ಸಾಮನ್ಯರ ಧ್ವನಿಯಾಗಿ ಕೆಲಸ ಮಾಡುವೆ : ಜಿಲ್ಲಾ ಅಧ್ಯಕ್ಷ ಅಶೋಕ
ಇಂಡಿ : ಗುಮ್ಮಟ ನಗರಿಯ ನೂತನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅಶೋಕ ಜಾಧವ ಆಯ್ಕೆ ಹಿನ್ನೆಲೆ ಪಕ್ಷದ ಜಿಲ್ಲಾ ಹಾಗೂ ತಾಲೂಕಾ ಸೇನಾನಿಗಳಲ್ಲಿ ಹರ್ಷ ವ್ಯಕ್ತವಾಗಿದ್ದು, ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ.
ಹೌದು ಇಂಡಿ ಮತಕ್ಷೇತ್ರದ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಪರಾಭವಗೊಂಡಿರುವ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿ ಅಶೋಕ ಜಾಧವ ಅವರನ್ನು ಕೆ.ಆರ್.ಎಸ್ ಪಕ್ಷದ ವಿಜಯಪುರ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿ, ಪಕ್ಷದ ಸಂಸ್ಥಾಪಕ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಆದೇಶ ಹೊರಡಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕೆ.ಆರ್.ಎಸ್ ಪಕ್ಷದ ವಿಜಯಪುರ ನೂತನ ಜಿಲ್ಲಾಧ್ಯಕ್ಷ ಅಶೋಕ ಜಾಧವ ಮಾತನಾಡಿ, ಸದ್ಯ ಪಕ್ಷದ ವರಿಷ್ಠರು ನೀಡಿರುವ ಜಿಲ್ಲಾಧ್ಯಕ್ಷ ಸ್ಥಾನದ ಜವಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಎಲ್ಲ ಸೇನಾನಿಗಳ ಜೊತೆಗೂಡಿ ಪಕ್ಷ ಜಿಲ್ಲೆಯಾದ್ಯಂತ ಸಂಘಟಿಸಿ, ಜನಸಾಮಾನ್ಯರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ವಾಗ್ದಾನ ಮಾಡಿದರು.