• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ

      Voiceofjanata.in

      August 31, 2025
      0
      ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ
      0
      SHARES
      75
      VIEWS
      Share on FacebookShare on TwitterShare on whatsappShare on telegramShare on Mail

      ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ

       

      ತೋಳ ದಾಳಿಗೆ ೧೦ ಕುರಿ ಬಲಿ, ೧೦ ಗಾಯ, ೫ ನಾಪತ್ತೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ:ತಾಲೂಕಿನ ನಾಲತವಾಡ ಹೋಬಳಿ ವ್ಯಾಪ್ತಿಯ ನಾಗಬೇನಾಳ-ವೀರೇಶನಗರ ಗ್ರಾಮದ ಹತ್ತಿರ ಹೊಲವೊಂದರಲ್ಲಿ ಗೂಡು ಕಟ್ಟಿ ಕುರಿಗಳನ್ನು ವಾಸ್ತವ್ಯಕ್ಕಾಗಿ ಬಿಟ್ಟಿದ್ದ ಕುರಿ ಮಂದೆಯ ಮೇಲೆ ತೋಳಗಳು ದಾಳಿ ನಡೆಸಿದ ಪರಿಣಾಮ ೧೦ ಕುರಿಗಳು ಬಲಿಯಾಗಿ, ೧೦ ಕುರಿಗಳು ಗಾಯಗೊಂಡು, ೫ ಕುರಿಗಳು ನಾಪತ್ತೆಯಾಗಿರುವ ಘಟನೆ ಬುಧವಾರ ಮಧ್ಯರಾತ್ರಿ ನಡೆದಿದ್ದು ಗುರುವಾರ ಬೆಳಕಿಗೆ ಬಂದಿದೆ.
      ನಾಗಬೇನಾಳದ ಬಸವರಾಜ ಸಿದ್ದಪ್ಪ ಸುಲ್ತಾನಪುರ ಎನ್ನುವವರು ಕುರಿಮಂದೆಯನ್ನು ರಾತ್ರಿ ಒಂದೆಡೆ ಗೂಡು ಹಾಕಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಿದ್ದರು. ರಾತ್ರಿ ಏಕಾಏಕಿ ತೋಳಗಳ ಹಿಂಡು ದಾಳಿ ಇಟ್ಟಿದೆ. ನೋಡುತ್ತಿದ್ದಂತೆಯೇ ಅಂದಾಜು ೪೦-೫೦ ಸಂಖ್ಯೆಯಷ್ಟಿದ್ದ ಕುರಿಗಳು ದೊಡ್ಡಿ ಹಾರಿ ಓಡಿ ಹೋಗಲು ಹವಣಿಸಿವೆ. ಅಷ್ಟರೊಳಗೆ ಹಲವು ಕುರಿಗಳು ತೋಳದ ದಾಳಿಗೆ ಸಿಕ್ಕಿವೆ. ಒಂದು ಕುರಿಮರಿಯನ್ನು ಇಬ್ಭಾಗ ಮಾಡಿ ಹೊಟ್ಟೆಯ ಭಾಗವನ್ನು ತಿಂದು ಹಾಕಲಾಗಿದೆ. ಇನ್ನುಳಿದ ಕುರಿಗಳನ್ನು ಅಲ್ಲಲ್ಲಿ ಕಚ್ಚಿ, ಚರ್ಮ, ಮಾಂಸ ಎಳೆದಾಡಿವೆ. ೯ ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿದರೆ ಒಂದು ಕುರಿತ ಮಾತ್ರ ಬೆಳಿಗ್ಗೆ ೧೨ ಗಂಟೆಯಾದರೂ ವಿಲವಿಲ ಒದ್ದಾಡುತ್ತ ಜೀವ ಹಿಡಿದದ್ದು ಕಂಡು ಬಂತು. ಗಾಯಗೊಂಡಿರುವ ೧೦ ಕುರಿಗಳಿಗೆ ಪಶು ಇಲಾಖೆಯ ವೈದ್ಯರು ತಾತ್ಕಾಲಿಕ ಆರೈಕೆ ಮಾಡಿದ್ದು ಅವು ಪ್ರಾಣಾಪಾಯದಿಂದ ಪಾರಾಗಿವೆ.
