• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸುದ್ದಿ

      ಚರ್ಮರೋಗದಿಂದ ಬಳಲುತ್ತಿರುವ ಮನೆಗೆ ಆರೋಗ್ಯ ಸಚಿವರಾದ ಆರ್ ದಿನೇಶ್ ಗುಂಡೂರಾವ್ ಭೇಟಿ..

      Voj - News

      September 23, 2023
      0
      ಚರ್ಮರೋಗದಿಂದ ಬಳಲುತ್ತಿರುವ ಮನೆಗೆ ಆರೋಗ್ಯ ಸಚಿವರಾದ ಆರ್ ದಿನೇಶ್ ಗುಂಡೂರಾವ್ ಭೇಟಿ..
      0
      SHARES
      255
      VIEWS
      Share on FacebookShare on TwitterShare on whatsappShare on telegramShare on Mail

      ಚರ್ಮರೋಗದಿಂದ ಬಳಲುತ್ತಿರುವ ಮನೆಗೆ ಆರೋಗ್ಯ ಸಚಿವರಾದ ಆರ್ ದಿನೇಶ್ ಗುಂಡೂರಾವ್ ಭೇಟಿ..

      ಹನೂರು: ವಿರಳ ಚರ್ಮ ರೋಗ ಪತ್ತೆಯಾಗಿರುವ ಹನೂರು ತಾಲೂಕಿನ ಕುರಟ್ಟಿ ಹೊಸೂರು ಹಾಗೂ ಭದ್ರಯ್ಯನಹಳ್ಳಿ ಗ್ರಾಮಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಚರ್ಮ ರೋಗದಿಂದ ಬಳಲುತ್ತಿರುವವರ ಆರೋಗ್ಯ ವಿಚಾರಿಸಿದರು.

      ಭದ್ರಯ್ಯನಹಳ್ಳಿ ಗ್ರಾಮದಲ್ಲಿ ಚರ್ಮ ರೋಗದಿಂದ ಬಳಲುತ್ತಿರುವ ಮಗುವಿನ ಮನೆಗೆ ಭೇಟಿ ನೀಡಿದ ಸಚಿವರು ಎಷ್ಟು ದಿನದಿಂದ ತೊಂದರೆ ಕಾಣಿಸಿಕೊಂಡಿದೆ. ಯಾವ ಚಿಕಿತ್ಸೆ ನೀಡಲಾಗುತ್ತಿದೆ. ಯಾವ ಬಗೆಯ ಔಷಧಗಳನ್ನು ನೀಡಲಾಗುತ್ತಿದೆ ಎಂಬ ಬಗ್ಗೆ ವಿವರವಾಗಿ ಮಾಹಿತಿ ಪಡೆದರು.

      ಕುರಟ್ಟಿ ಹೊಸೂರು ಗ್ರಾಮಕ್ಕೆ ಭೇಟಿ ನೀಡಿ ಚರ್ಮ ರೋಗದಿಂದ ನರಳುತ್ತಿರುವ ಬಾಲಕಿಯ ಮನೆಗೆ ತೆರಳಿ ಅಲ್ಲಿಯೂ ಆರೋಗ್ಯ ವಿಚಾರಿಸಿ ವಿವರ ಪಡೆದರು. ನೀಡಲಾಗುತ್ತಿರುವ ಔಷಧಗಳು, ಚಿಕಿತ್ಸೆ,ಆರೈಕೆ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

      ಇದೇ ವೇಳೆ ಕುಟುಂಬಸ್ಥರಿಗೆ ಹೆಚ್ಚಿನ ನೆರವು, ಪರಿಹಾರ ನೀಡಬೇಕೆಂದು ಸ್ಥಳೀಯರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಸಚಿವರು ಚಿಕಿತ್ಸೆ, ಔಷಧಗಳನ್ನು ಅಗತ್ಯಕ್ಕೆ ಅನುಗುಣವಾಗಿ ನೀಡಲಾಗುವುದು. ಪರಿಹಾರ ಕೊಡಿಸುವ ನಿಟ್ಟಿನಲ್ಲಿಯೂ ಅಗತ್ಯಕ್ರಮ ವಹಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಪಿಂಚಣಿ ನೀಡುವ ಆದೇಶ ಪತ್ರವನ್ನು ಸಚಿವರು ಪೋಷಕರಿಗೆ ವಿತರಿಸಿದರು.

      ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರಾದ ದಿನೇಶ್ ಗುಂಡೂರಾವ್ ಅವರು ಹನೂರು ತಾಲೂಕಿನ ಎರಡರಿಂದ ಮೂರು ಗ್ರಾಮಗಳಲ್ಲಿ ವಿರಳ ಚರ್ಮರೋಗ ಕಂಡುಬಂದ ಹಿನ್ನೆಲೆಯಲ್ಲಿ ಆರೋಗ್ಯ ಅಧಿಕಾರಿಗಳ ತಂಡವನ್ನು ಕಳುಹಿಸಿಕೊಡಲಾಗಿತ್ತು. ತಾವೂ ಸಹ ಈ ಬಗ್ಗೆ ಸಂಪೂರ್ಣವಾಗಿ ವಿವರ ಪಡೆದುಕೊಂಡಿದ್ದೇನೆ. ಅಪರೂಪದ ಈ ರೋಗ ಇತರೆ ಜಿಲ್ಲೆಯ ಕೆಲವೆಡೆ ಕಂಡು ಬಂದಿರುವ ಮಾಹಿತಿ ಇದೆ. ಇದರ ನಿಯಂತ್ರಣ ಹಾಗೂ ನಿರ್ಮೂಲನೆಗೆ ವಿಶೇಷ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

