ಲಿಂಗಸೂಗೂರು: ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಮೋದಿ ಅವರ ಬಗ್ಗೆ ವಿಷದ ಹಾವು ಅಂತಾ ಹೇಳಿರುವದು ಸೋನಿಯಾ ಗಾಂಧಿ ಅವರ ಮನವೊಲಿಸಲು ಮಾತನಾಡುತ್ತಾರೆ. ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡುವದನ್ನು ಖರ್ಗೆ ಅವರು ಬಿಡಬೇಕು ಎಂದು ಮಾಜಿ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಹೇಳಿದರು.
ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೆ. ಹಿಂದೂ ಮುಸ್ಲಿಂ ಒಂದೇ ತಾಯಿ ಮಕ್ಕಳು ಎಂದು ಬಿಜೆಪಿ ಭಾವಿಸಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸ್ವ ಇಚ್ಚೆಯಿಂದ ರಾಜೀನಾಮೆ ಕೊಟ್ಟಿದ್ದೇನೆ. ನಾನು ಯಾರ ಒತ್ತಡಕ್ಕೂ ರಾಜೀನಾಮೆ ನೀಡಿಲ್ಲ.
ನಾನು ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಮಹಿಳೆಯರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ. ಅಲ್ಲದೆ ಲಿಂಗಸೂಗೂರು ಪಟ್ಟಣದಲ್ಲಿ ಎರಡು ಸಾವಿರ ಮಹಿಳೆಯರಿಗಾಗಿ ಗಾರ್ಮೆಂಟ್ಸ್ ತೆರಯಲಾಗುತ್ತದೆ.
ನನಗೆ ವಿಶ್ವಾಸವಿದೆ 40- 50 ಸಾವಿರ ಮತಗಳ ಅಂತರದಿಂದ ಮಾನಪ್ಪ ವಜ್ಜಲ್ ಗೆಲ್ತಾರೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನ ಬಿಜೆಪಿ ಗೆಲ್ಲಲಿದೆ.
ನನ್ನ ಮಗ ವಿಜೆಯೇಂದ್ರ ಶಿಕಾರಿಪುರದಲ್ಲಿ ಚುನಾವಣೆಗೆ ನಿಂತಿದ್ದಾನೆ. ಆದರೂ ನಾನು ಶಿಕಾರಿಪುರಕ್ಕೆ ಹೋಗದೇ ಬಿಜೆಪಿ ಅಭ್ಯರ್ಥಿಗಳ ಪರ ರಾಜ್ಯ ಪ್ರವಾಸ ಮಾಡು ತ್ತಿದ್ದೇನೆ. ಮೇ 13 ರಂದು ಲಿಂಗಸೂಗೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವಿಜಯೋತ್ಸವವನ್ನು ಆಚರಿಸಲಾಗುತ್ತದೆ ಎಂದು ಹೇಳಿದರು.