್ಸ್ಫರ್ಡ್ ಮಠ್ಸ್ (SDE Trust) ಸಂಸ್ಥೆಯ ಎಕ್ಸ್ಪರ್ಟ್ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಎಕ್ಸ್ಪರ್ಟ್ ಉತ್ಸವ 2025-26’ ರ ಎಸ್ಎಸ್ಎಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.
ಸಂಸ್ಕಾರಯುತ ಶಿಕ್ಷಣವೇ ಬದುಕಿನ ಭದ್ರ ಬುನಾದಿ
ಮುಂದುವರಿದು ಮಾತನಾಡಿದ ಅವರು, 623 ಹೆಚ್ಚು ಅಂಕಗಳನ್ನು ಪಡೆಯುವ ಗುರಿ ಮಕ್ಕಳಲ್ಲಿರಬೇಕು. ಈ ಸಂಸ್ಥೆಯು ಕೇವಲ ಪಾಠವನ್ನಷ್ಟೇ ಅಲ್ಲದೆ, ಉತ್ತಮ ಸಂಸ್ಕಾರವನ್ನೂ ಕಲಿಸುತ್ತಿದೆ. ಗ್ರಾಮೀಣ ಭಾಗದ ಬಡ ಹಾಗೂ ಕೂಲಿ ಕಾರ್ಮಿಕರ ಮಕ್ಕಳಿಗೆ ಇಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುತ್ತಿದೆ. ಈ ಸಂಸ್ಥೆಯ ವಿದ್ಯಾರ್ಥಿಗಳು ಎಪಿಜೆ ಅಬ್ದುಲ್ ಕಲಾಂ, ಛತ್ರಪತಿ ಶಿವಾಜಿಯಂತಹ ಮಹಾನ್ ವ್ಯಕ್ತಿಗಳ ಕನಸನ್ನು ನನಸು ಮಾಡುವ ಗುರಿ ಹೊಂದಬೇಕು,” ಎಂದರು.
ಕುಂಟೋಜಿಯ ಭಾವೈಕ್ಯತಾ ಸಂಸ್ಥಾನ ಹಿರೇಮಠದ ಷ.ಬ್ರ. ಡಾ. ಶ್ರೀಗುರು ಚನ್ನವೀರ ಶಿವಾಚಾರ್ಯ ಮಹಾಸ್ವಾಮಿಗಳು ಅವರ ಮಾತನಾಡಿದ, “ಬಿ.ಜಿ. ಮಠ ಅವರ 30 ವರ್ಷಗಳ ಅವಿರತ ಪರಿಶ್ರಮದಿಂದ ಇಂದು ಈ ಸಂಸ್ಥೆ ಹೆಮ್ಮರವಾಗಿ ಬೆಳೆದಿದೆ. ಇಡೀ ಜಿಲ್ಲೆಯಲ್ಲೇ ವಸತಿ ಶಾಲೆಯ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡುತ್ತಿದೆ. ವಿದ್ಯಾರ್ಥಿಗಳು ತಮಗೆ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡು ಆತ್ಮವಿಶ್ವಾಸದಿಂದ ಮುನ್ನಡೆಯಬೇಕು,” ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಡಿಇ ಟ್ರಸ್ಟ್ ಅಧ್ಯಕ್ಷ ಬಿ. ಜಿ. ಮಠ ಮಾತನಾಡಿ, “ಜೀವನದಲ್ಲಿ ಹಣಕ್ಕಿಂತ ಒಳ್ಳೆಯ ಗುಣ ಮತ್ತು ಸಂಸ್ಕೃತಿ ಮುಖ್ಯ. ವಿದ್ಯಾರ್ಥಿಗಳು ದುರಾಸೆ ಬಿಟ್ಟು, ಗುರಿ ಮತ್ತು ಶಿಸ್ತನ್ನು ಅಳವಡಿಸಿಕೊಳ್ಳಬೇಕು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ತಂದೆ-ತಾಯಿ ಹಾಗೂ ಶಾಲೆಗೆ ಕೀರ್ತಿ ತರಬೇಕು,” ಎಂದರು.
ಇದೇ ಸಂದರ್ಭದಲ್ಲಿ ಎಕ್ಸಪರ್ಟ್ ಕಾಲೇಜಿನಲ್ಲಿ ಓದಿ ವೈದ್ಯಕೀಯ,(ಮೆಡಿಕಲ್) ಸೀಟು ಪಡೆದ ಸಾಧಕ ವಿದ್ಯಾರ್ಥಿಗಳನ್ನು ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.
ಈ ಸಮಾರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸಿದ್ದಯ್ಯ ಮಠ, ಆಡಳಿತಾಧಿಕಾರಿ ಪ್ರಜ್ವಲ್ ಬಿ. ಮಠ, ಪ್ರಾಂಶುಪಾಲರಾದ ಆರ್. ಎ. ಬಾಗವಾನ್,ಎಸ್ ಡಿ ಕೆ ಪ್ರೌಢಶಾಲಾ ಮುಖ್ಯಗುರು ವಿರೂ ನಾಯಕ, ಶಿವಯ್ಯ ಹಿರೇಮಠ,ಆರ್ ಎಂ ಪೂಜಾರಿ,ಸೇರಿದಂತೆ ಹಲವು ಗಣ್ಯರು, ಶಿಕ್ಷಕ ವೃಂದ ಹಾಗೂ ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.