ರಾಯಚೂರು: ಅಂತರ್ ವಿಶ್ವವಿದ್ಯಾಲಯದ ಕರಾಟೆ ತಂಡಕ್ಕೆ ನಗರದ SSRG ಮಹಿಳಾ ಕಾಲೇಜಿನ ವಿದ್ಯಾರ್ಥಿನಿ ಕೆ ಮಂಜುಳಾ ಆಯ್ಕೆಯಾಗಿ ವಿಶ್ವವಿದ್ಯಾಲಯಕ್ಕೆ ನಗರಕ್ಕೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಆಡಳಿತ ಮಂಡಳಿ ಸಂತಸ ವ್ಯಕ್ತಪಡಿಸಿದೆ.
ಹೌದು ನಗರದ ಪ್ರತಿಷ್ಠಿತ ತಾರಾನಾಥ ಶಿಕ್ಷಣ ಸಂಸ್ಥೆಯ, ಸೋಮ ಸುಭಧ್ರಮ್ಮ ರಾಮನಗೌಡ ಮಹಿಳಾ ಮಹಾವಿದ್ಯಾಲಯದ ಬಿ.ಎ ಪ್ರಥಮ ವರ್ಷದ ವಿದ್ಯಾರ್ಥಿನಿ ಕುಮಾರಿ. ಕೆ.ಮಂಜುಳಾ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕರಾಟೆ ತಂಡದ ಆಯ್ಕೆ ಪ್ರಕ್ರೀಯೆಯಲ್ಲಿ ಬಾಗವಹಿಸಿ ಅಂತರ್ ವಿಶ್ವವಿದ್ಯಾಲಯದ ಕರಾಟೆ ತಂಡಕ್ಕೆ ಆಯ್ಕೆಯಾಗಿ ವಿಶ್ವವಿದ್ಯಾಲಯಕ್ಕೆ ನಗರಕ್ಕೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.
ಮಾರ್ಚ್ ೧೪ ರಿಂದ ೧೭ ರ ವರೆಗೆ ನಡೆಯಲಿರುವ ಕುರುಕ್ಷೇತ್ರ ವಿಶ್ವವಿದ್ಯಾಲಯ, ಕುರುಕ್ಷೇತ್ರದಲ್ಲಿ (ಹರಿಯಾಣ) ನಡೆಯುವ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಬಾಗವಹಿಸಲಿದ್ದು, ಇವರಿಗೆ ತಾರಾನಾಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಪಾರಸ್ಮಲ್ ಸುಖಾಣಿ, ಪ್ರಧಾನ ಕಾರ್ಯದರ್ಶಿಗಳಾದ ಮಸ್ಕಿ ನಾಗರಾಜ, ವಕೀಲರು, ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಮಲ್ಲಿಕಾರ್ಜುನ, ವಕೀಲರು, ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ರತಿಲಾಲ್ ಪಟೇಲ್, ಹಾಗೂ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರಾದ ಸತ್ಯನಾರಾಯಣ, ಉಪ ಪ್ರಾಚಾರ್ಯರಾದ ಡಾ.ವೆಂಕಟಪ್ಪ ನಾಯಕ್, ದೈಹಿಕ ನಿರ್ದೇಶಕರಾದ ಮಲ್ಲಿಕಾರ್ಜುನ ಎನ್, ಮಹಾವಿದ್ಯಾಲಯದ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.