ವಿಜಯಪುರ : ಆಕಸ್ಮಿಕ ಅಗ್ನಿ ಅವಘಡದಿಂದ ಚಪ್ಪಲಿ ಅಂಗಡಿ ಭಸ್ಮವಾಗಿರುವ ಘಟನೆ ವಿಜಯಪುರ ನಗರದ ಸರಾಫ್ ಬಜಾರ್ ಬಳಿ ಮಂಗಳವಾರ ನಡೆದಿದೆ. ಕರ್ನಾಟಕ ಫುಟ್ ವೇರ್ ಅಂಗಡಿಗೆ ಬೆಂಕಿ ತಗುಲಿದೆ. ಬೆಳಗಿನ ಜಾವ ೪ ಗಂಟೆ ವೇಳೆಗೆ ಅಂಗಡಿಗೆ ಬೆಂಕಿ ತಗುಲಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿಗಳು ಧಾವಿಸಿ ಬೆಂಕಿ ನಂದಿಸಿದರು. ಅಲ್ಲದೇ, ಅಪಾರ ಪ್ರಮಾಣದ ವಸ್ತುಗಳು ಭಸ್ಮವಾಗಿವೆ. ಗಾಂಧಿಚೌಕ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.