ಕನ್ನಡಪ್ರಭ ವರದಿಗಾರ ಖಾಜು ಸಿಂಗೆಗೋಳ ರಾಜ್ಯ ಮಟ್ಟದ ಬಸವಚೇತನ ಪ್ರಶಸ್ತಿಗೆ ಆಯ್ಕೆ
ಇಂಡಿ : ಕನ್ನಡಪ್ರಭ ಇಂಡಿ ತಾಲೂಕ ವರದಿಗಾರ ಖಾಜು ಸಿಂಗೆಗೋಳ ಅವರು ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅಮ್ಮ ಫೌಂಡೇಶನ್ ವತಿಯಿಂದ ಜು.6 ರಂದು ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ಜರುಗಲಿರುವ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವದಲ್ಲಿ ಸಾಧಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ಹಲವು ವರ್ಷಗಳಿಂದ ಮಾಧ್ಯಮ ಕ್ಷೇತ್ರಗಳಲ್ಲಿ ತಮ್ಮದೆ ಆದ ನಿಸ್ವಾರ್ಥ ಸೇವೆ ಸಲ್ಲಿಸಿ, ಎಲೆಮರೆ ಕಾಯಿಯಂತೆ ಸಮಾಜಮುಖಿಯಾಗಿರುವ ಖಾಜು ಸಿಂಗೆಗೋಳ ಅವರನ್ನು ರಾಜ್ಯಮಟ್ಟದ ಪ್ರಶಸ್ತಿ ನೀಡಿ ಗೌರವಿಸಲು ಹೆಮ್ಮೆ ಎನಿಸುತ್ತಿದೆ. ನಾಡಿನ ಶ್ರೇಷ್ಠ ಸಾಹಿತಿಗಳು, ಜನಪ್ರತಿನಿಧಿಗಳು, ಅಧಿಕಾರಿಗಳು ಬಸವ ಚಿಂತಕರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ ಅಮ್ಮ ಫೌಂಡೇಶನ್ ಸಂಚಾಲಕ ಕಬೂಲ್ ಕೊಕಟನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.