• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

      ಇಂಡಿಯಲ್ಲಿ ಬರ್ಬರ ಹತ್ಯೆ!

      ಇಂಡಿಯಲ್ಲಿ ಬರ್ಬರ ಹತ್ಯೆ!

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ರಾಜ್ಯ

      ನಗರಸಭೆ ಆಡಳಿತದಲ್ಲಿ ನಾನೇ ಅರ್ಜುನ, ನಾನೆ ಬಬ್ರುವಾಹನ ಎಂದು ವೇಷ ಹಾಕಿಕೊಂಡು ನಾಟಕವಾಡುತ್ತಿದ್ದಾರೆ..!

      ಕಾಂಗ್ರೆಸ್ ಹಿರಿಯ ಸದಸ್ಯರಾದ ಜಯಣ್ಣ ಅಸಮಧಾನ..

      June 7, 2022
      0
      ನಗರಸಭೆ ಆಡಳಿತದಲ್ಲಿ ನಾನೇ ಅರ್ಜುನ, ನಾನೆ ಬಬ್ರುವಾಹನ ಎಂದು ವೇಷ ಹಾಕಿಕೊಂಡು ನಾಟಕವಾಡುತ್ತಿದ್ದಾರೆ..!
      0
      SHARES
      150
      VIEWS
      Share on FacebookShare on TwitterShare on whatsappShare on telegramShare on Mail

      ರಾಯಚೂರು : ನಾನೇ ಅರ್ಜುನ, ಬಬ್ರುವಾಹನ ಎಂದು ವೇಷ ಹಾಕಿಕೊಂಡು ನಾಟಕ ಮಾಡುವ ಆಡಳಿತದಿಂದ ಇಡೀ ನಗರಸಭೆ ಸಾರ್ವಜನಿಕರ ಮಧ್ಯೆ ಭಾರೀ ಟೀಕೆಗೆ ಗುರಿಯಾಗಬೇಕಾಗುತ್ತದೆ ಎಂದು ಕಾಂಗ್ರೆಸ್ ಹಿರಿಯ ಸದಸ್ಯರಾದ ಜಯಣ್ಣ ಅಸಮಧಾನ ವ್ಯಕ್ತಪಡಿಸಿದರು.

      ಕುಡಿವ ನೀರಿಗೆ ಸಂಬಂಧಿಸಿದಂತೆ ಇಂದು ಕರೆಯಲಾದ ತುರ್ತು ಸಾಮಾನ್ಯ ಸಭೆಯಲ್ಲಿ ಸುಧೀರ್ಘವಾಗಿ ಮಾತನಾಡಿದ ಅವರು, ನಗರಸಭೆ ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಯಾರದೋ ಮೂಗಿನ ನೇರಕ್ಕೆ ಆಡಳಿತ ನಿರ್ವಹಣೆ ಬಿಟ್ಟು ಅಧ್ಯಕ್ಷರ ಆದೇಶ ಮತ್ತು ಪರಿಮಿತಿಯಲ್ಲಿ ಕಾರ್ಯ ನಿರ್ವಹಿಸುವ ಮೂಲಕ ಆಪತ್ಕಾಲದಲ್ಲಿ ಸಮಿತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಂತಹ ಆಡಳಿತ ನಡೆಸದಿದ್ದರೇ, ಇಂತಹ ಅವಘಡಗಳಿಗೆ ಅವಕಾಶಗಳು ನೀಡಿದಂತಾಗುತ್ತದೆಂದು ಎಚ್ಚರಿಸುತ್ತಾ, ಕಳೆದ ಮೇ.೨೯ ರಿಂದ ನಿನ್ನೆವರೆಗೂ ನಡೆದಂತಹ ಒಂದು ಅವಘಡ ಕರಾಳ ಅನುಭವಕ್ಕೆ ಕಾರಣವಾಗಿದೆ. ಸುಧೀರ್ಘ ಕಾಲದ ಆಡಳಿತದಲ್ಲೂ ಈ ರೀತಿಯ ತೊಂದರೆ ಆಗಿರಲಿಲ್ಲ. ಬೇಸಿಗೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೀರು ನೀಡಲೇಬೇಕಾದಂತಹ ತುರ್ತು ಪರಿಸ್ಥಿತಿಯಲ್ಲಿ ಕಾಲುವೆ ನೀರು ಸೆಟ್ಲಿಂಗ್ ಟ್ಯಾಂಕ್‌ಗೆ ಬಿಡದೇ, ನೇರವಾಗಿ ಶುದ್ಧೀಕರಣದಿಂದ ಪೂರೈಕೆ ಮಾಡಿದಂತಹ ಘಟನೆಗಳ