      ಈ ಭಾಗದಲ್ಲಿ ಆಗಾಗ ಕುರಿಗಳ ಮೇಲೆ ತೋಳಗಳ ದಾಳಿ ನಡೆಯುತ್ತದೆ ಒಂದೋ, ಎರಡೋ ಕುರಿಗಳನ್ನು ತೋಳ ಎತ್ತಿಕೊಂಡು ಹೋಗುತ್ತವೆ. ಆದರೆ ಈ ಘಟನೆಯಲ್ಲಿ ೧೦ ಕುರಿಗಳು ಸಾವನ್ನಪ್ಪಿರುವುದು ಕುರಿಗಾಹಿಗೆ ಆಘಾತ ಮೂಡಿಸಿದೆ. ಬಸವರಾಜನಿಗೆ ಅವರಿವರು ತಮ್ಮ ಕುರಿಗಳನ್ನು ಸಾಕಲು ಕೊಟ್ಟಿದ್ದರು. ಇದೀಗ ಅವರಿಗೆ ಏನು ಉತ್ತರ ಕೊಡಬೇಕು ಎನ್ನುವ ದಿಗ್ಭçಮೆಯಲ್ಲಿ ಅವರಿದ್ದಾರೆ.
      ಘಟನಾ ಸ್ಥಳಕ್ಕೆ ಶಾಸಕ ಸಿ.ಎಸ್.ನಾಡಗೌಡ, ತಹಶೀಲ್ದಾರ್ ಕೀರ್ತಿ ಚಾಲಕ್, ತಾಪಂ ಇಓ ವೆಂಕಟೇಶ ವಂದಾಲ ಇನ್ನಿತರರು ಭೇಟಿ ನೀಡಿ ಘಟನೆಗೆ ವಿಷಾಧ ವ್ಯಕ್ತಪಡಿಸಿ ನೊಂದ ಕುರಿಗಾಯಿಗೆ ಸೂಕ್ತ ಪರಿಹಾರದ ವ್ಯವಸ್ಥೆಯ ಭರವಸೆ ನೀಡಿದರು.
      ನಡಹಳ್ಳಿ ಭೇಟಿ: ವ್ಯವಸ್ಥೆ ವಿರುದ್ಧ ಆಕ್ರೋಶ
      ಘಟನಾ ಸ್ಥಳಕ್ಕೆ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿಯವರು ಭೇಟಿ ನೀಡಿ ಬಸವರಾಜನಿಂದ ಘಟನೆಯ ಮಾಹಿತಿ ಪಡೆದುಕೊಂಡರು. ಪೊಲೀಸರು ಬಂದು ಎಫೈಆರ್ ದಾಖಲಿಸುವವರೆಗೂ ಕುರಿಗಾಹಿಗೆ ಸರ್ಕಾರದ ಸೌಲಭ್ಯ, ಪರಿಹಾರ ಸಿಗುವುದಿಲ್ಲ ಎನ್ನುವುದನ್ನು ಅರಿತಿದ್ದ ಅವರು ಘಟನೆ ನಡೆದು ೧೨-೧೩ ಗಂಟೆಗಳ ಮೇಲಾದರೂ ಪೊಲೀಸರು, ಗ್ರಾಮ ಪಂಚಾಯಿತಿಯವರು, ಕಂದಾಯ ಇಲಾಖೆಯವರು ಸ್ಥಳಕ್ಕೆ ಆಗಮಿಸಿ ಘಟನೆಯ ವಿವರವನ್ನು ದಾಖಲಿಸಿಕೊಂಡು ಅಗತ್ಯ ಕ್ರಮ ಕೈಕೊಳ್ಳದಿರುವುದನ್ನು ಕೇಳಿ ಆಕ್ರೋಶಭರಿತರಾದರು. ನಡಹಳ್ಳಿಯವರು ಬರುವ ಸಮಯದಲ್ಲೇ ಅಲ್ಲಿಗೆ ಬಂದ ಗ್ರಾಮ ಆಡಳಿತಾಧಿಕಾರಿ ಗಂಗಾಧರ ಜೂಲಗುಡ್ಡ ಅವರನ್ನು ತರಾಟೆಗೆ ತೆಗೆದುಕೊಂಡು ಘಟನೆ ನಡೆದು ಬಹಳಷ್ಟು ಸಮಯವಾದರೂ ನೊಂದ ಕುರಿಗಾಹಿಗೆ ತಾತ್ಕಾಲಿಕ ಪರಿಹಾರ ಏಕೆ ವಿತರಿಸಿಲ್ಲ ಎಂದು ಹರಿಹಾಯ್ದರು. ಸ್ಥಳದಲ್ಲಿದ್ದ ಪಶು ಸಂಗೋಪನಾ ಇಲಾಖೆಯ ವೈದ್ಯರ ಕಾರ್ಯವನ್ನು