ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
ಮುದ್ದೇಬಿಹಾಳ: ತಾಲೂಕಿನ ಶ್ರೀಕ್ಷೇತ್ರ ತಂಗಡಗಿ ಗ್ರಾಮದ ಹಡಪದ ಅಪ್ಪಣ್ಣ ದೇವರ ಮಹಾ ಸಂಸ್ಥಾನಮಠದ ಸಭಾ ಭವನದಲ್ಲಿ ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘ ಬೆಂಗಳೂರು ಇವರ ನೇತೃತ್ವದಲ್ಲಿ ರಾಜ್ಯ ಸಂಘದ ಸರ್ವ ಸದಸ್ಯರ(ಜಿಬಿ)ವಾರ್ಷಿಕ ಸಭೆ ಮೇ.27 ಮಂಗಳವಾರ ರಂದು ಮುಂಜಾನೆ 11ಗಂಟೆಗೆ ಕರೆಯಲಾಗಿದೆ. ರಾಜ್ಯ ಸಂಘದ ಎಲ್ಲಾ ಪದಾಧಿಕಾರಿಗಳು, ಕಾರ್ಯಕಾರಿಮಂಡಳಿ ಸದಸ್ಯರು, ಸಲಹಾಸಮಿತಿ ಸದಸ್ಯರು, ಜಿಲ್ಲಾ ಅಧ್ಯಕ್ಷರು, ತಾಲೂಕು ಅಧ್ಯಕ್ಷರು, ಸಂಘದ ಎಲ್ಲಾ ಸದಸ್ಯರು ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಮಾಧ್ಯಮ ಪ್ರತಿನಿಧಿ ನಾಗೇಶ ನಾಗೂರ, ರಾಜ್ಯಾಧ್ಯಕ್ಷ ಸಿದ್ದಪ್ಪ ಹಡಪದ, ಪ್ರಭಾರಿ ಪ್ರಧಾನ ಕಾರ್ಯದರ್ಶಿ ಮಂಜಪ್ಪ ಹಡಪದ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
© 2026 VOJNews - Powered By Kalahamsa Infotech Private Limited.