ಇಂಡಿ : ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ನೆಲ,ಜಲ ಮತ್ತು ವಸ್ತು ಪರಿಸ್ಥಿತಿಯ ಅವಲೋಕಿಸಿ ಕೆ ಆರ್ ಎಸ್ ಪಕ್ಷವು ಮುಂಬರುವ ವಿಧಾನಸಭಾ ಚುನಾವಣಾ ನಿಮತ್ಯವಾಗಿ ಪ್ರಣಾಳಿಕೆಯನ್ನು ಸಿದ್ದಪಡಿಸಿದೆ ಎಂದು ಇಂಡಿ ಮತ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಅಶೋಕ ಜಾಧವ ತಿಳಿಸಿದರು.
ಪಟ್ಟಣದ ಕೆ ಆರ್ ಎಸ್ ಪಕ್ಷದ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗಾಗಿ ಅವಶ್ಯವಿರುವ ಎಲ್ಲಾ ಯೋಜನೆಗಳನ್ನು ಸೃಷ್ಟಿಸಿ ಮತ್ತು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಜನಸಾಮಾನ್ಯರ, ಚಿಂತಕರ ಹಾಗೂ ತಜ್ಞರ ಜೊತೆ ಹಲವಾರು ಸಭೆಗಳು ಮತ್ತು ಸಂವಾದ ಗಳನ್ನು ನಡೆಸಿದ ನಂತರ ಪಕ್ಷವು ಪ್ರಣಾಳಿಕೆ ಸಿದ್ದಪಡಿಸಿದೆ ಎಂದರು.
ರಾಜ್ಯದಲ್ಲಿ ಬಡತನ ನಿವಾರಣೆಗಾಗಿ ಸಂಪೂರ್ಣ ಮದ್ಯ ನಿಷೇಧ, ಸಾಲ ಮುಕ್ತ ರೈತ, ಬಡತನ ಮುಕ್ತ ಹಳ್ಳಿಗಳಿಗಾಗಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಆರ್ಥಿಕತೆ ನಿರ್ಮಾಣ, ಉದ್ಯೋಗ ಸೃಷ್ಟಿ, ವೈಜ್ಞಾನಿಕ ಬೆಳೆ ಮತ್ತು ಬೆಲೆ ಪದ್ದತಿ ಜಾರಿ ಕೃಷಿ ಉತ್ಪನ್ನಗಳಿಗೆ ಗ್ರಾಮೀಣ ಭಾಗದಲ್ಲಿಯೇ ಮೌಲ್ಯವರ್ಧನೆಗೆ ಹಾಗೂ ಕೆರೆಗಳು ತುಂಬುವ ಮೂಲಕ ರೈತ ಸಹಕಾರಿ ಯೋಜನೆಗಳನ್ನು ರೂಪಿಸಲಾಗಿದೆ.
ಇನ್ನೂ ರಾಜ್ಯದ ನಿರುದ್ಯೋಗಿ ಪದವೀಧರರಿಗೆ ಕನಿಷ್ಠ 2ಸಾವಿರ ರೂಪಾಯಿ ಮಾಸಾಶನ, ನಿರುದ್ಯೋಗ ಭತ್ಯೆ ಇನ್ನೂಳಿದ ಎಲ್ಲಾ ತರಹದ ಮಾಸಾಶಗಳನ್ನು ಕನಿಷ್ಠ 3 ಸಾವಿರ ರೂಪಾಯಿಗಳಿಗೆ ಏರಿಕೆ ಮಾಡಲಾಗುವುದು. ಅದಲ್ಲದೇ ಕನ್ನಡಿಗರಿಗೆ ಪ್ರಥಮ ಆದ್ಯತೆ ಕೊಟ್ಟು, ಪ್ರಸ್ತುತ ಖಾಲಿ ಇರುವ 3 ಲಕ್ಷ ಸರಕಾರಿ ಹುದ್ದೆಗಳನ್ನು ಒಂದು ವರ್ಷದೊಳಗೆ ಭರ್ತಿ ಮಾಡಲಾಗುವುದು.ನಮ್ಮ ಮಾತೃಭಾಷೆ ನ್ಯಾಯಾಂಗ ಸೇರಿದಂತೆ ಆಡಳಿತದ ಎಲ್ಲಾ ಕ್ಷೇತ್ರದಲ್ಲಿಯೂ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ನೀಡುವುದು. ನಾಗರಿಕರಿಗೆ ಸರಕಾರಿ ಸೇವೆ ಮತ್ತು ಸೌಲಭ್ಯ ಸರಿಯಾಗಿ ಸರಿಯಾದ ಸಮಯಕ್ಕೆ ಭ್ರಷ್ಟಾಚಾರ ಮುಕ್ತವಾಗಿ ಮತ್ತು ಪಾರದರ್ಶಕವಾಗಿ ಆಡಳಿತ ನೀಡಲು ಲೋಕಾಯುಕ್ತ ಬಲಪಡಿಸಲು ಕ್ರಮಕೈಗೊಳ್ಳಲಾಗುವುದು. ಪ್ರತಿ ಹಂತದಲ್ಲೂ ಉತ್ತಮ ಗುಣಮಟ್ಟದ ಉಚಿತ ಶಿಕ್ಷಣ ಹಾಗೂ ತಾಲೂಕಿಗೊಂದು ಸರಕಾರಿ ಮಲ್ಟಿ ಸ್ಷಷಾಲಿಟಿ ಆಸ್ಪತ್ರೆ, ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿರ್ಮಾಣದ ಯೋಜನೆ ರೂಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ತಾಲೂಕಾ ಅಧ್ಯಕ್ಷ ಸುರೇಂದ್ರ ಕುಸನಾಳೆ, ಯುವಘಟಕ ಅಧ್ಯಕ್ಷ ಭೀಮಾಶಂಕರ ಕಾಂಬಳೆ, ರೈತ ಘಟಕ ಅಧ್ಯಕ್ಷ ಈರಣ್ಣ ತೇಲಿ,
ಸಮಾಜ ಜಾಲತಾಣದಲ್ಲಿ ಉಪಾಧ್ಯಕ್ಷ ಮಲ್ಲಿಕಾರ್ಜುನ ಬಿರಾದಾರ,ಸಂಘಟನಾ ಕಾರ್ಯದರ್ಶಿ ಮುತ್ತುರಾಜ ಹೊನ್ನಗೊಂಡ, ಉಮೇಶ್ ತಳವಾರ, ಮತ್ತು ಸುರೇಶ ನಿಂಬೋಣಿ ಹಾಗೂ ಎಲ್ಲ ಕೆ ಆರ್ ಎಸ್ ಪಕ್ಷದ ಸೈನಿಕರು ಮತ್ತಿತರು ಉಪಸ್ಥಿತರಿದ್ದರು.