ಜೂ.01ರಂದು ಅತಿಥಿ ಶಿಕ್ಷಕ-ಉಪನ್ಯಾಸಕರ ಆಯ್ಕೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ
ವಿಜಯಪುರ ಮೇ.30 : 2025-26ನೇ ಶೈಕ್ಷಣಿಕ ಸಾಲಿಗೆ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ 157 ಖಾಲಿ ಇರುವ ಅತಿಥಿ ಶಿಕ್ಷಕರು-ಉಪನ್ಯಾಸಕರ ಆಯ್ಕೆಗಾಗಿ ಜೂನ್ 01 ರಂದು ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಟಿ) ಜಿಲ್ಲೆಯ 02 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಯನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವಂತೆ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಅವರು ಸೂಚಿಸಿದರು.
ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಿಇಟಿ ಪರೀಕ್ಷಾ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ಒಟ್ಟು 02 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ 11 ರಿಂದ ಮದ್ಯಾಹ್ನ 01 ಗಂಟೆಯವರೆಗೆ ಸಾಮಾನ್ಯ ಪ್ರವೇಶ ಪರೀಕ್ಷೆ ಜರುಗಲಿದ್ದು, ಜಿಲ್ಲೆಯಲ್ಲಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಒಟ್ಟು 950 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.
ಪ್ರತಿ 24 ಅಭ್ಯರ್ಥಿಗಳಿಗೆ ಓರ್ವ ಕೊಠಡಿ ಮೇಲ್ವಿಚಾರಕರನ್ನು ನೇಮಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳು ಪರೀಕ್ಷಾ ಕೇಂದ್ರಗಳಲ್ಲಿ ನಿಗದಿತ ಅಭ್ಯರ್ಥಿಗಳಿಗನುಸಾರ ಸೂಕ್ತ ಆಸನ ವ್ಯವಸ್ಥೆ, ಪರೀಕ್ಷಾ ಕೊಠಡಿಯಲ್ಲಿ ಸರಿಯಾದ ಗಾಳಿ-ಬೆಳಕಿನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಸಿದ್ಧತೆಗಳು ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷೆಗೆ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಕಡ್ಡಾಯವಾಗಿ ಪ್ರವೇಶ ಪತ್ರವನ್ನು ಪರಿಶೀಲನೆ ನಡೆಸಿ ಪ್ರವೇಶಾವಕಾಶ ಒದಗಿಸಬೇಕು. ಪರೀಕ್ಷೆ ಬರೆಯುವ ಅಭ್ಯರ್ಥಿಯು ಪ್ರವೇಶ ಪತ್ರ, ಆಧಾರ ಕಾರ್ಡ್ ಸೇರಿದಂತೆ ಅಧಿಕೃತ ಗುರುತಿನ ಚೀಟಿ ಹೊಂದಿರಬೇಕು. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಆಧುನಿಕ ಎಲೆಕ್ಟ್ರಾನಿಕ್, ಡಿಜಿಟಲ್ ಉಪಕರಣಗಳು, ಮೊಬೈಲ್ ಪೆÇೀನ್, ಬ್ಲೂಟೂಥ್ ಹಾಗೂ ಇತರೆ ಇಲೆಕ್ಟ್ರಾನಿಕ್ ವಸ್ತುಗಳ ತರದಂತೆ ನಿಗಾ ವಹಿಸುವುದು ಸೇರಿದಂತೆ ಪರೀಕ್ಷೆ ಅವಧಿಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿμÉೀಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಅವರು ಹೇಳಿದರು.
ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ವೀಕ್ಷಕ, ಪ್ರತಿ ಪರೀಕ್ಷಾ ಕೇಂದ್ರಕ್ಕೆ ಓರ್ವ ಉಪ ಮುಖ್ಯ ಅಧೀಕ್ಷಕರು, ಓರ್ವ ಪ್ರಶ್ನೆ ಪತ್ರಿಕೆ ಪಾಲಕರು ಮತ್ತು ಓರ್ವ ವಿಶೇಷ ಸ್ಥಾನಿಕ ಜಾಗೃತ ದಳ ಸದಸ್ಯರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರಗಳಿಗೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕು. ಎಲ್ಲ ವೀಕ್ಷಕರು, ಮೇಲ್ವಿಚಾರಕರು, ಉಪ ಮುಖ್ಯ ಅಧೀಕ್ಷಕರುಗಳು ವೀಕ್ಷಣಾಧಿಕಾರಿಗಳು, ಜಾಗೃತದಳದ ಅಧಿಕಾರಿಗಳು, ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿಗಳು, ಸಹ ಮುಖ್ಯ ಅಧಿಕ್ಷಕರು ಸೇರಿದಂತೆ ಪರೀಕ್ಷೆಗೆ ನಿಯೋಜಿತ ಎಲ್ಲ ಅಧಿಕಾರಿಗಳು ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಮಾರ್ಗಸೂಚಿಯಂತೆ ಜವಾಬ್ದಾರಿಯಿಂದ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆಯೂ, ಜಿಲ್ಲೆಯ 02 ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೆÇಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಲೋಪಗಳಿಗೆ ಅವಕಾಶ ನೀಡದೇ ಯಶಸ್ವಿಯಾಗಿ ಪರೀಕ್ಷೆ ನಡೆಸುವಂತೆ ಅವರು ಸೂಚನೆ ನೀಡಿದರು.
ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ಜಿಲ್ಲಾ ಹಂತದಲ್ಲಿಯೇ ಸಿದ್ಧಪಡಿಸಿ ಎಲ್ಲಾ ಅಭ್ಯರ್ಥಿಗಳಿಗೆ ವಿತರಿಸುವ ನಿಟ್ಟಿನಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ ದೂರವಾಣಿ ಕರೆ ಹಾಗೂ ಎಸ್ಎಂಎಸ್ ಸಂದೇಶ ಮೂಲಕ ಮಾಹಿತಿ ನೀಡುವುದಕ್ಕೆ ಕ್ರಮವಹಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಖಜಾನೆ ಇಲಾಖೆ ಉಪ ನಿರ್ದೇಶಕರಾದ ಹಣಮಂತ ಕಾಲತಿಪ್ಪಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಪ್ರಶಾಂತ ಪೂಜಾರಿ, ಜಿಲ್ಲಾ ಪಂಚಾಯತಿ ಯೋಜನಾ ಮತ್ತು ಅಂದಾಜು ಮೌಲ್ಯ ಮಾಪನಾಧಿಕಾರಿಗಳಾದ ಎ.ಬಿ.ಅಲ್ಲಾಪುರ ಸೇರಿದಂತೆ ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.