ವಿಜಯಪುರ: ಅಡುಗೆ ಅನಿಲ ಹಾಗೂ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಖಂಡಿಸಿ ನಗರದ ಡಿಸಿ ಕಚೇರಿಯ ಎದುರು ಜೆಡಿಎಸ್ ಕಾರ್ಯಕರ್ತರ ತಲೆ ಮೇಲೆ ಕಟ್ಟಿಗೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.
ದೇಶದಲ್ಲಿ ಕೊರೋನಾ ನಂತರ ನಿರುದ್ಯೋಗ ಪ್ರಮಾಣ ಹೆಚ್ಚಾಗಿದೆ. ಬಡವರು ತಮ್ಮ ಹೊಟ್ಟೆ ಪಾಡಿಗಾಗಿ ಪ್ರತಿನಿತ್ಯ ಕಷ್ಟಪಡುವಂತಾಗಿದೆ. ಇಂತಹ ಸಂದರ್ಭದಲ್ಲೂ ಕೇಂದ್ರ ಸರ್ಕಾರ ದುರಪಯೋಗವನ್ನು
ಪಡೆಸಿಕೊಂಡು ದಿನ ಬಳಕೆಯ ಅಡುಗೆ ಅನಿಲ ಹಾಗೂ ಪೆಟ್ರೋಲ್ ಡಿಸೇಲ್ ಬೆಲೆಯನ್ನು ಗಗನಕ್ಕೆ ಏರಿಸಿದ್ದು ಖಂಡನೀಯ ಎಂದರು. ಅದಕ್ಕಾಗಿ ಕೂಡಲೇ ಬೆಲೆ ಏರಿಕೆ ಇಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.