ಲಿಂಗಸಗೂರ: ತಾಲೂಕಿನ ಹೂನೂರು ಗ್ರಾಮದ ಹೊರ ವಲಯದಲ್ಲಿ ಚಿರತೆ ಪ್ರತ್ಯಕ್ಷಯಾದ ಹಿನ್ನಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.
ಹೂನೂರು ಗ್ರಾಮದ ಹಳ್ಳದ ಹತ್ತಿರ ವಿರುವ ಅಮ್ಮನಕಟ್ಟೆಯಲ್ಲಿ ಸೋಮವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಚಿರತೆ ನಾಯಿ ಮೇಲೆ ದಾಳಿಗೆ ಮುಂದಾಗಿದೆ. ನಾಯಿಗಳು ತಪ್ಪಿಸಿಕೊಂಡಿವೆ.
ಇನ್ನು ಚಿರತೆ ಹಳ್ಳದ ದಂಡೆಯ ಕಡೆ ಓಡಿ ಹೋಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ರೈತರು ಭಯಗೊಂಡು ಜಮೀನುಗಳಿಗೆ ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಹೂನೂರು ಸುತ್ತಲಿನ ಗ್ರಾಮಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೇರಿಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.