ಲಿಂಗಸೂಗೂರು: ಲೋಕಸಭಾ ಸದಸ್ಯರಾದ ರಾಜ ಅಮರೇಶ್ವರ ನಾಯಕರು ಲಿಂಗಸೂಗೂರು ತಾಲೂಕಿನ ಕರಡಕಲ್ ಗ್ರಾಮದಲ್ಲಿ ರಸ್ತೆಯ ಕಾಮಗಾರಿಯ ಭೂಮಿಪೂಜೆ ಹಾಗೂ ನೂತನವಾಗಿ ನಿರ್ಮಾಣವಾಗಿರುವ ಆಸ್ಪತ್ರೆ ಮತ್ತು ಸಮುದಾಯ ಭವನವನ್ನು ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಲಿಂಗಸೂಗೂರು ಶಾಸಕ ಡಿ. ಎಸ್ ಹುಲಿಗೇರಿ ಹಾಗೂ ಹಟ್ಟಿ ಚಿನ್ನದ ಗಣಿಯ ಅಧ್ಯಕ್ಷ, ಮಾಜಿ ಶಾಸಕ ಮಾನಪ್ಪ ಡಿ. ವಜ್ಜಲ್ ಸರ್ವ ಪಕ್ಷದ ಮುಖಂಡರು ಗ್ರಾಮಸ್ಥರು ಉಪಸ್ಥಿತರಿದ್ದರು.