ನವದೆಹಲಿ: ರಾಜ್ಯದಲ್ಲಿ ಬಹು ದಿನಗಳಿಂದ ನಿರೀಕ್ಷೆ ಮಾಡಲಾಗಿದ್ದ ಸಚಿವ ಸಂಪುಟ ವಿಸ್ತರಣೆಗೆ ಇಂದು ಬಿಜೆಪಿ ಹೈ ಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಜತೆಗಿನ ಮಾತುಕತೆ ವೇಳೆ ಮುಖ್ಯಮಂತ್ರಿ ಅವರಿಗೆ ಸಂಪುಟ ವಿಸ್ತರಣೆಯ ಅನುಮತಿ ನೀಡಲಾಗಿದೆ.
ಸಂಪುಟಕ್ಕೆ ಯಾರನ್ನು ಸೇರಿಸಬೇಕು ಎಂಬುದನ್ನು ನೀವು ನಿರ್ಧರಿಸಿ. ಪಟ್ಟಿ ಮಾಡಿ ಎಂದು ನಡ್ಡಾ ಅವರು ಸಿಎಂಗೆ ಸೂಚಿಸಿದ್ದಾರೆ.
ಕೆಲವು ಹಾಲಿ ಸಚಿವರನ್ನು ಕೈ ಬಿಟ್ಟು ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.