ಇಂಡಿ : ಡಿ . ೧೪ ರಂದು ರಾಷ್ಟ್ರೀಯ ಲೋಕ ಅದಾಲತ್
ಇಂಡಿ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸ್ಥಳೀಯ ನ್ಯಾಯಾಲಯದಲ್ಲಿ ಡಿ ೧೪ ರಂದು ಬೆಳಗ್ಗೆ ೧೦.೩೦ ರಿಂದ ಸಂಜೆ ೫ ರ ವರೆಗೆ ಮೆಗಾ ಲೋಕ ಅದಾಲತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಶ್ರೇಣ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ್ಯ ಪಡಿಸಿ ಇಬ್ಬರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಲೋಕ ಅದಾಲತ ಆಯೋಜಿಸಲಾಗಿದೆ. ಇದು ಈ ವರ್ಷದ ಕೊನೆಯ ಲೋಕ ಅದಾಲತ ಎಂದರು.
ಕಳೆದ ಬಾರಿ ನಡೆದ ಲೋಕ ಅದಾಲತ್ನಲ್ಲಿ ೧೪೯೧ ಪ್ರಕರಣಗಳು ಇತ್ಯರ್ಥ ಗೊಂಡಿವೆ. ಮತ್ತು ೨ ಕೋಟಿ ೫೨ ಲಕ್ಷ ೪೫೫೧೧ ರೂ ಬ್ಯಾಂಕು, ಪುರಸಭೆ, ಗ್ರಾ.ಪಂ ಕರವಸೂಲಾತಿ, ಫೈನಾನ್ಸ, ಬಡ್ಡಿ ವ್ಯವಹಾರ ಸೇರಿದಂತೆ ಇಲಾಖೆಗಳಿಗೆ ಸಂದಾಯವಾಗಬಹುದಾದ ಹಣ ಸಂದಾಯವಾಗಿದೆ ಎಂದರು. ಈ ಬಾರಿ ಅದಕ್ಕೂ ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಈ ಅದಾಲತ್ ನಲ್ಲಿ ಹೊಲ, ಮನೆ, ಬ್ಯಾಂಕು, ಅಪಘಾತ, ಚೆಕ್ ಬೌನ್ಸ, ಜನನ, ಸಹಕಾರಿ, ಸಣ್ಣ ಪುಟ್ಟ ಗಲಾಟೆ, ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ವಿಚಾರಣೆ ಮಾಡುವದರ ಮೂಲಕ ಅಂದೇ ಅಂತಿಮ ನಿರ್ಣಯದ ಮೂಲಕ ರಾಜಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಹಲವು ವರ್ಷಗಳ ಕಾಲ ಕಾನೂನು ಹೋರಾಟ ಮಾಡಿ ಒಬ್ಬರು ಗೆಲ್ಲುತ್ತಾರೆ, ಮತ್ತೊಬ್ಬರಿಗೆ ಸೋಲಾಗುತ್ತದೆ. ಆದರೆ ಅದಾಲತನಲ್ಲಿ ಇಬ್ಬರಿಗೂ ತೃಪ್ತಿಯಾಗುವ ತೀರ್ಮಾನ ಮಾಡಲಾಗುತ್ತದೆ. ಲೋಕ್ ಅದಾಲತನಲ್ಲಿ ರಾಜಿಯಾದ ಪ್ರಕರಣಗಳ ಆದೇಶ ಅಂತಿಮವಾಗಿರುತ್ತದೆ. ಕಡಿಮೆ ಖರ್ಚಿನಲ್ಲಿ ಶೀಘ್ರ ಇತ್ಯರ್ಥ್ಯ ಪಡಿಸಿಕೊಳ್ಳಲು ಅವಕಾಶವಿದೆ.
ನೇರವಾಗಿಯೂ ಭಾಗವಹಿಸಬಹುದು. ಇಬ್ಬರಿಗೂ ತೃಪ್ತಿಯಾದರೆ ಮಾತ್ರ ಇತ್ಯರ್ಥ ಮಾಡುತ್ತೇವೆ. ಮತ್ತೆ ಮೇಲ್ಮನವಿಗೆ ಅವಕಾಶ ಇರುವದಿಲ್ಲ. ಕೌಟುಂಬಿಕ ಕಲಹಗಳನ್ನು ರಾಜಿ ಸಂಧನದ ಮೂಲಕ ಇತ್ಯರ್ಥ ಪಡಿಸಲು ಪ್ರಯತ್ನಿಸಲಾಗುವದು ಎಂದು ಕೋಟೆಪ್ಪ ಕಾಂಬಳೆ ಹೇಳಿದರು. ದಿವಾನಿ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ ಸುನೀಲಕುಮಾರ ಉಪಸ್ಥಿತರಿದ್ದರು.
ಇಂಡಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಶ್ರೇಣ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳು ಶ್ರೀ ಕೋಟೆಪ್ಪ ಕಾಂಬಳೆ ಮಾತನಾಡಿದರು