ಕೂಡ್ಲಿಗಿ | ವಿವಿದ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಬಿಸಿಯೂಟ ತಯಾರಕರಿಂದ ಸರ್ಕಾರಕ್ಕೆ ಪತ್ರ
ವಿಜಯನಗರ : ಜಿಲ್ಲೆ ಕೂಡ್ಲಿಗಿ : ಪಟ್ಟಣದಲ್ಲಿ ಎಐಟಿಯುಸಿ ನೇತೃತ್ವದಲ್ಲಿ , ತಾಲೂಕಿನ ಬಿಸಿಯೂಟ ಕಾರ್ಯಕರ್ತೆಯರು. ತಮ್ಮ ಹತ್ತಾರು ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ , ಜೂನ್ 20ರಂದು ಮುಖ್ಯಮಂತ್ರಿಗಳಿಗೆ , ತಹಶಿಲ್ದಾರರ ಮುಖಾಂತರ ಹಕ್ಕೊತ್ತಾಯ ಪತ್ರ ನೀಡಿದ್ದಾರೆ. ಅವರು ಪಟ್ಟಣದ ಮಹಾತ್ಮಗಾಂಧಿ ರಾಷ್ಟ್ರೀಯ ಸ್ಮಾರಕದಿಂದ ಪ್ರತಿಭಟನೆ ಮೆರವಣಿಗೆ ಪ್ರಾರಂಭಿಸಿ , ಪಟ್ಟಣದ ಪ್ರಮುಖ ಬೀದಿಗಳು ಹಾಗೂ ವೃತ್ತಗಳ ಮೂಲಕ ಸಾಗಿ. ತಾಲೂಕು ಆಡಳಿತ ಸೌಧದ ತಲುಪಿ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ , ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ನಂತರ ಮುಖಂಡರಾದ ಹೆಚ್.ವೀರಣ್ಣ ನೇತೃತ್ವದಲ್ಲಿ , ತಹಶಿಲ್ದಾರರಾದ ವಿ.ಕೆ.ನೇತ್ರಾವತಿ ಯವರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೇಡರೇಷನ್ , ತಾಲೂಕು ಪದಾಧಿಕಾರಿಗಳು ವಿವಿದ ಘಟಕಗಳ ಪದಾಧಿಕಾರಿಗಳು ನೂರಾರು ಸದಸ್ಯರು ಭಾಗವಹಿಸಿದ್ದರು. ಆಕ್ಷರ ದಾಸೋಹ ಇಲಾಖಾಧಿಕಾರಿಗಳು ಹಾಜರಿದ್ದರು.
ವಿ.ಜಿ.ವೃಷಭೇಂದ್ರ ಕೂಡ್ಲಿಗಿ – 9008937428 / 8151937428










