ವಿಜಯಪುರ : ವಿಧಾನ ಸಭೆ ಚುನಾವಣೆ ಹಿನ್ನೆಲೆ
ದಾಖಲೆ ಇಲ್ಲದೆ ಸಾರಿಗೆ ಬಸ್ನಲ್ಲಿ ಸಾಗಿಸುತ್ತಿದ್ದ ಹಣ ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಘಟನೆ
ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಯಲಗೂರು ಕ್ರಾಸ್ ಚೆಕ್ಪೋಸ್ಟ್ ಬಳಿ ಮಂಗಳವಾರ ನಡೆದಿದೆ. 9.95 ಲಕ್ಷ ಹಣ ಪೊಲೀಸ್ ವಶಕ್ಕೆ ತೆಗೆದುಕೊಂಡಿದ್ದಾರೆ. ಹೊಸಪೇಟೆಯಿಂದ ವಿಜಯಪುರಕ್ಕೆ ಹೊರಟಿದ್ದ KSRTC ಬಸ್ನಲ್ಲಿ ಹಣ ಜಪ್ತಿಗೈದಿದ್ದಾರೆ. ನೂರ್ಖಾನ್ ಧಪೇದಾರ್ ಎಂಬಾತನ ಬಳಿ ಹಣ ಪತ್ತೆಯಾಗಿದೆ. ನಿಡಗುಂದಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.