      ಈ ರೀತಿಯ ಅವಘಡ ಸಾವು, ನೋವು ಸಂಭವಿಸಿರಲಿಲ್ಲ.
      ರಾಂಪೂರು ಜಲಾಶಯದಲ್ಲಿ ಎರಡು ಶುದ್ಧೀಕರಣ ಘಟಕಗಳಿವೆ. ಒಂದು ಹಳೆಯದು, ಇನ್ನೊಂದು ಹೊಸದು. ೨೦೧೪ ರಲ್ಲಿ ಮ್ಯಾಕ್ರೋ ಅನುದಾನದಲ್ಲಿ ೪.೭೫ ಕೋಟಿ ವೆಚ್ಚದಲ್ಲಿ ೨೦೧೪-೧೫ ರ ಸಾಲಿನಲ್ಲಿ ಹೊಸ ಶುದ್ಧೀಕರಣ ಘಟಕ ನಿರ್ಮಿಸಲಾಯಿತು. ಈ ಹಿಂದೆ ಕಾಂಗ್ರೆಸ್ ಅಧಿಕಾರದಲ್ಲಿರುವಾಗ ಮತ್ತು ಎ.ಮಾರೆಪ್ಪ ಅವರು ಅಧ್ಯಕ್ಷರಾಗಿದ್ದ ಎರಡು ಅವಧಿಯಲ್ಲಿ ನಾನು ನಿರ್ವಹಣಾ ಅಧ್ಯಕ್ಷರಾಗಿದ್ದೆ. ಬ್ಲಿಚಿಂಗ್ ಮಾಡುವ ವ್ಯವಸ್ಥೆ ಕ್ರಮ ಬದ್ಧವಾಗಿ ನಡೆಸಲಾಗುತ್ತಿತ್ತು.

      ಡಿ ಗ್ರೂಪ್ ಅಧಿಕಾರಿಗಳು ಬ್ಲಿಚಿಂಗ್ ಯಾವ ರೀತಿ ಮಾಡಬೇಕೆಂಬ ಮಾಹಿತಿಯಿಲ್ಲದಿದ್ದರೂ, ಹರಿಯುವ ನೀರಿನಲ್ಲಿಯೇ ಬ್ಲಿಚಿಂಗ್ ಮತ್ತು ಆಲಂ ಮೂಲಕ ನೀರು ಶುದ್ಧೀಕರಣಗೊಳಿಸಲಾಗುತ್ತಿತ್ತು. ರಾಂಪೂರಿನಲ್ಲಿ ಇರುವ ವ್ಯವಸ್ಥೆಯನ್ನು ಪ್ರತಿಯೊಬ್ಬರು ಗಮನಿಸಬೇಕಾಗಿದೆ.