ಪ್ರಶಂಶಿಸಿದ ಅವರು ಸರಿಯಾದ ವರದಿ ತಯಾರಿಸಿ ಕುರಿಗಾಹಿಗೆ ಸರ್ಕರ ನಿಗದಿಪಡಿಸಿದ ಪರಿಹಾರ ದೊರಕಿಸಿಕೊಡುವಂತೆ ತಿಳಿಸಿದರು. ಪಿಎಸೈ ಜೊತೆ ಮೋಬೈಲ್ ಫೋನ್‌ನಲ್ಲಿ ಮಾತನಾಡಿ ಇದುವರೆಗೂ ಪೊಲೀಸರನ್ನು ಕಳಿಸದೆ, ಎಫ್‌ಐಆರ್ ದಾಖಲಿಸದೆ ಬೇಜವಾಬ್ಧಾರಿ ತೋರಿದ ನಡವಳಿಕೆಯನ್ನು ಖಂಡಿಸಿ ಕೂಡಲೇ ಪೊಲೀಸರನ್ನು ಸ್ಥಳಕ್ಕೆ ಕಳಿಸುವಂತೆ ತಿಳಿಸಿದರು. ಪಿಡಿಓ ಮುರುಗೆಮ್ಮ ಪೀರಾಪುರ ಅವರಿಗೆ ಸೂಚಿಸಿ ತಕ್ಷಣ ಗಾಯಗೊಂಡ, ಬದುಕುಳಿದ ಕುರಿಗಳಿಗೆ ಮೇವಿನ ವ್ಯವಸ್ಥೆ ಮಾಡುವಂತೆ ತಿಳಿಸಿದರು. ನಿರ್ಗಮಿಸುವಾಗ ಆಗಮಿಸಿದ ಮೂವರು ಪೊಲೀಸ್ ಪೇದೆಗಳನ್ನು ಜನರ ಎದುರೇ ತರಾಟೆಗೆ ತೆಗೆದುಕೊಂಡ ನಡಹಳ್ಳಿಯವರು ನೀವೂ ಕೂಡ ರೈತರ ಮಕ್ಕಳಾಗಿದ್ದು ರೈತರ ಕಷ್ಟಕ್ಕೆ ತಕ್ಷಣ ಸ್ಪಂಧಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ನೊಂದ ಕುರಿಗಾಯಿ ರೈತನಿಗೆ ಸೂಕ್ತ ಪರಿಹಾರ ಸಿಗದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
      ಜಿಪಂ ಮಾಜಿ ಉಪಾಧ್ಯಕ್ಷರಾದ ಎಂ.ಎಸ್.ಪಾಟೀಲ, ಕೆ.ಆರ್.ಬಿರಾದಾರ, ಮುಖಂಡರಾದ ಗಿರೀಶಗೌಡ ಪಾಟೀಲ, ರವೀಂದ್ರ ಬಿರಾದಾರ, ಮುದಕಪ್ಪ ಗಂಗನಗೌಡರ, ಜಿ.ಮಹಾಂತಗೌಡ ಗಂಗನಗೌಡರ, ಈರಣ್ಣ ಮುದ್ನೂರ, ಸಂಗಪ್ಪ ಹಾವರಗಿ, ಭೀಮಣ್ಣ ಗುರಿಕಾರ, ಸಂಗಣ್ಣ ಸುಲ್ತಾನಪೂರ, ಭೀಮಣ್ಣ ರಕ್ಕಸಗಿ, ಮಣಿಕಂಠ ಆರೇಶಂಕರ ಇನ್ನಿತರರು ಇದ್ದರು.
      Tags: #Fighting warning if the farmer does not get compensation:#indi / vijayapur#Public News#Today News#Voice Of Janata#Voiceofjanata.in#ರೈತನಿಗೆ ಪರಿಹಾರ ಸಿಗದಿದ್ದರೆ ಹೋರಾಟದ ಎಚ್ಚರಿಕೆ: ಬೇಜವಾಬ್ಧಾರಿ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ನಡಹಳ್ಳಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      April 5, 2026
      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.