      ರೋಗ ಬಾಧಿತರಿಗೆ ಔಷಧ, ಪೌಷ್ಠಿಕಾಂಶ ಆಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಚಿಕ್ಕ ವಯಸ್ಸಿನಲ್ಲಿಯೇ ವಿರಳ ಚರ್ಮ ರೋಗ ಕಾಣಿಸಿಕೊಂಡಿರುವುದು ಕುಟುಂಬಕ್ಕೆ ನೋವಿನ ಸಂಗತಿಯಾಗಿದೆ. ಸಂಕಷ್ಟದಿಂದ ಬಳಲುತ್ತಿರುವ ಕುಟುಂಬಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ನಂತರ ಚರ್ಚಿಸಿ ಸಹಾನು – ಭೂತಿಯಿಂದ ನೆರವು ನೀಡುವ ನಿಟ್ಟಿನಲ್ಲಿ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವರು ತಿಳಿಸಿದರು.

      ಗಂಭೀರವಾಗಿರುವ ಈ ಚರ್ಮ ರೋಗ ಬರದಂತೆ ತಡೆಯಲು ಅನುಸರಿಸಬೇಕಿರುವ ವಿಧಾನ ಹಾಗೂ ಪರೀಕ್ಷೆಗಳ ಬಗ್ಗೆ ತಿಳಿವಳಿಕೆ ನೀಡಲಾಗುತ್ತಿದೆ. ಗರ್ಭಾವಸ್ಥೆಯಲ್ಲಿಯೇ ರೋಗ ಪತ್ತೆಗೆ ಅವಕಾಶವಿದೆ. ಅಂತಹ ಸಂದರ್ಭಗಳಲ್ಲಿ ಅನುಸರಿಸಬೇಕಾದ ವೈದ್ಯಕೀಯ ಕ್ರಮಗಳ ಬಗ್ಗೆಯೂ ತಿಳಿಸಲಾಗುತ್ತಿದೆ. ರೋಗ ಕಂಡು ಬಂದಿರುವ ಪ್ರದೇಶ ಹಾಗೂ ಕುಟುಂಬಗಳಲ್ಲಿ ವಿಶೇಷವಾಗಿ ಮದುವೆ ವಯಸ್ಸಿನ ಗಂಡು ಹಾಗೂ ಹೆಣ್ಣು ಮಕ್ಕಳಲ್ಲಿ ಪರೀಕ್ಷೆ ನಡೆಸಿ ರೋಗ ಬರದಂತೆ ತಡೆಯುವ ಕ್ರಮಗಳಿಗೂ ಮುಂದಾಗಲಿದ್ದೇವೆ ಎಂದರು. ಬಳಿಕ ಕೊಳ್ಳೇಗಾಲ ಪ್ರವಾಸಿಮಂದಿರದಲ್ಲಿ ಸಿಕಲ್ ಸೆಲ್ ಅನಿಮಿಯಾ ರೋಗದಿಂದ ಬಳಲುತ್ತಿರುವವರು ಹಾಗೂ ಅವರ ಕುಟುಂಬದವರನ್ನು ಭೇಟಿ ಮಾಡಿ ಸಚಿವರು ಆರೋಗ್ಯ ವಿಚಾರಿಸಿದರು.

      ಶಾಸಕರಾದ ಎಂ.ಆರ್. ಮಂಜುನಾಥ್, ಮಾಜಿ ಶಾಸಕರಾದ ಆರ್. ನರೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಆಯುಕ್ತರಾದ ರಂದೀಪ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಉಪವಿಭಾಗಾಧಿಕಾರಿ ಮಹೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ, ಜಿಲ್ಲಾ ಕುಷ್ಠ ರೋಗ ನಿರ್ಮೂಲನಾಧಿಕಾರಿ ಡಾ. ಪ್ರಕಾಶ್, ತಹಶೀಲ್ದಾರ್ ಗುರುಪ್ರಸಾದ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಆರ್. ಉಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್, ಡಾ. ಗೋಪಾಲ್, ಇನ್ನೂ ಮುಂತಾದವರು ಉಪಸ್ಥಿತರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Dinesh gundurava#Hanuru#Helth minister#Suffering Skine deciese#Visited Village
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ

      ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ

      ಇಂಡಿ ಕೈ ಶಾಸಕ ಪಾಟೀಲ ವಿರುದ್ಧ ಬಿಜೆಪಿ ಮುಖಂಡರ ಕಿಡಿ

      August 5, 2026
      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      August 5, 2026
      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      ಭೀಮಾ ನದಿ ಉಕ್ಕುವ ಮುನ್ನೆಚ್ಚರಿಕೆ: ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಎಚ್ಚರಿಕೆ

      August 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.