ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ನೀಡುವ ವಿದ್ಯೋತ್ಸವ ಎಜುಕೇಶನ್ ಎಕ್ಸ್’ಪೊ–2026 ಉದ್ಘಾಟನೆ
Vijayapur : ಕರ್ನಾಟಕ ಬಾಲವಿಕಾಸ ಅಕಾಡೆಮಿ-ಧಾರವಾಡ, ವಿಜಯವಾಣಿ ಹಾಗೂ ಎಕ್ಸಲೆಂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ 2 ಮತ್ತು 3ನೇ ಫೆಬ್ರವರಿಯಂದು ಜರುಗಲಿರುವ ವಿದ್ಯೋತ್ಸವ ಎಜುಕೇಶನ್ ಎಕ್ಸ್’ಪೊ 2026 ಉದ್ಘಾಟಿಸಿದೆ.
ವಿದ್ಯೋತ್ಸವವು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ವೃತ್ತಿ ಮಾರ್ಗದರ್ಶನ ಹಾಗೂ ಭವಿಷ್ಯದ ಅವಕಾಶಗಳನ್ನು ಪರಿಚಯಿಸುವ ಮಹತ್ವದ ವೇದಿಕೆಯಾಗಲಿ ಎಂದು ಶುಭಹಾರೈಸಿದೆ.
ಡಾ. ಶ್ರೀ ಶ್ರದ್ಧಾನಂದ ಸ್ವಾಮೀಜಿ, ಶಿವಾನಂದ ಮಠ – ಸದಾಲಗ ಅವರ ದಿವ್ಯಸಾನಿಧ್ಯದಲ್ಲಿ ಜರುಗಿದ ಎಕ್ಸ್’ಪೊ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ ಬಬಲೇಶ್ವರ, ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಶ್ರೀ ಬಸವರಾಜ ಕವಲಗಿ, RKM ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಶಂಬುಲಿಂಗಯ್ಯ ಕರ್ಪೂರಮಠ ಸೇರಿದಂತೆ ಹಲವಾರು ಮಹನೀಯರು, ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳ ಮಾಹಿತಿ ಕೇಂದ್ರಗಳು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.


















