ಇಂಡಿ : ಎಪಿಎಂಸಿ ಕಾನೂನು, ವಿದ್ಯುತ್ ದರ ಏರಿಕೆ, ಗೋಶಾಲೆ ಯೋಜನೆ, ಕಿಸಾನ್ ಸಮ್ಮಾನ ನಿಧಿ, ಭೂ ಸಿರಿ ಯೋಜನೆ, ರೈತ ಶಕ್ತಿ ಯೋಜನೆ ಹಾಗೂ ನೀರಾವರಿ ಯೋಜನೆ ಹೀಗೆ ಹಲವಾರು ರೈತಪರ ಯೋಜನೆಗಳಿಗೆ ಸಿದ್ದರಾಮಯ್ಯ ಸರಕಾರ ರದ್ದು ಪಡಿಸಿದ್ದು ರೈತಪರ ಹಿಂದೂಪರ ವಿರೋಧಿ ಅನುಸರಿಸುತ್ತಿದ್ದೆ. ಇದನ್ನು ತೀವ್ರವಾಗಿ ಖಂಡಿಸುತ್ತಿವೆ. ಅದಲ್ಲದೇ ಜೈನಾಚಾರ್ಯ ಜಿನೈಕ್ಯ ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿದ್ದು ಅಮಾನವೀಯ ಕೃತ್ಯೆ, ಅತ್ಯಂತ ನೋವಿನ ಸಂಗತಿ. ಯಾರು ಕೂಡಾ ಸಹಿಸಿಕೊಳ್ಳಲು ಸಾಧ್ಯವಿಲ್ಲ. ಮಳೆಯಿಲ್ಲದೆ ರೈತರು ಸಂಕಷ್ಟದಲ್ಲಿದ್ದಾರೆ ಕೂಡಲೇ ಬರಗಾಲ ಘೋಷಣೆ ಮಾಡಬೇಕೆಂದು
ಬಿಜೆಪಿ ಜಿಲ್ಲಾ ರೈತ ಮೂರ್ಚಾ ಅಧ್ಯಕ್ಷ ಕಾಸುಗೌಡ
ಆಗ್ರಹಿಸಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ರೈತರು ತಾವು ಬೆಳೆದಂತ ಬೆಳೆಯನ್ನು ಎಲ್ಲಿ ಬೇಕಾದರೂ ಮಾರಾಟ ಮಾಡುವ ಸ್ವಾತಂತ್ರ್ಯ ಹಾಗೂ ಸಾಗಾಣಿಕೆ ವೆಚ್ಚ, ದಲ್ಲಾಳಿಗಳ ಕಮೀಶನ್ ಇತರ ಖರ್ಚುಗಳ ಹಾಗೂ ಉಳಿತಾಯದಂತಹ ಅನೇಕ ಅನುಕೂಲಗಳನ್ನು ರದ್ದುಪಡಿಸಿ, ಕೇವಲ ಎಪಿಎಂಸಿಗಳಲ್ಲಿ ಮಾತ್ರ ಮಾರಾಟ ಮಾಡುವ ಹಳೇಯ ಕಾನೂನು ಜಾರಿಗೆ ತರುವದು ಎಷ್ಟು ಸಮಂಜಸ. ಇನ್ನೂ ಏಕಾಏಕಿ ವಿದ್ಯುತ್ ದರ ಏರಿಕೆಯಿಂದ ಕಾಟನ ಇಂಡಸ್ಟ್ರೀ, ರೈಸ ಮಿಲ್, ಜ್ವಾಗು ಇಂಡಸ್ಟ್ರೀ ಹಾಗೂ ಅತಿ ಸಣ್ಣ, ಸಣ್ಣ, ಮಧ್ಯಮ ಕೈಗಾರಿಕೆಗ ಬಾರಿ ಹೊಡೆತ ಉಂಟಾಗಿದೆ.
