ವಿಧ್ಯಾರ್ಥಿಗಳ ಪ್ರತಿಭೆಗೆ ಪ್ರತಿಭಾ ಕಾರಂಜಿ ಸ್ಪೂರ್ತಿ ..!
ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾದ್ಯ : ಇಸಿಒ ಹುಣಸಿಗಿ
ಇಂಡಿ : ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಕೊಡುವ ಉದ್ದೇಶದಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಕಾರಂಜಿ ಸುಮಾರು 15 ವರ್ಷಗಳದಿಂದ ಕಾರ್ಯಕ್ರಮ ಆಯೋಜಿಸುತ್ತಾ ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಲಾಗುತ್ತದೆ. ಇದರಲ್ಲಿ ಮಕ್ಕಳ ಪ್ರತಿಭೆ ಹೊರಹೊಮ್ಮಿದರೆ ಸಾಧನೆ ಸಾಧ್ಯೆವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣ ಇಲಾಖೆ ಇಸಿಒ ಆನಂದ ಹುಣಸಿಗಿ ಹೇಳಿದರು.
ತಾಲ್ಲೂಕಿನ ತಡವಲಗಾ ಗ್ರಾಮದ ಶ್ರೀ ಮರುಳಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿ ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ನೇತೃತ್ವದಲ್ಲಿ ನಡೆದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ಮುಗ್ಧ ಮನಸುಗಳ ಪ್ರತಿಭೆ ಅನಾವರಣವೇ ಪ್ರತಿಭಾ ಕಾರಂಜಿ ಶಿಕ್ಷಣ ಇಲಾಖೆ 1ರಿಂದ 12 ತರಗತಿ ವಿದ್ಯಾರ್ಥಿಗಳಿಗೆ ಜನಪದ ನೃತ್ಯ, ಧಾರ್ಮಿಕ ಪಠಣ, ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಭಾಷಾ ಕಂಠಪಾಠ, ಭರತನಾಟ್ಯ, ಚಿತ್ರಕಲೆ, ರಂಗೋಲಿ ಸ್ಪರ್ಧೆ, ಆಶುಭಾಷಣ, ಮಿಮಿಕ್ರಿ, ಕ್ವೀಜ್ ಹಾಗೂ ಕವಾಲಿ ಮೂಲಕ ಮುಗ್ಧ ಮನಸುಗಳ ಪ್ರತಿಭೆಯನ್ನು ಕ್ಲಸ್ಟರ್ ಹಂತದಲ್ಲಿ ಗುರುತಿಸಿ ಪ್ರೋತ್ಸಾಹಿಸುವಂತ ಕಾರ್ಯ ಮಹತ್ವದ ಕಾರ್ಯನಡೆಯುತ್ತಿದೆ. ಈ ಕಾರ್ಯಕ್ರಮ ಯಶಸ್ವಿಯಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕಾಂತು ಇಂಡಿ, ಮಕ್ಕಳಿಗೆ ಪ್ರತಿಭಾ ಕಾರಂಜಿ ಕನ್ನಡ ಸಂಸ್ಕೃತಿ ನಾಡಿನ ಪರಂಪರೆ ಹಾಗೂ ಮಕ್ಕಳಲ್ಲಿ ಸ್ಪರ್ಧಾತ್ಮಕ ಬೆಳವಣಿಗೆಗೆ ಸಹಾಯಕವಾಗಿದೆ. ಮಕ್ಕಳ ಸಾಂಸ್ಕೃತಿಕ ಎಂದು ಹೇಳಿದರು.
ಇನ್ನೂ ಇದೆ ಸಂದರ್ಭದಲ್ಲಿ ಶಿಕ್ಷಕ ರಮೇಶ್ ಮಂಜಾಣಿ, ನಮ್ಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಗುರು ನಿಂಗಪ್ಪ ತಳವಾರ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ಗ್ರಾಪಂ ಅಧ್ಯಕ್ಷೆ ಸುನಂದಾ ವಾಲಿಕಾರ, ಸಿಆರ್ಪಿ ಪ್ರಕಾಶ್ ರಾಥೋಡ್, ಎಸ್ ಜಿ ನಾರಾಯಣಕರ್ , ಎಂ ಜಿ ರೊಳ್ಳಿ, ಅನಿತಾ ರಾಥೋಡ್, ಎಸ್ ಸಿ.ಗಿಡಗಂಟಿ,ಆನಂದ ಮೊರೆ, ಎಸ್ ಕೆ ಲಾಳಸಂಗಿ ವಿವಿಧ ಶಾಲೆ ಮುಖ್ಯ ಗುರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಎನ್.ಎ.ತಳವಾರ ಸ್ವಾಗತಿಸಿದರು. ಶಿಕ್ಷಕ ಪಿ ಸಿ ಬಗಲಿ ನಿರೂಪಿಸಿದರೆ, ಎನ್.ಸಿ.ಕುಂಬಾರ ವಂದಿಸಿದರು.