ಮುದ್ದೇಬಿಹಾಳ: ಪಟ್ಟಣದ ಹಡಲಗೇರಿ ರಸ್ತೆಯ ಸರ್ಕಾರಿ ಆಸ್ಪತ್ರೆ ಸಮೀಪವಿರುವ ಶ್ರೀ ಪವಾಡ ಬಸವೇಶ್ವರ ಆಶ್ರಮದಲ್ಲಿ ಶ್ರೀ ಬಸಪ್ಪ ಶರಣರ ದೇವಸ್ಥಾನ ನಿರ್ಮಾಣ ಕಾರ್ಯಕ್ಕಾಗಿ ಭಕ್ತರಿಂದ ಸಂಗ್ರಹಿಸಿದ 1,01,000 ರೂ. (ಒಂದು ಲಕ್ಷದ ಒಂದು ಸಾವಿರ) ಮೊತ್ತದ ದೇಣಿಗೆಯನ್ನು ಸಮರ್ಪಿಸಲಾಯಿತು.
ಶ್ರೀ ಶಂಕರಲಿಂಗ ಮಹಾರಾಜರು ತಮ್ಮ ಭಕ್ತರಿಂದ ಸಂಗ್ರಹಿಸಿದ ಈ ಮೊತ್ತವನ್ನು ಆಶ್ರಮದ ಅಭಿವೃದ್ಧಿ ಕಾರ್ಯಗಳಿಗಾಗಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಆಶ್ರಮದ ಮುಖಂಡರು, ದೇವಸ್ಥಾನದ ಕಟ್ಟಡ ನಿರ್ಮಾಣಕ್ಕೆ ನೆರವಾದ ಮಹಾರಾಜರಿಗೆ ಹಾಗೂ ಅವರ ಭಕ್ತ ಸಮೂಹಕ್ಕೆ ಕೋಟಿ ಕೋಟಿ ನಮನಗಳನ್ನು ಸಲ್ಲಿಸಿದರು.
ಶ್ರೀ ಪವಾಡ ಬಸವೇಶ್ವರ ಆಶ್ರಮದ ಅಧ್ಯಕ್ಷರು ಮತ್ತು ಸದಸ್ಯರು ಈ ಪುಣ್ಯ ಕಾರ್ಯದಲ್ಲಿ ಸಹಕರಿಸಿದ ಎಲ್ಲ ಗಣ್ಯರನ್ನು ಮತ್ತು ಭಕ್ತರು ಹೃತ್ಪೂರ್ವಕವಾಗಿ ಸ್ವಾಗತಿಸಿ, ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಆಶ್ರಮದ ಪ್ರಮುಖರು, ಭಕ್ತಾದಿಗಳು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
© 2026 VOJNews - Powered By Kalahamsa Infotech Private Limited.