ಗೃಹ ಬಳಕೆಯ ಪ್ರತಿ ಯುನಿಟ್ಗೆ ಸರಾಸರಿ 70 ಪೈಸೆ ದರ ಹೆಚ್ಚಳ ಹಾಗೂ ಮಿನಿಮಮ್ ಚಾರ್ಜ 60 ರೂ ನಿಂದ 70 ರೂ.ಗೆ ಹೆಚ್ಚಳ. • ಈ ರೀತಿ ಬೇಕಾಬಿಟ್ಟಿ ದರ ಏರಿಕೆ ಮಾಡುವ ಮೂಲಕ ಗೃಹ ಬಳಕೆದಾರರಿಗೆ, ಸಣ್ಣ ಉದ್ಯಮದಾರರಿಗೆ ಪೆಟ್ಟು ನೀಡಿರುವುದು ಯಾವ ನ್ಯಾಯ. ಅದಲ್ಲದೇ ರೈತ ಕುಟುಂಬದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ರೂ 438.69 ಕೋಟಿ ರೂಪಾಯಿಗಳ ರೈತ ವಿದ್ಯಾನಿಧಿ ಯೋಜನೆಯನ್ನು ರದ್ದು ಪಡಿಸುವ ಮೂಲಕ ಬಡ ರೈತನ ಮಕ್ಕಳಿಗೆ ಅನ್ಯಾಯ ಮಾಡಿದೆ. ಅದಲ್ಲದೇ ಗೋಹತ್ಯೆ ತಡೆ ಹಾಗೂ ಜಾನುವಾರು ಸಂರಕ್ಷಿಸಲು ಪ್ರತಿ ಜಿಲ್ಲೆಗೊಂದು ಗೋಶಾಲೆಯನ್ನು ಸ್ಥಾಪಿಸಲು ಬಿಜೆಪಿ ಸರ್ಕಾರ ತೀರ್ಮಾನಿಸಿತ್ತು. ಅಂತಹ ಪೂಜನೀಯ ಗೋಮಾತೆಯನ್ನು ಅಕ್ರಮ ಗೋ ಸಾಗಾಣೆಕಾರರಿಗೆ ಲಾಭ ಮಾಡಿಕೊಡುವ ನಿಟ್ಟಿನಲ್ಲಿ ಈ ಯೋಜನೆಯನ್ನು ಹಿಂಪಡೆಯಲಾಗಿದೆ. ಬಿಜೆಪಿ ಸರ್ಕಾರದಲ್ಲಿ ನೀರಾವರಿ ಯೋಜನೆಗಳಿಗೆ 23 ಸಾವಿರ ಕೋಟಿ ಅನುದಾನ ಒದಗಿಸಿದ್ದು ಅದನ್ನು ಈಗ 19 ಸಾವಿರ ಕೋಟಿ ರೂ.ಗೆ ಇಳಿಸಿ, ಮೇಕೆದಾಟು ಯೋಜನೆಗಾಗಿ ಕಾಂಗ್ರೇಸ್ ಮಾಡಿದ ಪಾದಯಾತ್ರೆ ಕೇವಲ ರಾಜಕೀಯ ಸ್ಟಂಟ್ ಎಂಬುದನ್ನು ನಿರೂಪಿಸಿದೆ ಎಂದು ವಾಗ್ದಾಳಿ ಮಾಡಿದರು.
ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವಡೆ, ಅನೀಲ ಜಮಾದಾರ, ಹಣಮಂತರಾಯಗೌಡ ಪಾಟೀಲ, ಸಿದ್ಧಲಿಂಗ ಹಂಜಗಿ, ಶಾಂತು ಕಂಬಾರ, ಮಲ್ಲಿಕಾರ್ಜುನ ವಾಲಿಕಾರ, ರಾಜಶೇಖರ ಯರಗಲ್, ಅನೀಲಗೌಡ ಬಿರಾದಾರ, ಸೋಮು ನಿಂಬರಗಿಮಠ ದತ್ತಾ ಬಂಡೆನವರ ಉಪಸ್ಥಿತರಿದ್ದರು.