      ಕಾಲುವೆಯಿಂದ ನೀರು ನೇರವಾಗಿ ಸಾರ್ವಜನಿಕರಿಗೆ ಬಿಡದೇ, ಅಲ್ಲಿರುವ ಕೆರೆಗಳಲ್ಲಿ ಸಂಗ್ರಹಿಸಲಾಗುತ್ತದೆ. ಈ ಕೆರೆಯ ನೀರು ಶುದ್ಧೀಕರಣ ಘಟಕದ ಮೂಲಕ ಸಾರ್ವಜನಿಕರಿಗೆ ಪೂರೈಕೆ ಮಾಡಲಾಗುತ್ತದೆ. ಈ ವ್ಯವಸ್ಥೆ ಕೃಷ್ಣಾ ಜಾಕ್ವೇಲ್‌ನಲ್ಲಿ ಇಲ್ಲ ಎನ್ನುವುದು ಮತ್ತೊಂದು ಗಮನಾರ್ಹವಾಗಿದೆ. ಎರಡು ಶುದ್ಧೀಕರಣ ಘಟಕಗಳಲ್ಲಿ ಹೊಸ ಶುದ್ಧೀಕರಣ ಘಟಕದ ನಿರ್ವಹಣೆ ನಿರ್ಲಕ್ಷ್ಯ ಇಂದು ಈ ದುರಂತಕ್ಕೆ ಕಾರಣವಾಗಿದೆ.

      ಹೊಸ ಶುದ್ಧೀಕರಣದ ಕಾರ್ಯಕ್ಷಮತೆಯನ್ನು ೨೦-೨-೨೦೧೮ ರಲ್ಲಿ ಪ್ರಾಯೋಗಿಕ ನಿರ್ವಹಣೆ ಮಾಡಲಾಯಿತು. ಮೂರು ತಿಂಗಳ ಕಾಲ ಇದೇ ಘಟಕದಿಂದ ನಗರಕ್ಕೆ ನೀರು ಕೊಡಲಾಯಿತು. ನಂತರ ಕರ್ನಾಟಕ ನಗರ ನೀರು ಮತ್ತು ನೈರ್ಮಲ್ಯ ಅಭಿವೃದ್ಧಿ ವಿಭಾಗದಿಂದ ೨೦-೭-೨೦೧೮ ರಂದು ಈ ಘಟಕವನ್ನು ಹಸ್ತಾಂತರ ಮಾಡಿಕೊಳ್ಳಲು ನಗರಸಭೆಗೆ ಪತ್ರ ಬರೆಯಲಾಗಿತ್ತು.

      ಆದರೆ, ಈ ಪತ್ರಕ್ಕೆ ನಗರಸಭೆಯಿಂದ ೨೧ ತಿಂಗಳ ನಂತರ ಅಂದರೇ, ೨೭-೦೪-೨೦೨೦ ರಲ್ಲಿ ಉತ್ತರ ಬರೆದು, ಈ ಯೋಜನೆಯಲ್ಲಿ ಕ್ರಿಯಾಲೋಪಗಳಿರುವುದರಿಂದ ದುರಸ್ತಿ ಮಾಡಿದ ನಂತರ ಇದನ್ನು ಹಸ್ತಾಂತರಿಸಿಕೊಳ್ಳಲಾಗುತ್ತದೆಂದು ಅಂದಿನ ಆಯುಕ್ತ ದೇವಾನಂದ ದೊಡ್ಡಮನಿ ಅವರು ಪತ್ರ ಬರೆದಿದ್ದರು. ನಂತರ ೨೦೨೦ ಏಪ್ರೀಲ್, ಮೇ, ಜೂನ್ ತಿಂಗಳಲ್ಲಿ ಪುನಃ ಪತ್ರ ವ್ಯವಹಾರ ನಡೆಯಿತು.

      ನಗರಸಭೆ ವಿಳಂಬ ಪ್ರತಿಕ್ರಿಯೆಯಿಂದಾಗಿ ಕರ್ನಾಟಕ ನಗರ ಕುಡಿವ ನೀರು ವಿಭಾಗ ನಗರಸಭೆಗೆ ಮತ್ತೊಂದು ಪತ್ರ ಬರೆದು, ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ಪತ್ರಕ್ಕೆ ೨೧ ತಿಂಗಳು ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಕ್ರಿಯಾಲೋಪಗಳ ದುರಸ್ತಿಗಾಗಿ ನಗರಸಭೆಯಿಂದ ಅನುದಾನ ನೀಡಬೇಕೆಂದು ೫೮ ಲಕ್ಷ ರೂ.ಗಳ ಅಂದಾಜು ವೆಚ್ಚ ಕಳುಹಿಸಲಾಗಿತ್ತು. ಈ ಘಟಕವನ್ನು ಇನ್ನಾದರೂ ಸಕ್ರಿಯಗೊಳಿಸಲು ಕ್ರಮ ಕೈಗೊಳ್ಳಬೇಕಾಗಿದೆ. ಈ ಎಲ್ಲಾ ಮಾಹಿತಿಯನ್ನು ಇಲ್ಲಿ ಆಡಳಿತ ನಿರ್ವಹಿಸುವವರು ಹೊಂದಿರಬೇಕು.

