ಅಭಿವೃದ್ಧಿ ಮತ್ತು ಗ್ಯಾರಂಟಿ ಯೋಜನೆಗಳೇ ನಮ್ಮ ಶ್ರೀರಕ್ಷೆ: ಶಾಸಕ ಸಿ.ಎಸ್. ನಾಡಗೌಡ
——-
ಮಾಜಿ ಶಾಸಕ ನಡಹಳ್ಳಿ ವಿರುದ್ಧ: ಹಾಲಿ ಶಾಸಕ ನಾಡಗೌಡ ವಾಗ್ದಾಳಿ
——–
ಮಾಜಿ ಶಾಸಕ ನಡಹಳ್ಳಿಯವರು ಮತಕ್ಷೇತ್ರ ಜನರ ಹಾದಿಯನ್ನು ತಪ್ಪಿಸ ಬಾರದು: ಶಾಸಕ ನಾಡಗೌಡ ಕಿವಿ ಮಾತು.
ಮುದ್ದೇಬಿಹಾಳ: ನಮ್ಮ ಸರ್ಕಾರದ ಸಾಧನೆ
ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾಂಗ್ರೆಸ್ ಮುಂಚೂಣಿ ನಾಯಕರು ಮತ್ತು ಕಾರ್ಯಕರ್ತರು ಯಶಸ್ವಿಯಾಗಿದ್ದಾರೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ 1000 ದಿನಗಳ ಸಾಧನೆಯನ್ನು ಜನರಿಗೆ ಮನವರಿಕೆ ಮಾಡಿಕೊಡುತ್ತಿದ್ದೇವೆ,” ಎಂದು ಕೆ.ಎಸ್.ಡಿ.ಎಲ್. ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಸಿ.ಎಸ್. ನಾಡಗೌಡ ಹೇಳಿದರು.
ಸೋಮವಾರ ಪಟ್ಟಣದ ನಾಡಗೌಡರು ತಮ್ಮ ನಿವಾಸದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳ ಯಶಸ್ಸು ”ಸರ್ಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ ಮತ್ತು ಅನ್ನಭಾಗ್ಯ ಯೋಜನೆಗಳನ್ನು ಜಾರಿಗೆ ತರಲಾಯಿತು. ಟೀಕೆ-ಟಿಪ್ಪಣಿಗಳ ನಡುವೆಯೂ ಆರ್ಥಿಕವಾಗಿ ಹಿಂದುಳಿದವರಿಗೆ ನೇರ ನೆರವು ನೀಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ನಮ್ಮ ಕ್ಷೇತ್ರದಲ್ಲಿ ಶೇ. 90ಕ್ಕೂ ಹೆಚ್ಚು ಜನ ಈ ಯೋಜನೆಗಳ ಲಾಭ ಪಡೆಯುತ್ತಿದ್ದಾರೆ. ವಿಶೇಷವಾಗಿ ಶೇ. 83ರಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಮಹತ್ವದ ಪ್ರಯೋಜನ ಪಡೆಯುತ್ತಿದ್ದು, ಬಡವರ ಮುಖದಲ್ಲಿ ನಗು ಕಾಣುತ್ತಿದೆ,” ಎಂದು ಹರ್ಷ ವ್ಯಕ್ತಪಡಿಸಿದರು.
ನಡಹಳ್ಳಿ ವಿರುದ್ಧ: ನಾಡಗೌಡ ವಾಗ್ದಾಳಿ.
ಮಾಜಿ ಶಾಸಕ ಎ.ಎಸ್. ಪಾಟೀಲ ನಡಹಳ್ಳಿ ಅವರ ಟೀಕೆಗಳಿಗೆ ಉತ್ತರಿಸಿದ ನಾಡಗೌಡರು, “ಮುದ್ದೇಬಿಹಾಳ ಕ್ಷೇತ್ರಕ್ಕೆ ಒಂದು ರೂಪಾಯಿ ಅನುದಾನ ತಂದಿಲ್ಲ ಎಂದು ಸುಳ್ಳು ಹೇಳುತ್ತಿದ್ದಾರೆ. ನಾನು ಕ್ಷೇತ್ರಕ್ಕೆ 700 ಕೋಟಿ ರೂಪಾಯಿಗೂ ಹೆಚ್ಚು ಅನುದಾನ ತಂದಿದ್ದೇನೆ. ನಡಹಳ್ಳಿಯವರು ತಮ್ಮ ಅವಧಿಯಲ್ಲಿ ಕುಟುಂಬದವರಿಗೆ, ತಮ್ಮ-ಹಳೆಯ ಮಗನಿಗೆ ಗುತ್ತಿಗೆ ಕೆಲಸಗಳನ್ನು ನೀಡುತ್ತಿದ್ದರು. ಆದರೆ ಈಗಿನ ಆಡಳಿತದಲ್ಲಿ ಅಂತಹ ಪದ್ಧತಿ ಇಲ್ಲ. ಲೇಟರ್ಪ್ಯಾಡ್ ದುರ್ಬಳಕೆಯಾಗಬಾರದೆಂದು ನಾನು ನೇರವಾಗಿ ಜನಸಂಪರ್ಕಕ್ಕೆ ಸಿಗುತ್ತಿದ್ದೇನೆ. ಟೀಕೆ ಮಾಡುವುದನ್ನು ಬಿಟ್ಟು ನೈತಿಕ ರಾಜಕಾರಣ ಮಾಡಲಿ,” ಎಂದು ತಿರುಗೇಟು ನೀಡಿದರು.
ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ
”ನಮ್ಮ ಸರ್ಕಾರ ಜಾರಿಗೆ ತಂದಿದ್ದ ನರೇಗಾ ಯೋಜನೆಯ ಹೆಸರನ್ನು ಬದಲಿಸಿ, ಕೇಂದ್ರದ ಮೋದಿ ಸರ್ಕಾರ ಬಡವರ ಕೂಲಿಯನ್ನು ನಿಲ್ಲಿಸುತ್ತಿದೆ.
ನೀರಾವರಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ಕೇಂದ್ರದಿಂದ ಸರಿಯಾದ ಅನುದಾನ ಸಿಗುತ್ತಿಲ್ಲ.
ಇದು ಉತ್ತರ ಕರ್ನಾಟಕದ ಜನರಿಗೆ ಮಾಡುತ್ತಿರುವ ಅನ್ಯಾಯ,” ಎಂದು ಶಾಸಕ ನಾಡಗೌಡ ಆಕ್ರೋಶ ಹೊರಹಾಕಿದರು.
ಕ್ಷೇತ್ರ ಮೀಸಲಾತಿ ಮತ್ತು ರಾಜಕೀಯ ನಿವೃತ್ತಿ
ತಮ್ಮ ರಾಜಕೀಯ ನಿವೃತ್ತಿಯ ಬಗ್ಗೆ ಹಬ್ಬಿರುವ ವದಂತಿಗಳಿಗೆ ಸ್ಪಷ್ಟನೆ ನೀಡಿದ ಅವರು, “ನಾನು ಎಂದಿಗೂ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿಲ್ಲ. ಮತಕ್ಷೇತ್ರಗಳ ಪುನರ್ ವಿಂಗಡಣೆಯಾಗಿ ಕ್ಷೇತ್ರ ಮೀಸಲಾತಿ ಬದಲಾದರೆ ಮಾತ್ರ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ವಿಚಾರ ಬರುತ್ತದೆ ಶಾಸಕ ನಾಡಗೌಡ ಅವರು ಜನರ ಪ್ರೀತಿ ಇರುವವರೆಗೂ ನಾನು ಚುನಾವಣಾ ರಾಜಕಾರಣದಲ್ಲಿ ಸಕ್ರಿಯನಾಗಿರುತ್ತೇನೆ,” ಎಂದು ಸ್ಪಷ್ಟಪಡಿಸಿದರು. ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲಾ ಶಾಸಕರು ಒಗಟ್ಟಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಹೆಚ್ಚಿನ ಅನುದಾನಕ್ಕೆ ಬೇಡಿಕೆ ಇಡೋಣ ಎಂದರು.
ಈ ಸಂದರ್ಭದಲ್ಲಿ ತಾಲೂಕು ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ,ಪುರಸಭೆನಿಕಟಪೂರ್ವ ಅಧ್ಯಕ್ಷ ಮಹೆಬೂಬು ಗೊಳಸಂಗಿ ಗುತ್ತಿಗೆದಾರ ಸಿ ಬಿ ಅಸ್ಕಿ, ಪಿಎಲ್ ಡಿ ಬ್ಯಾಂಕ್ ಅಧ್ಯಕ್ಷ ಬಿ ಕೆ ಬಿರಾದಾರ, ವಾಯ್ ಹೆಚ್ ವಿಜಯಕರ,ಬಾಪುರಾವು ದೇಸಾಯಿ, ಕಾಂಗ್ರೆಸ್ ಎಸ್ ಸಿ ಘಟಕದ ಅಧ್ಯಕ್ಷ ಶ್ರೀಕಾಂತ್ ಚಲವಾದಿ,ಮುತ್ತಣ್ಣ ಮಸೂತಿ,ಸಂತೋಷ ಚವ್ಹಾಣ, ಸರಕಾರಿ ಆಸ್ಪತ್ರೆ ನಾಮನಿರ್ದೇಶನ ಸದಸ್ಯರಾದ ಡಾ! ವಿಜಯಕುಮಾರ ಗೊಳಿ,ಸದು ಮಠ,ರಪೀಕ ಶಿರೋಳ,ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸೇರಿದಂತೆ ಉಪಸ್ಥಿತರಿದ್ದರು.