• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result
    • Home
    • ಸಂಪಾದಕೀಯ
    • ಸುದ್ದಿ
      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

      ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      Trending Tags

      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಕ್ರೈಮ್‌
      • ಇತರೆ
      No Result
      View All Result
      voice of janata
      No Result
      View All Result
      Home ಸ್ಥಳೀಯ

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು

      By Basavaraj Kumbar

      June 29, 2026
      0
      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು
      0
      SHARES
      36
      VIEWS
      Share on FacebookShare on TwitterShare on whatsappShare on telegramShare on Mail

       

      ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು
      ———-

      ಕಾರಹುಣ್ಣಿಮೆ ಸಡಗರ; ಎತ್ತುಗಳ ಶೃಂಗಾರಕ್ಕೆ ರೈತರ ಭರದ ಸಿದ್ಧತೆ.

      ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು | ಸಂಪ್ರದಾಯ ಉಳಿಸಿಕೊಳ್ಳಲು ರೈತರ ಒಲವು.

      ವಿಶೇಷ ವರದಿ: ಬಸವರಾಜ ಈ. ಕುಂಬಾರ

      ಮುದ್ದೇಬಿಹಾಳ: ಉತ್ತರ ಕರ್ನಾಟಕದ ರೈತರ ಪ್ರಮುಖ ಸಂಪ್ರದಾಯಿಕ ಹಬ್ಬವಾದ ಕಾರಹುಣ್ಣಿಮೆ ಆಚರಣೆಗೆ ತಾಲೂಕಿನ ರೈತರು ಭರದ ಸಿದ್ಧತೆ ನಡೆಸಿದ್ದಾರೆ. ಎತ್ತುಗಳು ಹಾಗೂ ಇತರೆ ಜಾನುವಾರುಗಳನ್ನು ಸಿಂಗರಿಸಲು ಅಗತ್ಯವಿರುವ ಅಲಂಕಾರಿಕ ಸಾಮಗ್ರಿಗಳನ್ನು ಖರೀದಿಸಲು ಭಾನುವಾರ ಮುದ್ದೇಬಿಹಾಳ ಪಟ್ಟಣ ಸೇರಿದಂತೆ ತಾಳಿಕೋಟೆ ಹಾಗೂ ನಾಲತವಾಡದ ಮಾರುಕಟ್ಟೆಗಳಿಗೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಹಬ್ಬದ ಸಂಭ್ರಮದಿಂದ ಮಾರುಕಟ್ಟೆಯಲ್ಲಿ ವ್ಯಾಪಾರವೂ ಚುರುಕುಗೊಂಡಿತ್ತು.

      ಕೃಷಿಯಲ್ಲಿ ಟ್ರ್ಯಾಕ್ಟರ್ ಹಾಗೂ ಆಧುನಿಕ ಯಂತ್ರೋಪಕರಣಗಳ ಬಳಕೆ ಹೆಚ್ಚುತ್ತಿರುವುದರಿಂದ ಎತ್ತುಗಳ ಬಳಕೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಇದರಿಂದ ಕಾರಹುಣ್ಣಿಮೆಯ ಹಿಂದಿನ ವೈಭವವೂ ಸ್ವಲ್ಪ ಮಂಕಾಗಿದೆ. ಆದರೂ ರೈತರು ತಮ್ಮ ಪೂರ್ವಜರಿಂದ ಬಂದಿರುವ ಸಂಪ್ರದಾಯವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಬ್ಬವನ್ನು ಎಂದಿನಂತೆ ಆಚರಿಸಲು ಸಜ್ಜಾಗಿದ್ದಾರೆ.
      ಕಾರಹುಣ್ಣಿಮೆಯ ದಿನ ಎತ್ತುಗಳನ್ನು ಬೆಳಗ್ಗೆಯೇ ಸ್ವಚ್ಛವಾಗಿ ಸ್ನಾನ ಮಾಡಿಸಿ, ಕೊಂಬುಗಳಿಗೆ ಬಣ್ಣ ಬಳಿದು, ಗೊಂಡೆ, ಕರಿದಾರ ಹಗ್ಗ, ದಾಂಡ, ಗಂಟೆ, ಕಾಲುಗೆಜ್ಜೆ, ಹುರಿಗೆಜ್ಜೆ, ಮೂಗುದಾರ, ಮುಗಡಾ ಸೇರಿದಂತೆ ವಿವಿಧ ಅಲಂಕಾರಿಕ ವಸ್ತುಗಳಿಂದ ಶೃಂಗರಿಸಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬಳಿಕ ಎತ್ತುಗಳಿಗೆ ವಿಶೇಷ ಆಹಾರ ನೀಡಿ ಗ್ರಾಮಗಳಲ್ಲಿ ಮೆರವಣಿಗೆ ನಡೆಸುವುದು, ಕರಿ ಹರಿಯುವ ಸಂಪ್ರದಾಯ ಸೇರಿದಂತೆ ವಿವಿಧ ಆಚರಣೆಗಳು ನಡೆಯುತ್ತವೆ.

      ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದಿದ್ದರೂ ರೈತರು ಹಬ್ಬದ ಸಂಭ್ರಮಕ್ಕೆ ಯಾವುದೇ ಕೊರತೆಯಾಗದಂತೆ ಹೊಸ ಅಲಂಕಾರಿಕ ಸಾಮಗ್ರಿಗಳನ್ನು ಖರೀದಿಸಿ ಸಿದ್ಧತೆ ನಡೆಸಿದ್ದಾರೆ. ಮುದ್ದೇಬಿಹಾಳ, ತಾಳಿಕೋಟೆ ಹಾಗೂ ನಾಲತವಾಡ ಮಾರುಕಟ್ಟೆಗಳಲ್ಲಿ ಹಳದಿ, ಕೆಂಪು, ಹಸಿರು, ಬಿಳಿ ಬಣ್ಣದ ವಾರ್ನಿಷ್, ಗೊಂಡೆ, ಸರ, ಗಂಟೆ, ಬಾರಕೋಲು, ಕರಿದಾರ ಹಗ್ಗ ಸೇರಿದಂತೆ ವಿವಿಧ ವಸ್ತುಗಳ ಖರೀದಿ ಜೋರಾಗಿತ್ತು.

      ರೈತ ಹಣಮಂತ ಕಾರಕೂರ ಮಾತನಾಡಿ, “ಕಾರಹುಣ್ಣಿಮೆ ರೈತರ ಪಾಲಿನ ಮೊದಲ ಹಬ್ಬ. ಪ್ರತಿ ವರ್ಷ ಹೊಸ ಅಲಂಕಾರಿಕ ವಸ್ತುಗಳನ್ನು ಖರೀದಿಸಿ ಎತ್ತುಗಳನ್ನು ಸಿಂಗರಿಸುತ್ತೇವೆ. ನಮ್ಮ ಗ್ರಾಮದಲ್ಲಿ ಸೋಮವಾರ 29 ರಂದು ಸಂಜೆ 5 ಗಂಟೆಗೆ ಕರಿ ಹರಿಯುವ ಸಂಪ್ರದಾಯ ನಡೆಯಲಿದೆ. ಎತ್ತುಗಳು ಆರೋಗ್ಯದಿಂದ ಇದ್ದರೆ ರೈತನ ಮನೆಯಲ್ಲಿ ಸಂತೋಷ ನೆಲೆಸಿರುತ್ತದೆ,” ಎಂದು ಹೇಳಿದರು.
      ಕೃಷಿಯಲ್ಲಿ ಯಾಂತ್ರೀಕರಣ ಹೆಚ್ಚಾದರೂ ಕಾರಹುಣ್ಣಿಮೆಯಂತಹ ಸಂಸ್ಕೃತಿ ಮತ್ತು ಸಂಪ್ರದಾಯಗಳು ಗ್ರಾಮೀಣ ಬದುಕಿನ ಅವಿಭಾಜ್ಯ ಅಂಗವಾಗಿವೆ. ಹೊಸ ತಲೆಮಾರಿಗೆ ಈ ಸಂಪ್ರದಾಯಗಳನ್ನು ಪರಿಚಯಿಸುವ ಕೆಲಸವನ್ನು ರೈತರು ಇಂದಿಗೂ ಮುಂದುವರಿಸಿಕೊಂಡು ಬಂದಿರುವುದು ವಿಶೇಷ.