      ಆದರೆ,ಇಲ್ಲಿ ನಾನೇ ಅರ್ಜುನ, ಬಬ್ರುವಾಹನ ಎನ್ನುವ ರೀತಿಯಲ್ಲಿ ನಾಟಕ ನಡೆದಿದೆ. ಇವರಿಗೆ ಯಾರು ಏನು ಹೇಳುವ ಅವಕಾಶಗಳೇ ಇಲ್ಲದಂತಾಗಿದೆ.
      ಆಲಂ, ಬ್ಲಿಚಿಂಗ್ ಇಲ್ಲದಿದ್ದರೇ, ನೀರು ನಿರ್ವಹಣೆ ಕಿರಿಯ ಅಭಿಯಂತರರಾಗಲಿ, ಅಧಿಕಾರಿಗಳಾಗಲಿ ಏನು ಮಾಡಬೇಕು. ಇಂತಹ ಅವಘಡಗಳಿಗೆ ನಾವೆಲ್ಲರೂ ಪಾಲುದಾರರೇ ಎನ್ನುವುದು ಮರೆಯಬಾರದು. ಸೇಡು ಮತ್ತು ಹಸ್ತಕ್ಷೇಪದ ರಾಜಕೀಯ ತಡೆಯುವ ಅಗತ್ಯವಿದೆ. ಅಧಿಕಾರದ ಬಲ, ಶಕ್ತಿ, ಪಾಂಡಿತ್ಯ ಇದೆ ಎಂದು ನವೋದಯ ಇಂಜಿನಿಯರ್ ಕಾಲೇಜು ಸೇರಿದಂತೆ ಪ್ರಶ್ನಿಸುವವರ ಸಂಸ್ಥೆಗಳಿಗೆ ನೀರು ಕಟ್ಟು ಮಾಡುವಂತಹ ವ್ಯವಸ್ಥೆ ದುರುದ್ದೇಶಪೂರಕ ಎನಿಸುತ್ತದೆ.

      ಈ ರೀತಿಯ ದುರುದ್ದೇಶ ಆಡಳಿತದ ಬಗ್ಗೆ ಎಚ್ಚರಿಕೆಯಿಂದ ಕೆಲಸ ಮಾಡಬೇಕಾಗುತ್ತದೆ. ಸದಸ್ಯರು ಹುದ್ದೆಯ ಗಾಂಭೀರ್ಯತೆಯನ್ನು ಮನವರಿಕೆ ಮಾಡಿಕೊಂಡು ಹಸ್ತಕ್ಷೇಪವಿಲ್ಲದೇ, ಆಡಳಿತ ನಡೆಯಬೇಕು. ಇಲ್ಲದಿದ್ದರೇ ನಾವು ಆಡಳಿತಪೂರಕವಾಗಿ ಉತ್ತರಿಸಬೇಕಾಗುತ್ತದೆ.
      ಗಂಭೀರ ವಿಷಯ ಬಂದಾಗ ಸದಸ್ಯರ ಮಾಹಿತಿ ಪಡೆಯಬೇಕು. ಯಾರ ಅಧಿಕಾರ, ಯಾರು ಅತಿಕ್ರಮಿಸಿದಂತೆ ಆಯುಕ್ತರು ಈ ನಗರಸಭೆಯ ಮುಖ್ಯಸ್ಥರಾಗಿ ಕಾನೂನಾತ್ಮಕ ತೀರ್ಮಾನಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

      Tags: #arujent meeting#Death#Nagara sabhe#water
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      April 18, 2026
      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.