ಇಂಡಿ | ವಿದ್ಯುತ್ ನಾಲ್ಕು ಉಪಕೇಂದ್ರ ಮಂಜೂರು
ಇಂಡಿ :ಕರ್ನಾಟಕ ವಿದ್ಯುತ್ ಪ್ರಸಾರ ನಿಗಮದಿಂದ ತಾಲೂಕಿನ ನಾಲ್ಕು ಕಡೆ ೧೧೦ ಕೆ.ವಿ ಉಪಕೇಂದ್ರಗಳಿಗೆ ಮಂಜೂರಾತಿ ದೊರೆತಿದೆ ಎಂದು ಕಾರ್ಯ ನಿರ್ವಾಹಕ ಅಭಿಯಂತರ ಎಸ್.ಎ.ಬಿರಾದಾರ ಮತ್ತು ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರ ಎಸ್.ಆರ್.ಮೆಡೆಗಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಶಿರಗೂರ ಇನಾಂ, ತಾಂಬಾ, ಹಡಲಸಂಗ ಮತ್ತು ಅಗಸನಾಳಗಳಲ್ಲಿ ಮಂಜುರಾತಿ ಆಗಿವೆ. , ನಿಂಬಾಳ ೧೧೦ ಕೆ.ವಿ ಉಪಕೇಂದ್ರ ಪ್ರಗತಿ ಹಂತದಲ್ಲಿದೆ.
ಕೇAದ್ರ ಸ್ಥಾಪನೆಗೆ ಖಾಸಗಿಯವರಿಂದ ಜಾಗ ಪಡೆಯಲಾಗಿದೆ. ತಾಂತ್ರಿಕ ತಂಡದಿAದ ಜಾಗ ಪರಿಶೀಲನೆ ಮಾತ್ರ ಬಾಕಿ ಇದೆ. ಪ್ರಕ್ರಿಯೆ ಟÀಂಡರ್ ಹಂತದಲ್ಲಿದೆ. ಹಂತ ಹಂತವಾಗಿ ಕಾಮಗಾರಿ ಆರಂಭಿಸಲು ಗಮನ ಹರಿಸಲಾಗುವುದು ಎಂದರು.
ಈಗಾಗಲೇ ಇಂಡಿ ಎರಡು , ಹಿರೇಬೇವನೂರ, ಲಚ್ಯಾಣ, ಅಥರ್ಗಾ, ತಡವಲಗಾ, ನಾದ ಕೆಡಿ, ತಾಂಬಾ , ಝಳಕಿ, ,ಹೋರ್ತಿ, ರೋಡಗಿ, ಮಸಳಿ, ನಿಂಬಾಳ, ಸಾತಲಗಾಂವ ಕ್ರಾಸ್,ಬೆರುಣಗಿ ೧೧೦ ಕೆ.ವಿ ಕೇಂದ್ರಗಳು ಈಗಾಗಲೇ ಚಾಲ್ತಿಯಲ್ಲಿವೆ. ರಾಜ್ಯದಲ್ಲಿಯೇ ವಿಜಯಪೂರಕ್ಕೆ ಹೆಚ್ಚು ಕೇಂದ್ರಗಳು ಮಂಜೂರಾಗಿದ್ದು ಇಂಡಿ ತಾಲೂಕು ರಾಜ್ಯದಲ್ಲಿಯೇ ಅತೀ ಹೆಚ್ಚು ಉಪಕೇಂದ್ರ ಮಂಜುರಾತಿ ಪಡೆದು ಪ್ರಥಮ ಸ್ಥಾನದಲ್ಲಿದೆ ಎಂದರು.
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರು ಮತ್ತು ಕರ್ನಾಟಕ ವಿದ್ಯುತ್ ಪ್ರಸಾರ ನಿಗಮ ಇವರ ಪ್ರಯತ್ನದಿಂದ ಇಂಡಿ ತಾಲೂಕಿಗೆ ನಾಲ್ಕು ಉಪಕೇಂದ್ರಗಳು ಮಂಜೂರಾಗಿವೆ ಎಂದರು. ಈ ಕಾರ್ಯದಲ್ಲಿ ಸಹಕರಿಸಿದ ಕೆಪಿಟಿಸಿಎಲ್ ಅಧಿಕಾರಿಗಳು ಹಾಗೂ ತಂಡದವರು ಮತ್ತು ಇಂಡಿಯ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ ಎಂದರು.
ಕೆಲವೆಡೆ ೩೩/೧೧ ಕೆ.ವಿ ಮತ್ತೆ ಕೆಲವೆಡೆ ೬೬/೧೧ ಕೆ.ವಿ ಕೇಂದ್ರ ಸ್ಥಾಪನೆಗೆ ಉದ್ದೇಶೀಸಲಾಗಿದೆ. ಉಪಕೇಂದ್ರ ಸ್ಥಾಪನೆಯಿಂದ ವೋಲ್ಟೇಜ್ ಸಮಸ್ಯೆ, ವಿದ್ಯುತ್ ಅಡಚಣೆ ಮೊದಲಾದ ತೊಡಕುಗಳು ಪರಿಹಾರವಾಗಲಿವೆ. ಕೃಷಿ, ತೋಟಗಾರಿಕೆ, ಕೈಗಾರಿಕೆ ಚಟುವಟಿಕೆಗಳಿಗೆ ಅನುಕೂಲವಾಗಲಿದೆ ಎಂದರು.