      ಈ ವರ್ಷ ಮಳೆ ಕಡಿಮೆಯಾಗಿರುವುದರಿಂದ ಕೃಷಿ ಚಟುವಟಿಕೆಗಳು ಕುಂಠಿತವಾಗಿವೆ. ಎತ್ತುಗಳ ಬಳಕೆ ಕಡಿಮೆಯಾದ ಕಾರಣ ಹಿಂದಿನ ವರ್ಷಗಳಷ್ಟು ವ್ಯಾಪಾರವಾಗುತ್ತಿಲ್ಲ. ಇದರಿಂದ ಅಲಂಕಾರಿಕ ಸಾಮಗ್ರಿಗಳ ಮಾರಾಟಕ್ಕೂ ಹೊಡೆತ ಬಿದ್ದಿದೆ.

      ಮೈಹಿಬೂಬು ಕಲಬುರ್ಗಿ, ವ್ಯಾಪಾರಿ,ಮುದ್ದೇಬಿಹಾಳ

      ಸಂಪ್ರದಾಯ ಉಳಿದಿದೆ, ಬಳಕೆ ಕಡಿಮೆಯಾಗಿದೆ
      “ಟ್ರ್ಯಾಕ್ಟರ್ ಸೇರಿದಂತೆ ಆಧುನಿಕ ಯಂತ್ರಗಳ ಬಳಕೆ ಹೆಚ್ಚಿರುವುದರಿಂದ ಕೃಷಿಯಲ್ಲಿ ಎತ್ತುಗಳ ಬಳಕೆ ಕಡಿಮೆಯಾಗಿದೆ. ಆದರೂ ಕಾರಹುಣ್ಣಿಮೆಯಂದು ಎತ್ತುಗಳನ್ನು ಶೃಂಗರಿಸಿ ಪೂಜೆ ಸಲ್ಲಿಸುವ ಸಂಪ್ರದಾಯವನ್ನು ನಮ್ಮ ಕುಟುಂಬ ಇಂದಿಗೂ ಮುಂದುವರಿಸಿಕೊಂಡು ಬಂದಿದೆ. ಇದು ನಮ್ಮ ಕೃಷಿ ಸಂಸ್ಕೃತಿಯ ಪ್ರತೀಕವಾಗಿದೆ.
      – ಶಂಕರಗೌಡ ಶಿವಣಗಿ, ರೈತ, ಕಂದಗನೂರ

      Tags: #karahunnime#MLA Appaji Nadagoud#muddhebihall#ಇಂದಿನ ಸುದ್ದಿ#ಕಾರಹುಣ್ಣಿಮೆ ಸಂಭ್ರಮಕ್ಕೆ ಸಜ್ಜಾದ ರೈತರು; ಮಾರುಕಟ್ಟೆಯಲ್ಲಿ ಅಲಂಕಾರಿಕ ಸಾಮಗ್ರಿಗಳ ಖರೀದಿ ಜೋರು#ಜನತಾ ಧ್ವನಿ#ಜನತಾ ಧ್ವನಿ.ಇನ್#ರಾಜ್ಯ ಸುದ್ದಿ#ಸಾರ್ವಜನಿಕ ಸುದ್ದಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.