ಇಂಡಿಯಲ್ಲಿ ಕುವೆಂಪು ಓದು ಕಮ್ಮಟ, ಡಾ. ಚನ್ನಪ್ಪ ಕಟ್ಟಿ ಹೇಳಿದ್ದೇನು..?
ಇಂಡಿ: ಕುವೆಂಪು ಅವರು ಕನ್ನಡ ನಾಡಿನ ಅಸ್ಮಿತೆಯಂತಿದ್ದರು, ಅವರ ಬರಹಗಳನ್ನು ಕಾಲೇಜು ವಿದ್ಯಾರ್ಥಿಗಳಿಗೆ ತಲುಪಿಸುವಲ್ಲಿ ಕುವೆಂಪು ಓದು ಕಮ್ಮಟ ಸಹಕಾರಿಯಾಗಲಿದ್ದು ಅವರ ಕೃತಿಗಳ ಮರುಓದು ಹೊಸವಿಚಾರಗಳನ್ನು ನೀಡುತ್ತದೆ ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಚನ್ನಪ್ಪ ಕಟ್ಟಿ ಹೇಳಿದರು.
ಅವರು ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್. ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ಪ್ರಾಧಿಕಾರದ ಸದಸ್ಯ ಜೆ. ಕರಿಯಪ್ಪ ಮಾಳಿಗೆ ಪ್ರಾಸ್ತಾವಿಕವಾಗಿ ಮಾತನಾಡಿ ಕುವೆಂಪು ಓದು ಕಮ್ಮಟವು ಈ ವರ್ಷದ ಕಾರ್ಯಕ್ರಮಗಳು ಇಂಡಿಯಿಂದಲೇ ಪ್ರಾರಂಭಿಸುತ್ತಿದ್ದೇವೆ, ಮುಂದಿನ ದಿನಗಳಲ್ಲಿ ಕರ್ನಾಟಕದಾದ್ಯಂತ ಭಾಷಾಭಾರತಿ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದರು. ಕರ್ನಾಟಕ ರಾಜ್ಯ ಮಹಿಳಾ ವಿವಿ ಸಿಂಡಿಕೇಟ್ ಸದಸ್ಯರಾದ ಪ್ರೊ.ಎಸ್.ಜೆ.ಮಾಡ್ಯಾಳ ಅವರು ವೇದಿಕೆಯಲ್ಲಿದ್ದರು. ಮೊದಲ ಗೋಷ್ಠಿಯಲ್ಲಿ ಕುವೆಂಪು ಅವರ ಕುವೆಂಪು ಅವರ ನಾಟಕಗಳು ಕುರಿತು ಸಂಶೋಧಕ ಡಾ. ಎಸ್.ಕೆ.ಕೊಪ್ಪಾ ಉಪನ್ಯಾಸ ನೀಡಿದರು. ೨ನೇ ಗೋಷ್ಠಿಯಲ್ಲಿ ಕುವೆಂಪು ಅವರ ವೈಚಾರಿಕ ಬರಹಗಳು ಕುರಿತು ಶಹಾಪುರದ ವಿಮರ್ಶಕ ಸಿ.ಎಸ್.ಬೀಮರಾಯ ಉಪನ್ಯಾಸ ನೀಡಿ ಕುವೆಂಪು ಅವರು ವೈಚಾರಿಕ ಪ್ರಜ್ಞೆಯನ್ನು ತಮ್ಮ ಬರಹಗಳಲ್ಲಿ ಮಾತು ನಡೆಯೆ ಮೂಲಕ ಮಾಡಿದ್ದಾರೆ ಎಂದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ರಾಘವೇಂದ್ರ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ೨೫ ಕ್ಕೂ ಹೆಚ್ಚು ವಿದ್ಯಾರ್ಥಿ, ವಿದ್ಯಾರ್ಥಿನೀಯರು ಕಮ್ಮಟದ ಶಿಬಿರಾರ್ಥಿಗಳಾಗಿ ಭಾಗವಹಿಸಿ ಕುವೆಂಪು ಓದು ಮತ್ತು ವಿಶ್ಲೇಷಣೆ ಮಾಡಿದರು. ಕಾರ್ಯಕ್ರಮದ ಸಂಯೋಜಕ ಡಾ.ರಮೇಶ ಎಸ್. ಕತ್ತಿ ಸ್ವಾಗತಿಸಿದರು. ಕವೀಂದ್ರ ಚಾಬಕಸವಾರ ನಿರೂಪಿಸಿದರು. ಪ್ರೊ. ಕಾಶೀನಾಥ ಜಾಧವ ವಂದಿಸಿದರು.
ಪ್ರೊ. ಕಿರಣಕುಮಾರ ರೇವಣಕರ,ಡಾ.ತ್ರಿವೇಣ ಬನಸೋಡೆ, ಪ್ರೊ. ಸಂತೋಷ ಗೊರನಾಳ, ಪ್ರೊ.ರವಿಕುಮಾರ ಅರಳಿ ಮೊದಲಾದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳೊಂದಿಗೆ ಸಂವಾದ: ೨೫ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುವೆಂಪು ಅವರ ಬರಹಗಳ ಕುರಿತಾಗಿ ಉಪನ್ಯಾಸಕರೊಂದಿಗೆ ಸಂವಾದ ನಡೆಸಿರುವುದು ವಿಶೇಷವಾಗಿತ್ತು.
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಬೆಂಗಳೂರು ಹಾಗೂ ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕುವೆಂಪು ಓದು: ಕಮ್ಮಟವನ್ನು ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪ ಕಟ್ಟಿ ಅವರು ಉದ್ಘಾಟಿಸಿದರು.



















